ಮತ್ತೆ ಬಿಜೆಪಿ ಸೇರ್ಪಡೆಗೆ ಕೆ.ಎಸ್‌. ಈಶ್ವರಪ್ಪ ಯತ್ನ

ಪಕ್ಷದ ಒಂದು ಬಣ, ಸಂಘ ಪರಿವಾರದ ನಾಯಕರ ಮೂಲಕ ಯತ್ನ ;ಯಡಿಯೂರಪ್ಪ ಬಣದ ತೀವ್ರ ವಿರೋಧ

Team Udayavani, Jun 22, 2024, 7:15 AM IST

ಮತ್ತೆ ಬಿಜೆಪಿ ಸೇರ್ಪಡೆಗೆ ಕೆ.ಎಸ್‌. ಈಶ್ವರಪ್ಪ ಯತ್ನ

ಬೆಂಗಳೂರು: ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್‌. ಈಶ್ವರಪ್ಪ ಅವರ ಸ್ವಗೃಹ ಪುನರ್‌ ಪ್ರವೇಶಕ್ಕೆ ಈಗ ಪಕ್ಷದ ತೆರೆಮರೆಯಲ್ಲಿ ಚಟುವಟಿಕೆ ಪ್ರಾರಂಭವಾಗಿದ್ದು, ರಾಷ್ಟ್ರೀಯ ವರಿಷ್ಠರಿಂದ ಇನ್ನೂ ಈ ಪ್ರಕ್ರಿಯೆಗೆ ಹಸುರು ನಿಶಾನೆ ದೊರೆತಿಲ್ಲ ಎಂದು ಹೇಳಲಾಗುತ್ತಿದೆ.

ಲೋಕಸಭಾ ಚುನಾವಣೆ ಫ‌ಲಿತಾಂಶ ಪ್ರಕಟವಾಗುತ್ತಿದ್ದಂತೆ ಪಕ್ಷದ ಒಂದು ಬಣ ಸಂಘ-ಪರಿವಾರದ ನಾಯಕರ ಮೂಲಕ ಈ ಪ್ರಕ್ರಿಯೆ ಪ್ರಾರಂಭಿಸಿದೆ. ಎಲ್ಲದಕ್ಕಿಂತ ಮುಖ್ಯವಾಗಿ ಖುದ್ದು ಈಶ್ವರಪ್ಪನವರೇ ಹಿರಿಯರ ಜತೆ ಈ ಅಭಿಪ್ರಾಯ ವ್ಯಕ್ತಪಡಿಸಿದ್ದು ವರಿಷ್ಠರು ಒಪ್ಪಿದರೆ ಶೀಘ್ರ ಘರ್‌ ವಾಪ್ಸಿ ನಿಶ್ಚಿತ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಬಿ.ಎಸ್‌. ಯಡಿಯೂರಪ್ಪ ಬಣ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು ಅಂದುಕೊಂಡಷ್ಟು ಸರಳವಾಗಿ ವಿವಾದ ಇತ್ಯರ್ಥವಾಗುವ ಸಾಧ್ಯತೆ ಕಡಿಮೆ.

ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧೆ ಮಾಡುವ ಮೂಲಕ ಈಶ್ವರಪ್ಪ ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ.

ಯಡಿಯೂರಪ್ಪ ಹಾಗೂ ಕುಟುಂಬ ವರ್ಗದ ವಿರುದ್ಧ ಏಕಪಕ್ಷೀಯ ವಾಗ್ಧಾಳಿ ನಡೆಸಿ ಆಡಳಿತಾರೂಢ ಕಾಂಗ್ರೆಸ್‌ಗೆ ಹಲವು ಅಸ್ತ್ರಗಳನ್ನು ಈಶ್ವರಪ್ಪ ನೀಡಿದ್ದಾರೆ.

ಹೀಗಾಗಿ ಅವರನ್ನು ಯಾವುದೇ ಕಾರಣಕ್ಕೂ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಬಾರದು ಎಂಬುದು ಈ ಬಣದ ವಾದ. ಸಂಘ-ಪರಿವಾರದಲ್ಲೂ ಯಡಿಯೂರಪ್ಪ ಪರ ಬ್ಯಾಟಿಂಗ್‌ ಮಾಡುವ ಹಿರಿಯರು ಈ ವಾದಕ್ಕೆ ಮನ್ನಣೆ ನೀಡುತ್ತಿದ್ದು ಈಶ್ವರಪ್ಪ ಪಕ್ಷೇತರ ಸ್ಪರ್ಧೆ ಮಾಡಿದ್ದು ಕೂಡ ಸ್ವಾರ್ಥಕ್ಕಾಗಿಯೇ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಅದೇ ರೀತಿ ಯಡಿಯೂರಪ್ಪ ಬೇರೆ ಪಕ್ಷ ಮಾಡಿರಲಿಲ್ಲವೇ? ಎಂಬ ಮಾತು ಕೇಳಿ ಬಂದಿದೆ.

ಸಂತೋಷ್‌ ಅಸಮಾಧಾನ?
ಈ ಎರಡೂ ವಾದಗಳು ಏನೇ ಇದ್ದರೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಈ ಬಗ್ಗೆ ನಿರ್ಣಯ ತೆಗೆದುಕೊಳ್ಳಬೇಕಿದೆ. ಬಿಜೆಪಿ ರಾಷ್ಟ್ರೀಯ ಸಂಘಟನ ಪ್ರಧಾನ ಕಾರ್ಯದರ್ಶಿ ಬಿ.ಎಲ್‌. ಸಂತೋಷ್‌, ಈಶ್ವರಪ್ಪ ಪರ ನಿಲುವು ತೆಗೆದುಕೊಳ್ಳಬಹುದೆಂಬ ಮಾತು ಬಿಜೆಪಿ ವಲಯದಲ್ಲಿ ಕೇಳಿ ಬಂದಿತ್ತು. ಆದರೆ ಪದವೀಧರ ಕ್ಷೇತ್ರದ ಚುನಾವಣ ಪ್ರಚಾರಕ್ಕಾಗಿ ಉಡುಪಿಗೆ ಬಂದಿದ್ದ ಸಂದರ್ಭದಲ್ಲಿ ಈಶ್ವರಪ್ಪ ಹಾಗೂ ರಘುಪತಿ ಭಟ್‌ ಇಬ್ಬರ ವಿರುದ್ಧವೂ ತಮ್ಮ ಭಾಷಣದಲ್ಲಿ ಸಂತೋಷ್‌ ಅಸಮಾಧಾನ ಹೊರ ಹಾಕಿದ್ದರು. ಹೀಗಾಗಿ ಈ ಪ್ರಸ್ತಾವವನ್ನು ಸಂತೋಷ್‌ ರಾಷ್ಟ್ರೀಯ ನಾಯಕರ ಬಳಿ ಪ್ರಸ್ತಾವಿಸುವ ಸಾಧ್ಯತೆ ಕಡಿಮೆ ಎಂದು ಹೇಳಲಾಗುತ್ತಿದೆ.

ಬಿಎಸ್‌ವೈ ಮೇಲೆ ದ್ವೇಷವಿಲ್ಲ?
ನಾನು ಯಡಿಯೂರಪ್ಪ ವಿರುದ್ಧ ಮಾತ್ರ ಮಾತ ನಾಡಿದ್ದೇನೆ. ಆದರೆ ನನ್ನ ಮಗ ಕಾಂತೇಶ್‌ ಎಲ್ಲಿಯೂ ಮಾತನಾಡಿಲ್ಲ. ಯಡಿಯೂರಪ್ಪ ವಿರುದ್ಧ ನನಗೆ ಯಾವುದೇ ದ್ವೇಷವೂ ಇಲ್ಲ ಎಂದು ಈಶ್ವರಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

 

ಟಾಪ್ ನ್ಯೂಸ್

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

Nigeria; ಮದುವೆ ಹಾಲ್, ಆಸ್ಪತ್ರೆಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 18 ಮಂದಿ ಸಾವು

3-vitla

Campco ಮಾಜಿ ಅಧ್ಯಕ್ಷ ಎಲ್.ಎನ್. ಕೂಡೂರು ಇನ್ನಿಲ್ಲ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

INDWvsSAW; ಸ್ನೇಹ್ ರಾಣಾ ಸ್ಪಿನ್ ಜಾಲಕ್ಕೆ ಸಿಲುಕಿ ದಿಢೀರ್ ಕುಸಿತ ಕಂಡ ದ.ಆಫ್ರಿಕಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ

T20 World Cup ಗೆದ್ದ ಧನ್ಯತೆಯಲ್ಲಿ ಬಾರ್ಬಡೋಸ್ ಪಿಚ್ ಮಣ್ಣು ತಿಂದ ರೋಹಿತ್ ಶರ್ಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Train ವಂದೇ ಭಾರತ್‌ ಟಿಕೆಟ್‌ ದರ ಇಳಿಕೆ: ಸೋಮಣ್ಣ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

Modi ಮುಂದೆ ಕರ ಸಮರ! ಪ್ರಧಾನಿ ಭೇಟಿ ಮಾಡಿದ ಸಿಎಂ, ಡಿಸಿಎಂ ನೇತೃತ್ವದ ನಿಯೋಗ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

CM,DCM ಬಗ್ಗೆ ಪದೇ ಪದೆ ಹೇಳಿಕೆ ಬೇಡ ; ಮೀರಿದರೆ ಶಿಸ್ತು ಕ್ರಮ: ಡಿಕೆಶಿ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

Pen Drive Case ಲೈಂಗಿಕ ದೌರ್ಜನ್ಯ: ಪ್ರಜ್ವಲ್‌ಗೆ ಮತ್ತೆ ನ್ಯಾಯಾಂಗ ಬಂಧನ

ವಾಲ್ಮೀಕಿ ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

Valmiki ನಿಗಮ ಹಗರಣ: ಜು. 3ಕ್ಕೆ ಸಿಎಂ ಮನೆ ಮುತ್ತಿಗೆ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

shivamogga

Shimoga; ಭದ್ರಾವತಿ ವಿಐಎಸ್ಎಲ್ ಕಾರ್ಖಾನೆಗೆ ಸಚಿವ ಕುಮಾರಸ್ವಾಮಿ ಭೇಟಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

TeamIndia; ಮುಂದಿನ ಕೋಚ್ ಬಹುತೇಕ ಅಂತಿಮ…: ದೊಡ್ಡ ಸುಳಿವು ನೀಡಿದ ಬಿಸಿಸಿಐ ಅಧ್ಯಕ್ಷ ಬಿನ್ನಿ

5-kushtagi

Kushtagi: ಕಳೆದೆರೆಡು ದಿನಗಳಿಂದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ಕೋತಿ ಸೆರೆ

9

700 ಕೋಟಿ ವೆಚ್ಚದ ʼಕಲ್ಕಿ 2898 ಎಡಿʼ.. ಇಲ್ಲಿದೆ ಅತ್ಯಂತ ದುಬಾರಿ ಭಾರತೀಯ ಚಿತ್ರಗಳ ಪಟ್ಟಿ

prahlad joshi

Hubli; ಹೆಚ್ಚುವರಿ ಡಿಸಿಎಂ ಸ್ಥಾನ ವಿಚಾರದಲ್ಲಿ ಸಿದ್ದರಾಮಯ್ಯ ಕೈವಾಡವಿದೆ: ಪ್ರಹ್ಲಾದ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.