![Puttur Temple: ತೆಂಗಿನ ಮರ ತೆರವು ವೇಳೆ ಕಾರ್ಮಿಕನಿಗೆ ಗಾಯ](https://www.udayavani.com/wp-content/uploads/2025/02/puttur-1-415x260.jpg)
![Puttur Temple: ತೆಂಗಿನ ಮರ ತೆರವು ವೇಳೆ ಕಾರ್ಮಿಕನಿಗೆ ಗಾಯ](https://www.udayavani.com/wp-content/uploads/2025/02/puttur-1-415x260.jpg)
Team Udayavani, Jan 29, 2025, 10:39 PM IST
ಬೆಂಗಳೂರು: ರೈತರಿಗೆ ನೀಡುವ ಸಾಲ ಕಡಿತ ಮಾಡಿರುವ ನಬಾರ್ಡ್ ನೀತಿ ವಿರೋಧಿಸಿ ಹಾಗೂ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ನೇತೃತ್ವದಲ್ಲಿ ರೈತರು ಬುಧವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.
ಫ್ರೀಡಂ ಪಾರ್ಕ್ ಆವರಣದಲ್ಲಿ ಜಮಾಯಿಸಿದ ನೂರಾರು ರೈತರು ಹಸುರು ಶಾಲು ಹಿಡಿದು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು. ನಬಾರ್ಡ್ ಮೂಲಕ ನೀಡುವ ರೈತರ ಸಾಲ ಮೊತ್ತ ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿದರು.
ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ, ಕೇಂದ್ರ ಸರಕಾರ ನಬಾರ್ಡ್ ಮೂಲಕ ಕೃಷಿಗೆ ನೀಡುತ್ತಿದ್ದ ಅಲ್ಪಾವಧಿ ಸಾಲದ ಮೊತ್ತ ಕಡಿತಗೊಳಿಸಿದೆ. ಇದರಿಂದ ಕೃಷಿ ನಂಬಿ ಬದುಕುವ ರೈತರಿಗೆ ದೊಡ್ಡ ಸಂಕಷ್ಟವಾಗಲಿದೆ. ಸಹಕಾರ ಸಂಘಗಳ ಮೂಲಕ ಸಿಗುತ್ತಿದ್ದ ಶೂನ್ಯ ಬಡ್ಡಿದರದ ಮೇಲೆ ಪರಿಣಾಮ ಬೀರಲಿದೆ.
ಹಾಗಾಗಿ ಕೇಂದ್ರ ಸರಕಾರ ನಬಾರ್ಡ್ ಕೃಷಿ ಸಾಲದ ಮೊತ್ತವನ್ನು ಹೆಚ್ಚಿಸಬೇಕು. ರಾಜ್ಯ ಸರಕಾರವು ರೈತರಿಗೆ ಹೆಚ್ಚಿನ ಸಾಲ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಬಹುತೇಕ ಮೈಕ್ರೋ ಫೈನಾನ್ಸ್ಗಳು ಆರ್ಬಿಐ ನಿಯಮದಂತೆ ಕಾರ್ಯನಿರ್ವಹಿಸುತ್ತಿಲ್ಲ. ಗ್ರಾಮೀಣ ಭಾಗದಲ್ಲಿ ವಸೂಲಿ ಪ್ರಕರಣಗಳು ಮುಂದುವರಿದಿವೆ. ಇದಕ್ಕೆ ಸರಕಾರ ಕಡಿವಾಣ ಹಾಕಬೇಕು. ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ಸಮಿತಿ ರಚಿಸಿ ಸೂಕ್ತ ನಿಯಮಗಳನ್ನು ರೂಪಿಸಬೇಕು. ರೈತರಿಗೆ ಅನುಕೂಲವಾಗುವಂತೆ ಋಣಮುಕ್ತ ಕಾಯ್ದೆ ಅನುಷ್ಠಾನಕ್ಕೆ ತರಬೇಕು ಎಂದು ಒತ್ತಾಯಿಸಿದರು.
ಮೈಕ್ರೋ ಫೈನಾನ್ಸ್ ಕಿರುಕುಳದಿಂದಾಗಿ ಆತ್ಮಹತ್ಯೆ ದಾರಿ ಹಿಡಿಯುತ್ತಿರುವುದು ಬೇಸರ ತಂದಿದೆ. ಇದರ ನಿಯಂತ್ರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿ ಕ್ರಮಕ್ಕೆ ಸೂಚನೆ ನೀಡಿದ್ದಾರೆ. ರೈತರು ನೀಡಿರುವ ನಿರ್ಣಯಗಳನ್ನು ಸಚಿವ ಸಂಪುಟದಲ್ಲಿ ಚರ್ಚೆ ನಡೆಸಲಾಗುವುದು.
-ಎಚ್.ಸಿ.ಮಹದೇವಪ್ಪ,
ಸಮಾಜ ಕಲ್ಯಾಣ ಇಲಾಖೆ ಸಚಿವ
Dharawad: ಜಲ ಜೀವನ್ ಮಿಷನ್ ಕಳಪೆ ಕಾಮಗಾರಿಗೆ ಗರಂ; ಕೆಟ್ಟ ಯೋಜನೆ ಎಂದ ವಿನಯ್ ಕುಲಕರ್ಣಿ
GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ
ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್.ಪಾಟೀಲ್ಗೆ ಹೊಸ ಹುದ್ದೆ!
ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ
Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ
You seem to have an Ad Blocker on.
To continue reading, please turn it off or whitelist Udayavani.