ಅವಧಿಗಿಂತ ಮೊದಲೇ ಎಥನಾಲ್‌ ಗುರಿ: ಪೆಟ್ರೋಲ್‌ನಲ್ಲಿ ಶೇ.20 ಮಿಶ್ರಣಕ್ಕೆ ನಿರ್ಧಾರ: ಸಿಎಂ


Team Udayavani, Jul 9, 2022, 7:05 AM IST

ಅವಧಿಗಿಂತ ಮೊದಲೇ ಎಥನಾಲ್‌ ಗುರಿ: ಪೆಟ್ರೋಲ್‌ನಲ್ಲಿ ಶೇ.20 ಮಿಶ್ರಣಕ್ಕೆ ನಿರ್ಧಾರ: ಸಿಎಂ

ಬೆಂಗಳೂರು: ಪೆಟ್ರೋಲ್‌ನಲ್ಲಿ ಶೇ. 20ರಷ್ಟು ಎಥನಾಲ್‌ ಮಿಶ್ರಣದ ಗುರಿಯನ್ನು ಅವಧಿಗಿಂತ ಮೊದಲೇ ಸಾಧಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ “ಕರ್ನಾಟಕದಲ್ಲಿ ಎಥನಾಲ್‌ ಉತ್ಪಾದನೆ: ನೀತಿಗಳು, ಆವಿಷ್ಕಾರಗಳು ಮತ್ತು ಸುಸ್ಥಿರ ಅನುಸಂಧಾನ’ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈಗಾಗಲೇ ಪೆಟ್ರೋಲ್‌ನಲ್ಲಿ ಶೇ. 10ರಷ್ಟು ಎಥನಾಲ್‌ ಮಿಶ್ರಣದ ಗುರಿ ಸಾಧನೆ ಆಗಿದೆ. ಮುಂದಿನ ಒಂದೂವರೆ ವರ್ಷದಲ್ಲಿ ದುಪ್ಪಟ್ಟು ಆಗಲಿದೆ ಎಂದರು.

ರಾಜ್ಯದಲ್ಲಿ ಎಥನಾಲ್‌ ನೀತಿ ಜಾರಿಗೆ ತೀರ್ಮಾನಿಸಲಾಗಿದ್ದು, ಕರಡು ಸಿದ್ಧಗೊಂಡಿದೆ. ಎಥನಾಲ್‌ ಮಿಶ್ರಣವನ್ನು ಶೇ. 20ಕ್ಕೆ ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯದ ಉದ್ದೇಶಿತ ಎಥನಾಲ್‌ ನೀತಿ ಪೂರಕವಾಗಿರಲಿದೆ ಎಂದರು.

ರಾಜ್ಯದಲ್ಲಿ 32 ಎಥನಾಲ್‌ ಉತ್ಪಾದನ ಘಟಕಗಳಿದ್ದು, ಕಬ್ಬಿನಿಂದ ಮಾತ್ರವಲ್ಲದೆ ಭತ್ತ ಮತ್ತು ಗೋವಿನಜೋಳದ ಹುಲ್ಲು ಮತ್ತಿತರ ಬಹು ವಿಧದ ಉತ್ಪನ್ನಗಳ ಎಥನಾಲ್‌ ಘಟಕಗಳು ಕೂಡ ತಲೆಯೆತ್ತಲಿವೆ ಎಂದರು.

ದೇಶದಲ್ಲಿ 2021-22ರಲ್ಲಿ 800 ಕೋಟಿ ಲೀಟರ್‌ ಎಥನಾಲ್‌ ಉತ್ಪಾದನೆ ಆಗಿದೆ. ಬರುವ ವರ್ಷ ಇದು ಸಾವಿರ ಕೋಟಿ ಲೀಟರ್‌ ತಲುಪುವ ನಿರೀಕ್ಷೆ ಇದೆ. ಈ ಗುರಿ ಸಾಧನೆಯಿಂದ 30 ಸಾವಿರ ಕೋಟಿ ರೂ.ಗಳಷ್ಟು ವಿದೇಶಿ ವಿನಿಮಯ ದಲ್ಲಿ ಉಳಿತಾಯ ಆಗಲಿದೆ. ಇದು ದೇಶದ ಆರ್ಥಿಕ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್‌ ನಿರಾಣಿ ಹೇಳಿದರು.

ಸಕ್ಕರೆ ಸಚಿವ ಶಂಕರ ಪಾಟೀಲ ಮುನೇನ ಕೊಪ್ಪ, ಶಾಸಕ ಬೆಳ್ಳಿ ಪ್ರಕಾಶ್‌, ರಾಜ್ಯ ಸಹಕಾರ ಮಾರುಕಟ್ಟೆ ಮಹಾಮಂಡಳದ ಅಧ್ಯಕ್ಷ ಡಾ| ಎಂ.ಎನ್‌. ರಾಜೇಂದ್ರ ಕುಮಾರ್‌ ಮತ್ತಿತರರು ಉಪಸ್ಥಿತರಿದ್ದರು.

1.30 ಲಕ್ಷ ಕೋ.ರೂ. ಹೂಡಿಕೆ
ರಾಜ್ಯದಲ್ಲಿ ವಿವಿಧ ಯೋಜನೆಗಳಡಿ ಶೀಘ್ರದಲ್ಲೇ 1.30 ಲಕ್ಷ ಕೋ.ರೂ. ಬಂಡವಾಳ ಹೂಡಿಕೆ ಆಗಲಿದೆ. ಈ ಸಂಬಂಧ ಹಲವು ಕಂಪೆನಿಗಳ ಜತೆ ಒಡಂಬಡಿಕೆಗೆ ಸಹಿ ಹಾಕಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾಹಿತಿ ನೀಡಿದರು.

ಟಾಪ್ ನ್ಯೂಸ್

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ

Suside-Boy

Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ

Arrest

Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.