ಕಮಲ ಪಡೆಯಲ್ಲಿ ಶಾಸಕರ ಮೌಲ್ಯಮಾಪನ: ಕ್ಷೇತ್ರಗಳ ವಸ್ತು ಸ್ಥಿತಿ ವರದಿ ಪಡೆಯುತ್ತಿರುವ ಬಿಜೆಪಿ


Team Udayavani, Apr 15, 2022, 6:40 AM IST

ಕಮಲ ಪಡೆಯಲ್ಲಿ ಶಾಸಕರ ಮೌಲ್ಯಮಾಪನ: ಕ್ಷೇತ್ರಗಳ ವಸ್ತು ಸ್ಥಿತಿ ವರದಿ ಪಡೆಯುತ್ತಿರುವ ಬಿಜೆಪಿ

ಬೆಂಗಳೂರು: ರಾಜ್ಯ ಬಿಜೆಪಿ 2023ರ ವಿಧಾನಸಭೆ ಚುನಾವಣೆ ಕಾರ್ಯತಂತ್ರ ಆರಂಭಿಸಿದ್ದು, ಸರ್ಕಾರದ ಸಾಧನೆಯ ಪರಾಮರ್ಶೆ ಜೊತೆಗೆ ಶಾಸಕರ ಕಾರ್ಯವೈಖರಿಯ ಪರೀಕ್ಷೆಯನ್ನೂ ನಡೆಸಲಾಗುತ್ತಿದ್ದು, ಮುಂದಿನ ಚುನಾವಣೆಗೆ ಈಗಿನಿಂದಲೇ ಅಭ್ಯರ್ಥಿಗಳನ್ನು ಪತ್ತೆ ಹಚ್ಚಲು ಬಿಜೆಪಿ ಮುಂದಾಗಿದೆ.

ಪ್ರಸ್ತುತ 119 ಶಾಸಕರನ್ನು ಹೊಂದಿರುವ ಬಿಜೆಪಿ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆಯಲು ಬೇಕಾದ ಸ್ಥಾನಗಳನ್ನು ಹೇಗಾದರೂ ಮಾಡಿ ಗೆಲ್ಲಲೇಬೇಕೆಂಬ ಉದ್ದೇಶದಿಂದ ಟಾರ್ಗೆಟ್‌ 150 ಮಂತ್ರವನ್ನು ಜಪಿಸುತ್ತಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯಕ್ಕೆ ಭೇಟಿ ಮಾಡಿದ ಸಂದರ್ಭದಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಂದರ್ಭದಲ್ಲಿ  ಮುಂದಿನ ಚುನಾವಣೆಗೆ ಈಗಿನಿಂದಲೇ ಸಿದ್ದತೆ ಮಾಡಿಕೊಳ್ಳುವುದು ಹಾಗೂ ಕಾರ್ಯತಂತ್ರದ ಬ್ಲೂé ಪ್ರಿಂಟ್‌ ನೀಡುವಂತೆ ಸೂಚಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ತಿಳಿದು ಬಂದಿದೆ.

ಶಾಸಕರ ಮೌಲ್ಯಮಾಪನ:

ಪ್ರಸ್ತುತ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯ ಸರ್ಕಾರ ಅಧಿಕಾರದಲ್ಲಿದ್ದು, ಬಿಜೆಪಿ ಶಾಸಕರು ಇರುವ ಕ್ಷೇತ್ರಗಳಲ್ಲಿ  ಎರಡೂ ಸರ್ಕಾರಗಳ ಯೋಜನೆಗಳನ್ನು ಜನರಿಗೆ ತಲುಪಿಸುವಲ್ಲಿ  ಪಕ್ಷದ ಶಾಸಕರು ಎಷ್ಟರ ಮಟ್ಟಿಗೆ ಶ್ರಮಿಸಿದ್ದಾರೆ. ಹಾಗೂ ಪಕ್ಷದ ಸಂಘಟನೆ ವಿಚಾರದಲ್ಲಿ  ಎಷ್ಟು ಸಕ್ರೀಯರಾಗಿದ್ದಾರೆ.

ಕ್ಷೇತ್ರದಲ್ಲಿ ಪಕ್ಷದ ಕಾರ್ಯಕರ್ತರು ಹಾಗೂ ವಿವಿಧ ಸಮುದಾಯಗಳ ಜೊತೆ, ಸಾರ್ವಜನಿಕರ ಜೊತೆ ಶಾಸಕರು ಯಾವ ರೀತಿಯ ಸಂಪರ್ಕ ಇಟ್ಟುಕೊಂಡಿದ್ದಾರೆ ಎನ್ನುವುದನ್ನು ಪಕ್ಷದ ಮುಖಂಡರು ಪರೋಕ್ಷವಾಗಿ ಮೌಲ್ಯಮಾಪನ ನಡೆಸುತ್ತಿದ್ದಾರೆ.

ಶಾಸಕರ ಸಾರ್ವಜನಿಕ ನಡವಳಿಕೆ ಹಾಗೂ ಪಕ್ಷದ ಸಂಘಟನೆ ಮತ್ತು ಕಾರ್ಯಕರ್ತರ ಜೊತೆ ಬೆರೆಯುವ ಕುರಿತು ಪಕ್ಷದ ಕೆಳ ಹಂತದ ಬೂತ್‌ ಮಟ್ಟದ ಕಾರ್ಯಕರ್ತ ಹಾಗೂ ವಿಸ್ತಾರಕರ ಮೂಲಕ ಸಂಪೂರ್ಣ ವಿವರ ಪಡೆದುಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಶಾಸಕರಿಂದಲೂ ಮಾಹಿತಿ:

ಪಕ್ಷದ ಮುಖಂಡರು ಶಾಸಕರ ಕಾರ್ಯ ವೈಖರಿ ಕುರಿತು ವಿವಿಧ ಪಕ್ಷದ ಕಾರ್ಯಕರ್ತರು, ಜಿಲ್ಲಾ ಮುಖಂಡರು ಹಾಗೂ ಪದಾಧಿಕಾರಿಗಳ ಮೂಲಕ ಮಾಹಿತಿ ಪಡೆದುಕೊಳ್ಳಲಾಗುತ್ತಿದ್ದು, ಅದರ ಜೊತೆಗೆ ಸ್ವತಃ ಶಾಸಕರಿಂದಲೂ ಅವರ ಕಾರ್ಯ ವೈಖರಿ ಮತ್ತು ಸಾಧನೆ ಕುರಿತು ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಕ್ಷೇತ್ರದ ವಸ್ತಸ್ಥಿತಿ ವರದಿ:

ಈಗಾಗಲೇ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡೇ ಮೂರು ತಂಡಗಳಾಗಿ ರಾಜ್ಯ ಪ್ರವಾಸ ಆರಂಭಿಸಿರುವ ರಾಜ್ಯ ನಾಯಕರು ಪ್ರತಿ ಕ್ಷೇತ್ರದ ವಾಸ್ತವ ಚಿತ್ರಣವನ್ನು ಪಡೆದುಕೊಳ್ಳುತ್ತಿದ್ದು, ಕ್ಷೇತ್ರದಲ್ಲಿರುವ ಜಾತಿವಾರು ಜನಸಂಖ್ಯೆ, ನಿರ್ಣಾಯಕ ಪಾತ್ರವಹಿಸುವ ಸಮುದಾಯ, ಪ್ರತಿ ಕ್ಷೇತ್ರಕ್ಕೂ ಸರ್ಕಾರದಿಂದ ಜಾರಿಯಾಗಿರುವ ಯೋಜನೆಗಳು, ಕ್ಷೇತ್ರದ ಪ್ರಮುಖ ಸಮಸ್ಯೆ, ಯೋಜನೆಗಳ ಅನುಷ್ಠಾನದಲ್ಲಿ ಹಾಲಿ ಶಾಸಕರ ಪಾಲ್ಗೊಳ್ಳುವಿಕೆ  ಒಂದು ವೇಳೆ ಬಿಜೆಪಿ ಶಾಸಕರಿಲ್ಲದ ಕ್ಷೇತ್ರದಲ್ಲಿ ಸಕ್ರೀಯರಾಗಿ ಕಾರ್ಯ ನಿರ್ವಹಿಸುತ್ತಿರುವ ನಾಯಕರ ಕಾರ್ಯ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ ಎಂದು ತಿಳಿದು ಬಂದಿದೆ.

ಎಲ್ಲರಿಗೂ ಟಿಕೆಟ್ ಖಾತ್ರಿಯಿಲ್ಲ:  

ಪ್ರಸ್ತುತ ಬಿಜೆಪಿ ಶಾಸಕರಾಗಿದ್ದರೂ, ಈಗ ನಡೆಸುತ್ತಿರುವ ಪರೋಕ್ಷ ಮೌಲ್ಯಮಾಪನದ ವೇಳೆ ಅವರ ಕಾರ್ಯ ವೈಖರಿಯ ಬಗ್ಗೆ ಪಕ್ಷದ ಸ್ಥಳೀಯ ಮುಖಂಡರು ಹಾಗೂ ಬೂತ್‌ ಮಟ್ಟದ ಕಾರ್ಯಕರ್ತರಿಂದ ಅಪಸ್ವರಗಳು ಕೇಳಿ ಬಂದಿದ್ದರೆ, ಅಂತಹ ಶಾಸಕರಿಗೆ ಮುಂದಿನ ಚುನಾವಣೆಗೆ ಟಿಕೆಟ್‌ ಕೈ ತಪ್ಪುವ ಸಾಧ್ಯತೆಯನ್ನೂ ಅಲ್ಲಗಳೆಯುವಂತಿಲ್ಲ ಎಂಬ ಮಾತುಗಳು ಬಿಜೆಪಿ ವಲಯದಲ್ಲಿ ಕೇಳಿ ಬರುತ್ತಿವೆ.

ಉತ್ತರ ಪ್ರದೇಶದಲ್ಲಿ  ಪಕ್ಷ ಸಂಘಟನೆ ಹಾಗೂ ಕ್ಷೇತ್ರದಲ್ಲಿ ಸರಿಯಾಗಿ ಜನರ ಜೊತೆ ಬೆರೆಯದ 80 ಕ್ಕೂ ಹೆಚ್ಚು ಹಾಲಿ ಶಾಸಕರಿಗೆ ಟಿಕೆಟ್‌ ತಪ್ಪಿಸಿ ಬಿಜೆಪಿ ಹೊಸಬರಿಗೆ ಅವಕಾಶ ಕಲ್ಪಿಸಿತ್ತು. ಅದೇ ಮಾದರಿಯನ್ನು ಬಿಜೆಪಿ ರಾಜ್ಯದಲ್ಲಿಯೂ ಪ್ರಯೋಗ ಮಾಡಲು ಮುಂದಾಗಿದ್ದು, ಸಕ್ರೀಯರಾಗಿಲ್ಲದ ಪಕ್ಷದ ಶಾಸಕರ ಕ್ಷೇತ್ರಗಳಲ್ಲಿ ಪರ್ಯಾಯ ಸಕ್ರೀಯ ಅಭ್ಯರ್ಥಿಯನ್ನೂ ಹುಡುಕುವ ಕೆಲಸವೂ ಈಗಿನಿಂದಲೇ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Kolkata: ಶನಿವಾರದಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ

Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ

ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUDA: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಹೊಸ ಸಂಕಷ್ಟ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

5-darshan

Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.