ತೇಜಸ್ವಿ ಸೂರ್ಯಗೆ ಪ್ರಧಾನಿ ಮುಂದೆ ಮಾತನಾಡಲು ನಾಲಿಗೆ ಸತ್ತು ಹೋಗಿದೆಯೇ? ಖಂಡ್ರೆ ಕಿಡಿ
Team Udayavani, May 5, 2021, 2:52 PM IST
ಬೆಂಗಳೂರು: ರಾಜ್ಯದಲ್ಲಿ 1041 ಮೆಟ್ರಿಕ್ ಟನ್ ಆಕ್ಸಿಜನ್ ಉತ್ಪಾದನೆ ಆಗುತ್ತಿದೆ. ಆದರೆ ಕೇಂದ್ರ ರಾಜ್ಯಕ್ಕೆ 815 ಮೆಟ್ರಿಕ್ ಟನ್ ಮಾತ್ರ ಮಂಜೂರು ಮಾಡುತ್ತದೆ. ರಾಜ್ಯಕ್ಕೆ 1700 ಮೆಟ್ರಿಕ್ ಟನ್ ಆಕ್ಸಿಜನ್ ಅಗತ್ಯವಿದೆ. ಇದು ತೇಜಸ್ವಿ ಸೂರ್ಯ ಕಣ್ಣಿಗೆ ಕಾಣುತ್ತಿಲ್ಲವೇ. ಮಾಧ್ಯಮಗಳ ಮುಂದೆ ಜೋರಾಗಿ ಮಾತನಾಡುವ ಇವರಿಗೆ ಪ್ರಧಾನಿ ಮುಂದೆ ಮಾತನಾಡಲು ನಾಲಿಗೆ ಸತ್ತು ಹೋಗಿದೆಯೇ ಎಂದ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ತೇಜಸ್ವಿ ಸೂರ್ಯ ಅವರು, ಬಿಬಿಎಂಪಿ ವಾರ್ ರೂಂ ಅವ್ಯವಹಾರ ಬಯಲು ಮಾಡಿದ್ದಾರೆ. ಅದಕ್ಕೆ ಅಭಿನಂದನೆ. ಅಂದ ಹಾಗೆ ಬೆಂಗಳೂರಿನಲ್ಲಿ ಕೋವಿಡ್ ನಿರ್ವಹಣೆಗೆ 7 ಸಚಿವರು ಮತ್ತು ಒಬ್ಬ ರಾಜಕೀಯ ಕಾರ್ಯದರ್ಶಿ ಸೇರಿ ಅಷ್ಟದಿಗ್ಗಜರಿಗೆ ಹೊಣೆ ನೀಡಲಾಗಿತ್ತಲ್ಲ. ಈ ಅವ್ಯವಹಾರದಲ್ಲಿ ಅವರ ಪಾತ್ರ –ಪಾಲು ಎಷ್ಟು ಎಂಬುದನ್ನೂ ಬಹಿರಂಗಪಡಿಸಿ ಎಂದು ಸವಾಲೆಸೆದಿದ್ದಾರೆ.
ಇದನ್ನೂ ಓದಿ:ಚಾಮರಾಜನಗರ ಡಿಸಿ ಸರಿಯಾಗಿ ಆಕ್ಸಿಜನ್ ನಿರ್ವಹಣೆ ಮಾಡದೆ ನಮ್ಮ ಮೇಲೆ ಆರೋಪ : ರೋಹಿಣಿ ನಿಂಧೂರಿ
ರಾಜ್ಯದಲ್ಲಿ ರೆಮಿಡಿಸಿವೀರ್ ಮತ್ತು ಆಕ್ಸಿಜನ್ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ರೆಮಿಡಿಸಿವೀರ್ ನಕಲಿ ಔಷಧ ಜಾಲವೂ ಹುಟ್ಟಿಕೊಂಡಿದೆ. ಇದರ ಹಿಂದೆ ಆಳುವ ಪಕ್ಷದ ಯಾರ ಯಾರ ಕುಮ್ಮಕ್ಕು ಇದೆ ಎಂಬುದನ್ನೂ ತೇಜಸ್ವಿ ಸೂರ್ಯ ಬಹಿರಂಗ ಪಡಿಸುವರೇ ಎಂದು ಪ್ರಶ್ನಿಸಿದ್ದಾರೆ.
ಜನ ಪ್ರಾಣವಾಯು ಸಿಗದೆ ನಿತ್ಯ ಸಾಯುತ್ತಿದ್ದಾರೆ. ಕೋರ್ಟ್ ಕೂಡ ಛಾಟಿ ಬೀಸಿದೆ. ಈ ಬಗ್ಗೆ ತೇಜಸ್ವಿ ಸೂರ್ಯ ಸೇರಿದಂತೆ 25 ಸಂಸದರ ಧ್ವನಿ ಏಕೆ ಅಡಗಿ ಹೋಗಿದೆಯೇ ಉತ್ತರ ನೀಡಿ. ಕೇಂದ್ರದ ಗುಲಾಮಗಿರಿ, ಕಪಟ ನಾಟಕ ಬಿಟ್ಟು ರಾಜ್ಯದ ಜನರ ಪ್ರಾಣ ಉಳಿಸಲು ಕೇಂದ್ರದ ಮೇಲೆ ಒತ್ತಡ ಹೇರಿ ಎಂದು ಈಶ್ವರ್ ಖಂಡ್ರೆ ಟ್ವೀಟ್ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.