![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 11, 2021, 4:45 PM IST
ಬೆಂಗಳೂರು: ಕೈಗಾರಿಕಾ ನೀತಿ, ಸ್ಟಾರ್ಟ್ಅಪ್ ನೀತಿ ಬಂದಾಯ್ತು. ಈಗ ‘ಉದ್ಯೋಗ ನೀತಿ’ಅಸ್ತಿತ್ವಕ್ಕೆ ಬರಲಿದೆ. ದೇಶದಲ್ಲಿ ಇಂತಹದ್ದೊಂದು ನೀತಿ ಜಾರಿಗೊಳಿಸುತ್ತಿರುವ ಮೊದಲ ರಾಜ್ಯ ಕರ್ನಾಟಕ ಆಗಿದೆ.
ರಾಜ್ಯದಲ್ಲಿ ಈಗಾಗಲೇ ಸೆಮಿಕಂಡಕ್ಟರ್, ಸ್ಟಾರ್ಟ್ಅಪ್, ಕೈಗಾರಿಕೆಗೆ ಸಂಬಂಧಿಸಿದ ನೀತಿಗಳು ಜಾರಿಯಲ್ಲಿವೆ. ಈಗ ಸರ್ಕಾರ ಇನ್ನೂ ಒಂದು ಹೆಜ್ಜೆ ಮುಂದೆಹೋಗಿ ‘ಉದ್ಯೋಗ ನೀತಿ’ ಜಾರಿಗೊಳಿಸುತ್ತಿದೆ. ಇದರಡಿ ಹೆಚ್ಚು ಉದ್ಯೋಗ ನೀಡಿದವರಿಗೆ ಸರ್ಕಾರ ಅಧಿಕ ಪ್ರೋತ್ಸಾಹಧನ ನೀಡಿ ಉತ್ತೇಜಿಸಲಿದೆ. ದೇಶದಲ್ಲಿ ಇದೇ ಮೊದಲ ಬಾರಿ ಉದ್ಯೋಗ ನೀತಿ ಜಾರಿಗೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ನಗರದ ಅರಮನೆ ಆವರಣದಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಸೋಮವಾರ ಹಮ್ಮಿಕೊಂಡಿದ್ದ ‘ಉದ್ಯಮಿಯಾಗು ಉದ್ಯೋಗ ನೀಡು’ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಇದನ್ನೂ ಓದಿ:ಸತ್ಯ ಗೊತ್ತಾದ ಮೇಲೆ, ಆಕ್ರೋಶದ ಕಟ್ಟೆ ಒಡೆಯಲಿದೆ: ಎಚ್.ಕೆ.ಪಾಟೀಲ್
ಉದ್ಯೋಗ ನೀತಿಯ ಸಿದ್ಧತೆಗಳು ನಡೆದಿವೆ. ಶೀಘ್ರದಲ್ಲೇ ಇದು ಅಸ್ತಿತ್ವಕ್ಕೆ ಬರಲಿದೆ. ಜತೆಗೆ ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಆಂಡ್ ಡಿ)ಗೆ ಉತ್ತೇಜನ ನೀಡಲು ಕೂಡ ಒಂದು ಪ್ರತ್ಯೇಕ ನೀತಿ ರೂಪಿಸಲಾಗುತ್ತಿದೆ. ಕೈಗಾರಿಕೆ ಸೇರಿದಂತೆ ಪ್ರತಿ ಕ್ಷೇತ್ರದಲ್ಲಿ ಸಂಶೋಧನೆ ಮತ್ತು ಅಭಿವೃದ್ಧಿಗೆ ಒತ್ತು ನೀಡುವುದು ಇದರ ಮುಖ್ಯ ಉದ್ದೇಶ. ಇದರಿಂದ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ವಿಶ್ವಾಸ ಇದೆ. ಇದು ಸಹ ದೇಶದಲ್ಲಿ ಮೊದಲು ಎಂದು ಅವರು ಹೇಳಿದರು.
“ಇಡೀ ದೇಶದಲ್ಲೇ ಅತಿಹೆಚ್ಚು ನವೋದ್ಯಮಗಳಿರುವುದು ಕರ್ನಾಟಕದಲ್ಲಿ! ದೇಶದಲ್ಲೇ ಮೊದಲ ಬಾರಿಗೆ ಆರ್ & ಡಿ ನೀತಿ, ಉದ್ಯೋಗ ನೀತಿಗಳನ್ನು ಕರ್ನಾಟಕ ಸರ್ಕಾರ ರೂಪಿಸುತ್ತಿದೆ. ಯುವಜನತೆಗೆ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಕರ್ನಾಟಕ ಅತ್ಯುತ್ತಮ ರಾಜ್ಯ” : ಮುಖ್ಯಮಂತ್ರಿ @BSBommai. pic.twitter.com/ljERYBsbqQ
— CM of Karnataka (@CMofKarnataka) October 11, 2021
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.