Police; ದೌರ್ಜನ್ಯ ನಡೆದು120 ದಿನ ಕಳೆದರೂ ಆರೋಪ ಪಟ್ಟಿ ಏಕೆ ದಾಖಲಾಗಿಲ್ಲ: ಸಿದ್ದರಾಮಯ್ಯ


Team Udayavani, Sep 7, 2023, 1:00 PM IST

siddaramaiah

ಬೆಂಗಳೂರು: ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಮತ್ತು ಜಾತಿ ದೌರ್ಜನ್ಯದ ಕೊಲೆ ಪ್ರಕರಣಗಳಲ್ಲಿ 120 ದಿನ ಕಳೆದರೂ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಯಾಕೆ ದಾಖಲಾಗಿಲ್ಲ ಎಂದು ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿ ಎಸ್.ಪಿ, ಡಿಸಿಪಿ ಗಳನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಂಕಿ ಅಂಶಗಳನ್ನು ಮುಂದಿಟ್ಟು ಅಧಿಕಾರಿಗಳನ್ನು ತೀವ್ರವಾಗಿ ಪ್ರಶ್ನಿಸಿದರು.

ಕಳೆದ ಐದು ವರ್ಷಗಳಲ್ಲಿ ದಾಖಲಾದ 10893 ಪ್ರಕರಣಗಳಲ್ಲಿ 1100 ಪ್ರಕರಣಗಳಲ್ಲಿ 120 ದಿನಗಳಲ್ಲಿಯೂ ಚಾರ್ಜ್‌ ಶೀಟ್‌ ಹಾಕಿಲ್ಲ. ಇದು ಪರಿಶಿಷ್ಟ ಜಾತಿ, ಪಂಗಡದವರ ಬಗ್ಗೆ ಅಧಿಕಾರಿಗಳ ಅಸಡ್ಡೆಯನ್ನು ತೋರಿಸುತ್ತದೆ. ಇದರಿಂದ ಸಂತ್ರಸ್ತರಿಗೆ ನ್ಯಾಯ ಕೊಡಿಸಿದಂತಾಗುವುದಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.

ಅಪರಾಧ ಪ್ರಕ್ರಿಯಾ ಸಂಹಿತೆ (CRPC) ಅಡಿಯಲ್ಲಿ 90 ದಿನಗಳೊಳಗೆ ಚಾರ್ಜ್‌ ಶೀಟ್‌ ಹಾಕದಿದ್ದರೆ, ಎಸ್ ಸಿ /ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ 60 ದಿನಗಳೊಳಗೆ ಆರೋಪ ಪಟ್ಟಿ ದಾಖಲಾಗದಿದ್ದರೆ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಗುತ್ತದೆ. ಹೀಗೆ ಜಾಮೀನು ಪಡೆದವರಿಗೆ ಕಾನೂನಿನ ಭಯ ಇರುತ್ತದಾ ಎಂದು ಖಾರವಾಗಿ ಪ್ರಶ್ನಿಸಿದರು.

ಕರ್ನಾಟಕ ಪೊಲೀಸ್ ದೇಶದಲ್ಲೇ ನಂಬರ್ ಒನ್ ಎನ್ನುವ ಅಭಿಪ್ರಾಯ ಇದೆ. ಆದರೆ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಶಿಕ್ಷೆ ಪ್ರಮಾಣ ಕೇವಲ 3.44 ಇದೆ. ಅಂದರೆ ಪೊಲೀಸ್ ಇಲಾಖೆ ಕಳೆದ ಐದು ವರ್ಷಗಳಲ್ಲಿ ಎಸ್ ಸಿ/ಎಸ್ ಟಿ ದೌರ್ಜನ್ಯ ಪ್ರಕರಣಗಳ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿತ್ತಾ ಎಂದು ಪ್ರಶ್ನಿಸಿ ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇದಕ್ಕೆ ಎಸ್.ಪಿ. ಹಾಗೂ ಡಿಸಿಪಿಗಳನ್ನು ನೇರವಾಗಿ ಹೊಣೆ ಮಾಡಿ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ವರಿಸಿ ಪ್ರಕರಣಗಳ ತನಿಖಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿ ಮತ್ತು ಐಜಿಗೆ ಸೂಚಿಸಿದರು.

ಈ ಪ್ರಕರಣಗಳ ತನಿಖೆಯ ಪ್ರಗತಿಯ ಕುರಿತು ಪ್ರತಿ ತಿಂಗಳು ಪ್ರಗತಿ ಪರಿಶೀಲನೆ ಮಾಡಬೇಕು ರಾಜ್ಯದಲ್ಲಿ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಕಾಯ್ದೆಯಡಿ Conviction rate 3.44% ಇದೆ. ಅಂದರೆ prosecution has failed. ಶಿಕ್ಷೆ ಪ್ರಮಾಣದಲ್ಲಿ ರಾಜ್ಯ ದೇಶದಲ್ಲಿ 21 ನೇ ಸ್ಥಾನದಲ್ಲಿದೆ. ಶಿಕ್ಷೆ ಪ್ರಮಾಣ ಕಡಿಮೆ ಇರುವುದರಿಂದ ಚಾಳಿ ಬಿದ್ದ ಆರೋಪಿಗಳ ಸಂಖ್ಯೆ ಹೆಚ್ಚಾಗಿರುತ್ತದೆ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಸಿಎಂ ಸೂಚಿಸಿದರು

ಎಲ್ಲ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು ಕೆಡಿಪಿ ಸಭೆಗಳಲ್ಲಿ ದೌರ್ಜನ್ಯ ಪ್ರಕರಣಗಳ ಪ್ರಗತಿ ಪರಿಶೀಲನೆ ಮಾಡುವ ಕುರಿತು ಸುತ್ತೋಲೆ ಹೊರಡಿಸುತ್ತೇನೆ. ಜಿಲ್ಲಾಧಿಕಾರಿಗಳೂ ಕಡ್ಡಾಯವಾಗಿ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಬೇಕು ಎಂದು ಮತ್ತೊಂದು ಸುತ್ತೋಲೆ ಹೊರಡಿಸಲಾಗುವುದು. ಜಿಲ್ಲಾ ಮತ್ತು ತಾಲೂಕು ಕೆಡಿಪಿ ಸಭೆಗಳಲ್ಲಿ ಜಾತಿ ದೌರ್ಜನ್ಯ ಪ್ರಕರಣಗಳ ರಿವ್ಯೂ (ಪರಿಶೀಲನೆ) ನಡೆಸದ ಕಾರಣದಿಂದ ಹೀಗಾಗುತ್ತದೆ. ಆದ್ದರಿಂದ ಶಾಸಕರು, ಜಿಲ್ಲಾ ಸಚಿವರು, ಡಿಸಿ-ಎಸ್ ಪಿ ಗಳು ಕಡ್ಡಾಯವಾಗಿ ರಿವ್ಯೂ ಮಾಡಬೇಕು ಎಂದು ಸ್ಪಷ್ಟವಾಗಿ ಸೂಚಿಸಿದರು.

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ

V.kageri

BJP Meeting: ಸಿದ್ದರಾಮಯ್ಯ ರಾಜೀನಾಮೆ ಸೇರಿ 3 ನಿರ್ಣಯ ಅಂಗೀಕಾರ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.