ಶರಾವತಿ ಬಳಿಕ ಅಘನಾಶಿನಿ ನೀರಿನ ಮೇಲೆ ಕಣ್ಣು!


Team Udayavani, Jun 26, 2019, 3:06 AM IST

sharavti

ಚಿತ್ರದುರ್ಗ: ರಾಜಧಾನಿ ಬೆಂಗಳೂರಿಗೆ ಶರಾವತಿ ನದಿ ನೀರು ನೀಡುವ ಪ್ರಸ್ತಾವಿತ ಯೋಜನೆಗೆ ಪರ-ವಿರೋಧದ ಚರ್ಚೆ ನಡೆದಿರುವಾಗಲೇ ಬೆಂಗಳೂರು ಸೇರಿದಂತೆ ಬಯಲುಸೀಮೆಯ ಐದಾರು ಜಿಲ್ಲೆಗಳಿಗೆ ಅಘನಾಶಿನಿ ನದಿ ನೀರನ್ನು ಹರಿಸಲು ಸದ್ದಿಲ್ಲದೆ ಮತ್ತೂಂದು ಯೋಜನೆ ಸಿದ್ಧಗೊಂಡಿದೆ!

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟಗಳಲ್ಲಿ ಉಗಮವಾಗಿರುವ ಅಘನಾಶಿನಿ ನದಿ ನೀರನ್ನು ಶಿವಮೊಗ್ಗ- ಚಿಕ್ಕಮಗಳೂರು- ಚಿತ್ರದುರ್ಗ- ತುಮಕೂರು ಮೂಲಕ ಬೆಂಗಳೂರಿಗೆ ಹರಿಸುವುದು ಯೋಜನೆಯ ಉದ್ದೇಶ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಶಂಕರ ಹೊಂಡದಲ್ಲಿ ಉಗಮವಾಗಿ ಪಶ್ಚಿಮಾಭಿಮುಖವಾಗಿ ಹರಿಯುವ ಈ ನದಿ, ಕುಮಟಾ ತಾಲೂಕಿನ ಅಘನಾಶಿನಿ ಎಂಬ ಗ್ರಾಮದ ಬಳಿ ಅರಬ್ಬಿ ಸಮುದ್ರ ಸೇರುತ್ತದೆ.

ಭೌಗೋಳಿಕವಾಗಿ ಅತಿ ಕಡಿಮೆ ಅಂದರೆ 1895 ಚದರ ಕಿಮೀ ಜಲಾನಯನ ಪ್ರದೇಶ ಹೊಂದಿದ್ದು, ಮಳೆಗಾಲದಲ್ಲಿ 100-120 ಟಿಎಂಸಿ ಅಡಿ ನೀರು ಸಮುದ್ರ ಸೇರುತ್ತದೆ. ಇದರಲ್ಲಿ ಕೇವಲ 50 ಟಿಎಂಸಿ ಅಡಿ ನೀರನ್ನು ಬಳಕೆ ಮಾಡಲಾಗುತ್ತಿದೆ. ಇದೇ ನದಿಗೆ ಹೇಮಾಗ್ನಿನಿ ಪ್ರದೇಶದಲ್ಲಿ ಜಲಾಶಯ ನಿರ್ಮಿಸಿ 50 ಟಿಎಂಸಿ ನೀರು ಬಳಕೆ ಮಾಡುವ ಜಲ ವಿದ್ಯುತ್‌ ಯೋಜನೆ ರೂಪಿಸಲಾಗಿತ್ತು.

ಆದರೆ ಕೆಲ ಕಾರಣಗಳಿಂದ ಆ ಯೋಜನೆ ಸ್ಥಗಿತಗೊಂಡಿತ್ತು. ಭೌಗೋಳಿಕವಾಗಿ ಹೇಮಾಗ್ನಿನಿ ಜಲಾಶಯದ ಸ್ಥಳ ಟೋಪೋ ಶೀಟ್‌ (Topo Sheet) ಪ್ರಕಾರ 470 ಮೀಟರ್‌ ಸಮುದ್ರ ಮಟ್ಟದಿಂದ ಮೇಲಿದೆ. ಹಾಗಾಗಿ ಈಗ ಇಲ್ಲಿಂದ ಪೈಪ್‌ಲೈನ್‌ ಮೂಲಕ ಲಿಫ್ಟ್‌ ಮಾಡಿ ರಾಜಧಾನಿ ಬೆಂಗಳೂರಿಗೆ ಕುಡಿಯುವ ನೀರು ನೀಡಲು ಯೋಜನೆ ಸಿದ್ಧವಾಗಿದೆ.

ಎಲ್ಲಿಂದ ಎಲ್ಲಿಗೆ?: ಅಘನಾಶಿನಿ ನದಿಯ ಹೇಮಾಗ್ನಿನಿ ಜಲಾಶಯದಿಂದ ಸಿದ್ದಾಪುರ, ಸಾಗರ ತಾಲೂಕುಗಳ ಮೂಲಕ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಭದ್ರಾ ನದಿ ದಾಟಿಕೊಂಡು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಮೂಲಕ ಹಟ್ಟಿ ಮೂಡಗೆರೆ ಗ್ರಾಮದ ಸಮೀಪ ವೇದಾವತಿ ನದಿ ಪಾತ್ರಕ್ಕೆ ಈ ನೀರನ್ನು ಬಿಡಲಾಗುತ್ತದೆ. ಇಲ್ಲಿಂದ ಗುರುತ್ವಾಕರ್ಷಣೆ ಮೂಲಕ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿವಿಲಾಸ ಜಲಾಶಯಕ್ಕೆ ನೀರು ಹರಿಸಲಾಗುತ್ತದೆ.

ವಿವಿ ಸಾಗರದ ಶೇಖರಣಾ ಸಾಮರ್ಥ್ಯ 30 ಟಿಎಂಸಿ ಅಡಿ ಇದ್ದು ಈ ಜಲಾಶಯವನ್ನು ಭರ್ತಿ ಮಾಡಲಾಗುತ್ತದೆ. ಈ ಜಲಾಶಯದಿಂದ ಮತ್ತೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸಮೀಪದ ಬೋರನಕಣಿವೆ ಡ್ಯಾಂಗೆ ಲಿಫ್ಟ್‌ ಮಾಡಿ ನೀರು ತರಲಾಗುತ್ತದೆ. ಬೋರನಕಣಿವೆ ಡ್ಯಾಂ ಸುಮಾರು 3 ಟಿಎಂಸಿ ಶೇಖರಣಾ ಸಾಮರ್ಥ್ಯ ಹೊಂದಿದೆ.

ಬೋರನಕಣಿವೆ ಡ್ಯಾಂ ಮೂಲಕ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪದ ಗಾಯತ್ರಿ ಜಲಾಶಯಕ್ಕೆ ನೀರು ಲಿಫ್ಟ್‌ ಮಾಡಿ ಚಿಕ್ಕನಾಯಕನಹಳ್ಳಿ ತಾಲೂಕಿನ ತಿಮ್ಮನಹಳ್ಳಿ- ಗಂಟೇನಹಳ್ಳಿ- ಜೋಳೂರು- ಬೆಳ್ಳಾವಿ- ಕೋರಾ- ಕ್ಯಾತಸಂದ್ರ- ದಾಬಸ್‌ಪೇಟೆ ಮೂಲಕ ಅರ್ಕಾವತಿ ನದಿಯ ಹೆಸರಘಟ್ಟ ಮತ್ತು ತಿಪ್ಪಗೊಂಡನಹಳ್ಳಿ ಜಲಾಶಯಕ್ಕೆ ನೀರು ತುಂಬಿಸಲಾಗುತ್ತದೆ.

ನಂತರ ಅಲ್ಲಿಂದ ಬೆಂಗಳೂರಿಗೆ ಕುಡಿಯುವ ನೀರು ಪೂರೈಕೆ ಮಾಡುವ ಉದ್ದೇಶ ಯೋಜನೆಯಲ್ಲಿದೆ. ಹೇಮಾಗ್ನಿನಿ ಡ್ಯಾಂನಿಂದ ವಿವಿ ಸಾಗರ-ಬೋರನಕಣಿವೆ ಡ್ಯಾಂ ಸೇರಿದಂತೆ ಮೂರು ಹಂತದಲ್ಲಿ 450 ಮೀಟರ್‌ ಎತ್ತರದಷ್ಟು ಲಿಫ್ಟ್‌ ಮಾಡಲಾಗುತ್ತದೆ.

ಕೇಂದ್ರದ ಒಪ್ಪಿಗೆ ಸಾಧ್ಯತೆ: ಅತಿವೃಷ್ಟಿ, ಅನಾವೃಷ್ಟಿ, ತೀವ್ರ ಬರ, ಕುಡಿಯುವ ನೀರಿನ ಹಾಹಾಕಾರ ಇರುವ ಕಡೆಗಳಿಗೆ ಲಭ್ಯ ಇರುವ ನದಿ ಪಾತ್ರದ ನೀರಿನಿಂದ ಕೊರತೆ ಇರುವ ನದಿ ಪಾತ್ರಕ್ಕೆ ನೀರು ಹರಿಸುವ ದೃಷ್ಟಿಯಿಂದ 1980ರಲ್ಲಿ ಕೇಂದ್ರ ಸರ್ಕಾರ ಜಲಸಂಬಂಧಿ ದೂರಗಾಮಿ ಯೋಜನೆ ((National perspective plan-NPP) ರೂಪಿಸಿದೆ.

ಇದರಡಿಯಲ್ಲಿ ರಾಷ್ಟ್ರೀಯ ಜಲ ಅಭಿವೃದ್ಧಿ ಸಂಸ್ಥೆ National Water development Agency-NWDA) ದೇಶದ ನದಿ ಜೋಡಣೆಗಳ ಕಾರ್ಯ ನಿರ್ವಹಿಸಲಿದೆ. ಈ ಯೋಜನೆಯಡಿ ಕುಡಿಯುವ ನೀರು ನೀಡುವುದು ಕಡ್ಡಾಯವಾಗಿದ್ದು ಕೇಂದ್ರ ಸರ್ಕಾರ ಹಾಗೂ ಹಸಿರು ಪೀಠ ಈ ಯೋಜನೆಗೆ ಸಮ್ಮತಿ ನೀಡುವ ಸಾಧ್ಯತೆ ಇದೆ.

ಫಲಾನುಭವಿ ಜಿಲ್ಲೆಗಳು: ಅಘನಾಶಿನಿ ನದಿ ನೀರನ್ನು ಲಿಫ್ಟ್‌ ಮಾಡುವುದರಿಂದ ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಬೆಂಗಳೂರು ಗ್ರಾಮಾಂತರ ಮತ್ತು ನಗರ ಜಿಲ್ಲೆಗಳಿಗೆ ನೀರು ಲಭ್ಯವಾಗಲಿದೆ.

ತಾಂತ್ರಿಕವಾಗಿ ಸಮಂಜಸವಾದ ಹಾಗೂ ಪರಿಸರಕ್ಕೆ ಹಾನಿ ಇಲ್ಲದ ಬಹುತೇಕ ರಸ್ತೆ ಮಾರ್ಗದಲ್ಲಿ ಪೈಪ್‌ಲೈನ್‌ ಅಳವಡಿಸಿಕೊಂಡು ಸುಮಾರು 350 ಕಿಮೀ ದೂರ ನೀರು ಹರಿಸಲು ಸೂಕ್ತವಾದ ಯೋಜನೆ ಅಘನಾಶಿನಿ ಯೋಜನೆ. ರಾಜ್ಯ ಸರ್ಕಾರ ಈ ಯೋಜನೆಯನ್ನು ಒಪ್ಪಿ ಅನುಷ್ಠಾನ ಮಾಡಿದರೆ ಐದಾರು ಜಿಲ್ಲೆಗಳ ಕುಡಿಯುವ ನೀರಿನ ಸಮಸ್ಯೆ ಇತ್ಯರ್ಥವಾಗಲಿದೆ.
-ಟಿ.ಬಿ. ಜಯಚಂದ್ರ, ಮಾಜಿ ಸಚಿವ

ಈ ಯೋಜನೆಯಿಂದ ಅರಣ್ಯ ಸೇರಿದಂತೆ ಪರಿಸರಕ್ಕೆ ಯಾವುದೇ ಅಡ್ಡಿ ಆಗುವುದಿಲ್ಲ. ಮುಂದಿನ 2050ರ ಜನಸಂಖ್ಯೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಯೋಜನೆ ರೂಪಿಸಲಾಗಿದೆ. ಅಘನಾಶಿನಿಯಿಂದ ಬರುವ ನೀರನ್ನು ವಿವಿ ಸಾಗರದಲ್ಲಿ ಸ್ಟೋರ್‌ ಮಾಡಿ ಅಲ್ಲಿಂದ ಲಿಫ್ಟ್‌ ಮಾಡಲಾಗುತ್ತದೆ.
-ಈಶ್ವರಯ್ಯ, ನಿವೃತ್ತ ಕಾರ್ಯಪಾಲಕ ಅಭಿಯಂತರ, ಯೋಜನೆಯ ತಾಂತ್ರಿಕ ಸಲಹೆಗಾರ

* ಹರಿಯಬ್ಬೆ ಹೆಂಜಾರಪ್ಪ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.