ಜಮೀರ್ ಮನೆ ಕಟ್ಟಿದ್ದಾರೆ ಅಷ್ಟೆ,ಹಣ ದುರುಪಯೋಗ ಎಲ್ಲಿಆಗಿದೆ?:ED ದಾಳಿ ವಿರುದ್ಧ ಸಿದ್ದು ಟೀಕೆ


Team Udayavani, Aug 7, 2021, 6:38 PM IST

fghtytr

ಬೆಂಗಳೂರು: ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡುವ ಪ್ರಯತ್ನಕ್ಕೆ ರಾಜ್ಯ ಸರ್ಕಾರ ಕೈ ಹಾಕದೆ ಇರುವುದು ಉತ್ತಮ.   ರಸ್ತೆ, ಕ್ರೀಡಾಂಗಣ, ಸರ್ಕಾರಿ ಸಂಸ್ಥೆಗಳಿಗೆ ರಾಷ್ಟ್ರೀಯ ನಾಯಕರ ಹೆಸರು ನಾಮಕರಣ ಮಾಡುವುದು ಮೊದಲಿನಿಂದಲೂ ನಡೆದು ಬಂದಿರುವ ಪದ್ಧತಿ. ಈ ವಿಚಾರದಲ್ಲಿ ದ್ವೇಷರಾಜಕಾರಣ ಸರಿಯಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಇಂದು (ಆ.07) ಸರಣಿ ಟ್ವೀಟ್ ಗಳ ಮೂಲಕ ಬಿಜೆಪಿ ವಿರುದ್ಧ ಹರಿಹಾಯ್ದಿರುವ ಅವರು, ಬೆಂಗಳೂರಿನ ಮೇಲು ಸೇತುವೆಗೆ ದೀನದಯಾಳ್ ಉಪಾಧ್ಯಾಯ, ನಗರ ಸಾರಿಗೆಗೆ ವಾಜಪೇಯಿ, ಗುಜರಾತ್ ಕ್ರೀಡಾಂಗಣಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಏಕೆ ಇಡಲಾಗಿದೆ. ಈ ಹೆಸರುಗಳನ್ನು ಕೇಂದ್ರ ಸರ್ಕಾರ ಸರ್ಕಾರ ಬದಲಾಯಿಸುವುದೇ? ಎಂದು ಪ್ರಶ್ನಿಸಿದ್ದಾರೆ.

ಮೇಜರ್ ಧ್ಯಾನ್‍ಚಂದ್ ಅವರು ಶ್ರೇಷ್ಠ ಹಾಕಿ ಪಟು ಎಂಬುದರಲ್ಲಿ ಎರಡು ಮಾತಿಲ್ಲ. ಬೇರೆ ಪ್ರಶಸ್ತಿಗೆ ಅವರ ಹೆಸರು ಇಡಬಹುದಾಗಿತ್ತು. ರಾಜೀವ್‍ ಗಾಂಧಿಯವರ ಹೆಸರೇಕೆ ಬದಲಿಸಬೇಕು? ದೇಶಕ್ಕಾಗಿ ಸೇವೆ ಸಲ್ಲಿಸಿದವರ ಸ್ಮರಣೆಗೆ ರಾಷ್ಟ್ರೀಯ ನಾಯಕರ ಹೆಸರು ನಾಮಕರಣ ಮಾಡುವುದು ಒಂದು ಪರಂಪರೆ ಎಂದಿದ್ದಾರೆ.

ಗರೀಬಿ ಹಠಾವೋ ಘೋಷಣೆ ಮೂಲಕ ಬಡವರ ಏಳಿಗೆಗೆ ಶ್ರಮಿಸಿದ್ದ ಇಂದಿರಾಗಾಂಧಿ, ಭೂ ಸುಧಾರಣೆ ಕಾಯ್ದೆ ಕೂಡ ಜಾರಿಗೆ ತಂದವರು. ಈ ಕೊಡುಗೆಯನ್ನು ಗೌರವಿಸಿ ಇಂದಿರಾ ಕ್ಯಾಂಟೀನ್‍ಗೆ ಅವರ ಹೆಸರು ಇಡಲಾಗಿದೆ.  ಅವರ ಸೇವೆಯನ್ನು ಗೌರವಿಸುವುದರಲ್ಲಿ ತಪ್ಪೇನಿದೆ?  ಬಡವರಿಗೆ ಕೊಡುತ್ತಿದ್ದ ಏಳು ಕೆ.ಜಿ. ಅಕ್ಕಿಯನ್ನು‌ ಕಡಿತಗೊಳಿಸಿದ ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರಕ್ಕೆ ಬಡವರ ಬಗ್ಗೆ ಏನು ಕಾಳಜಿ ಇದೆ?  ಬಿಜೆಪಿಗೆ ತಮ್ಮ ನಾಯಕರ ಹೆಸರಿನ ಬಗ್ಗೆ ಅಷ್ಟೊಂದು ಮೋಹ ಇದ್ದರೆ ಹೊಸ ಯೋಜನೆ ಪ್ರಾರಂಭಿಸಿ, ಹೊಸ ಹೆಸರು ಇಟ್ಟುಕೊಂಡು ಮೆರೆದಾಡಲಿ. ಬೇಡ ಎಂದವರು ಯಾರು? ಆ ಯೋಗ್ಯತೆ ಇವರಿಗಿಲ್ಲ ಎಂದು ಕಿಡಿಕಾರಿದ್ದಾರೆ.

ನೂತನ ಸಚಿವ ಸಂಪುಟದಲ್ಲಿ ಬಹುತೇಕ ಹಳಬರೇ ಸಚಿವರಿದ್ದಾರೆ. ಹೀಗಾಗಿ ಹೊಸದನ್ನು ನಿರೀಕ್ಷಿಸಲು ಹೇಗೆ ಸಾಧ್ಯ? ಕರ್ನಾಟಕ ಸರ್ಕಾರದ ಮಂತ್ರಿಮಂಡಲದಲ್ಲಿ 13 ಜಿಲ್ಲೆಗಳಿಗೆ ಪ್ರಾತಿನಿಧ್ಯ ನೀಡಿಲ್ಲ. ಹಳೆ ಮೈಸೂರು ಭಾಗಕ್ಕೆ ಅವಕಾಶ ಕಡಿಮೆಯಾಗಿದೆ. ರಾಜ್ಯದಲ್ಲಿ ಶೇ. 24.1 ರಷ್ಟು ದಲಿತರಿದ್ದಾರೆ. ಆದರೆ, ಪರಿಶಿಷ್ಟರಿಗೆ ನಾಲ್ಕು ಸ್ಥಾನ ಮಾತ್ರ ನೀಡಲಾಗಿದೆ. ಬೋವಿ, ಕೊರಚ, ಕೊರಮರಿಗೆ ಪ್ರಾತಿನಿಧ್ಯ ಕೊಟ್ಟಿಲ್ಲ. ನನ್ನ ಸಂಪುಟದಲ್ಲಿ ಸಾಮಾಜಿಕ ನ್ಯಾಯದಡಿ ಸರ್ವಜಾತಿಗಳಿಗೂ ಪ್ರಾತಿನಿಧ್ಯ ನೀಡಲಾಗಿತ್ತು ಎಂದಿದ್ದಾರೆ.

ಇನ್ನು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಇಡಿ ದಾಳಿ ವಿಚಾರದ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಾಮಾನ್ಯವಾಗಿ ಐಟಿ ದಾಳಿ‌ ನಡೆಸಿದ ಬಳಿಕ ಅಗತ್ಯ ಬಿದ್ದರೆ ಇ.ಡಿ ದಾಳಿ ಮಾಡುತ್ತದೆ. ಅದು ಆದಾಯ ಮೀರಿ ಆಸ್ತಿ ಗಳಿಸಿದ್ದರೆ, ಅಕ್ರಮವಾಗಿ ಹಣ ವರ್ಗಾವಣೆ ಅಥವಾ ದುರುಪಯೋಗವಾಗಿದ್ದರೆ ಮಾತ್ರ. ಜಮೀರ್ ಅವರ ಮನೆ ಮೇಲಿನದು ದುರುದ್ದೇಶದ ದಾಳಿ. ನಮ್ಮ ಪಕ್ಷದ ಶಾಸಕ ಜಮೀರ್ ಮನೆ ಮೇಲೆ ಇ.ಡಿ ಏಕಾಏಕಿ ದಾಳಿ ನಡೆಸಿದೆ. ಇದು ರಾಜಕೀಯ ಪ್ರೇರಿತ ಹಾಗೂ ದುರುದ್ದೇಶದಿಂದ ಕೂಡಿದ ದಾಳಿ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವುದು ಇದು ಮೊದಲಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ನಮ್ಮ ಶಾಸಕರಾದ ಜಮೀರ್ ಮನೆ ಕಟ್ಟಿದ್ದಾರೆ ಅಷ್ಟೆ. ಹಣ ದುರುಪಯೋಗ ಅಥವಾ ಅಕ್ರಮ ವರ್ಗಾವಣೆ ಎಲ್ಲಿ ಆಗಿದೆ? ಕರ್ನಾಟಕ ಬಿಜೆಪಿ ನಾಯಕರ ಮನೆ ಮೇಲೆ ಏಕೆ ದಾಳಿ ನಡೆಯುವುದಿಲ್ಲ. ಅವರೆಲ್ಲಾ ಬಡವರೇ?  ಬಿಪಿಎಲ್ ಕಾರ್ಡುದಾರರೇ ? ಎಂದು ಸಿದ್ದರಾಮಯ್ಯನವರು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.