ಎಂ.ಪಿ.ಪ್ರಕಾಶ್ ಪುತ್ರ, ಮಾಜಿ ಶಾಸಕ ಎಂ.ಪಿ.ರವೀಂದ್ರ ಇನ್ನಿಲ್ಲ
Team Udayavani, Nov 3, 2018, 12:14 PM IST
ಬೆಂಗಳೂರು: ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹರಪ್ಪನಹಳ್ಳಿ ಯ ಮಾಜಿ ಕಾಂಗ್ರೆಸ್ ಶಾಸಕ ಎಂ.ಪಿ.ರವೀಂದ್ರ ಅವರು ಶನಿವಾರ ನಸುಕಿನ 3.30 ರ ವೇಳೆಗೆ ಬಹು ಅಂಗಾಂಗ ವೈಫಲ್ಯದಿಂದ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಮಾಜಿ ಉಪಮುಖ್ಯಮಂತ್ರಿ ಎಂ.ಪಿ.ಪ್ರಕಾಶ್ ಅವರ ಪುತ್ರರಾಗಿದ್ದ ರವೀಂದ್ರ ಅವರು 2013 ರಲ್ಲಿ ಹರಪ್ಪನ ಹಳ್ಳಿ ಕ್ಷೇತ್ರದಿಂದ ಜಯಗಳಿಸಿದ್ದರು.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೇರಿದಂತೆ ಗಣ್ಯರು ರವೀಂದ್ರ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಭಾನುವಾರ ಮಧ್ಯಾಹ್ನ ಹೂವಿನ ಹಡಗಲಿಯಲ್ಲಿ ರವೀಂದ್ರ ಅವರ ಅಂತ್ಯಕ್ರಿಯೆ ನಡೆಯಲಿದೆ.
ಸಹಕಾರಿ ರಂಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ರವೀಂದ್ರ ತಮ್ಮ ತಂದೆ ಎಂ.ಪಿ. ಪ್ರಕಾಶ್ ನಿಧನದ ಬಳಿಕ ಚುನಾವಣಾ ರಾಜಕೀಯಕ್ಕೆ ಕಾಲಿಟ್ಟರು. 2013ರ ಚುನಾವಣೆಯಲ್ಲಿ ಹರಪನಹಳ್ಳಿ ಕ್ಷೇತ್ರದಿಂದ ಕಣಕ್ಕಿಳಿದ ರವೀಂದ್ರ 56,954 ಮತಗಳನ್ನು ಪಡೆದು ಬಿಜೆಪಿಯ ಗಣಿಧಣಿ ಜಿ.ಕರುಣಾಕರರೆಡ್ಡಿ ಅವರನ್ನು ಸೋಲಿಸುವ ಮೂಲಕ ಪ್ರಥಮ ಬಾರಿಗೆ ವಿಧಾನಸೌಧ ಪ್ರವೇಶಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.