Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

ರಾಜ್ಯದಲ್ಲಿ ಡೆಂಗ್ಯೂ ನಿಯಂತ್ರಣಕ್ಕೆ ಇನ್ನೆರಡು ದಿನದಲ್ಲಿ ಮಾರ್ಗಸೂಚಿ

Team Udayavani, Jul 3, 2024, 7:09 AM IST

Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್‌

ಬೆಂಗಳೂರು: ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸಲು ವಿವಿಧ ಇಲಾಖೆಗಳ ಸಹಕಾರ ಕೋರಿದ್ದು ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯೂ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ನಿಗದಿಪಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದರು.

ಮಂಗಳವಾರ ವಿಧಾನಸೌಧದಲ್ಲಿ ಗ್ರಾಮೀಣಾಭಿವೃದ್ಧಿ, ನಗರಾಭಿವೃದ್ಧಿ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಮನ್ವಯ ಸಭೆ ನಡೆಸಿದ ಅವರು, ಡೆಂಗ್ಯೂ ನಿಯಂತ್ರಣಕ್ಕೆ ಸ್ಥಳೀಯವಾಗಿ ಸಹಕರಿಸಬೇಕೆಂದು ಕೋರಿದ್ದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಜವಾಬ್ದಾರಿ ಹಂಚಿಕೆ ಮಾಡಿದ್ದಾರೆ.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿದ ಅವರು, ಸಾಧಾರಣವಾಗಿ 2 ವರ್ಷಕ್ಕೊಮ್ಮೆ ಉಲ್ಬಣಿಸುತ್ತಿದ್ದ ಡೆಂಗ್ಯೂ, ಕಳೆದ ಬಾರಿಗಿಂತ ಈ ಬಾರಿ ಹೆಚ್ಚಾಗಿದೆ. ನೀರು ನಿಲ್ಲದಂತೆ ಸಾರ್ವಜನಿಕರು ಎಚ್ಚರ ವಹಿಸಬೇಕು. ಸಾರಿಗೆ ಡಿಪೋ, ಬಸ್‌ ನಿಲ್ದಾಣ ಇತ್ಯಾದಿ ಕಡೆಗಳಲ್ಲಿ ದಾಸ್ತಾನು ಮಾಡಿದ್ದ ಟೈರ್‌ನಲ್ಲಿ ಲಾರ್ವಾ ಪತ್ತೆಯಾಗಿದ್ದು ಈ ಬಗ್ಗೆ ಗಮನ ವಹಿಸುವಂತೆ ಸಾರಿಗೆ ಇಲಾಖೆಗೆ ಮನವಿ ಮಾಡಲಾಗಿದೆ.

ಟೆಮಿಫಾಸ್‌ ಸಿಂಪಡಣೆ ಮಾಡಲಾಗುತ್ತಿದ್ದು ಕೊನೆಯ ಹಂತದಲ್ಲಿ ಫಾಗಿಂಗ್‌ ಕೂಡ ಮಾಡಲಾಗುತ್ತದೆ. ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿನ ವೈದ್ಯಕೀಯ ಅಧಿಕಾರಿಗಳು, ಎಂಒಎಚ್‌ಗಳು ತಮ್ಮ ವ್ಯಾಪ್ತಿಯಲ್ಲಿನ 8-10 ಶಾಲೆಗಳಿಗೆ ಭೇಟಿ ಕೊಟ್ಟು ಶಿಕ್ಷಕರಿಗೆ ತರಬೇತಿ ಕೊಟ್ಟು ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು. ಈ ಸಂಬಂಧ 2 ದಿನದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಪಂಚಾಯತಿಗಳ ಸಿಇಒಗಳ ಸಭೆ ಕರೆದು ಮಾರ್ಗಸೂಚಿ ನಿಗದಿಪಡಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಮಾಹಿತಿ ಕೊಡದ ಖಾಸಗಿ ಆಸ್ಪತ್ರೆಗಳು:
ಕಳೆದ ಬಾರಿ ಇದೇ ಸಂದರ್ಭದಲ್ಲಿ 2,903 ಇದ್ದ ಡೆಂಗ್ಯೂ ಪ್ರಕರಣಗಳು ಈ ಬಾರಿ ಜ.1 ರಿಂದ ಜು.1 ರವರೆಗೆ 6,187 ರಷ್ಟಾಗಿವೆ. ಗ್ರಾಮೀಣ ಭಾಗದಲ್ಲಿ 3,463 ಪ್ರಕರಣಗಳು ಗುರುತಿಸಿದ್ದು, ಶೇ.56 ರಷ್ಟು ಪ್ರಕರಣಗಳು ಗ್ರಾಮೀಣ ಭಾಗದಲ್ಲೇ ಇವೆ. ಪ್ರದೇಶಗಳಲ್ಲಿ ಶೇ.44 ರಷ್ಟು ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 1,563 ಪ್ರಕರಣಗಳು ಪತ್ತೆಯಾಗಿವೆ. ಶೇ.42 ರಷ್ಟು ಪರೀಕ್ಷಾ ಪ್ರಮಾಣ ಹೆಚ್ಚಳ ಆಗಿರುವುದರಿಂದ ಪತ್ತೆಯಾಗುವ ಪ್ರಕರಣಗಳೂ ಹೆಚ್ಚಾಗಿವೆ.

ಈವರೆಗೆ ಆರು ಮಂದಿ ಮೃತಪಟ್ಟಿದ್ದು, ಈ ಪೈಕಿ ಮೂವರು ಇತರೆ ಕಾಯಿಲೆಗಳಿಂದಲೂ ಬಳಲುತ್ತಿದ್ದರು. ಕೇಸ್‌ ಫೆಟಾಲಿಟಿ ರೇಟ್‌ (ಸಿಎಫ್ಆರ್‌) ಶೇ.0.5ಕ್ಕಿಂತ ಕಡಿಮೆ ಇರಬೇಕು. ನಮ್ಮಲ್ಲಿ ಶೇ.0.09 ರಷ್ಟಿದೆ. ಹೀಗಾಗಿ ಆತಂಕಪಡುವ ಅಗತ್ಯವಿಲ್ಲ ಎಂದು ವಿವರಿಸಿದರು.

ಆರೋಗ್ಯ ಇಲಾಖೆ ಅಂದಾಜು ಮಾಡಿರುವುದಕ್ಕಿಂತ ಹೆಚ್ಚಿನ ಪ್ರಕರಣಗಳು ಇರಬಹುದು. ಆದರೆ, ಅನೇಕ ಖಾಸಗಿ ಆಸ್ಪತ್ರೆಗಳು ಸರಿಯಾದ ಮಾಹಿತಿ ಕೊಟ್ಟಿಲ್ಲ. ಹೀಗಾಗಿ ವೆಬ್‌ಪೋರ್ಟಲ್‌ಗೆ ದತ್ತಾಂಶ ಅಪ್‌ಲೋಡ್‌ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದ ಸಚಿವರು, ಸರ್ಕಾರಿ ಆಸ್ಪತ್ರೆಗಳಿಗೆ ಟೆಸ್ಟಿಂಗ್‌ ಕಿಟ್‌ಗಳನ್ನು ಸಾಕಷ್ಟು ಪ್ರಮಾಣದಲ್ಲಿ ಕೊಟ್ಟಿದ್ದು, ಎಲ್ಲಿಯೂ ಕೊರತೆಯಾಗದಂತೆ ನೋಡಿಕೊಳ್ಳಲಾಗಿದೆ. ಸದ್ಯಕ್ಕೆ ಡೆಂಗ್ಯೂ ಗೆ ಪ್ರತ್ಯೇಕ ಚಿಕಿತ್ಸಾ ಪದ್ಧತಿ ಇಲ್ಲ. ಪ್ಯಾರಾಸಿಟಮಲ್‌ ಕೊಡಲಾಗುತ್ತಿದ್ದು, ಜ್ವರ ತೀವ್ರವಾಗಿ ಬಿಳಿರಕ್ತಕಣ (ಪ್ಲೇಟ್ಲೆಟ್ಸ್‌) ಕಡಿಮೆಯಾದರೆ ರಕ್ತನಿಧಿ ಕೇಂದ್ರಗಳೊಂದಿಗೆ ಸಂಪರ್ಕದಲ್ಲಿದ್ದೇವೆ. ಐವಿ ಫ‌ುಯೆಡ್ಸ್‌ ಕೂಡ ಸಾಕಷ್ಟು ದಾಸ್ತಾನು ಮಾಡಲಾಗಿದೆ ಎಂದು ವಿವರಿಸಿದರು.

ಶುಲ್ಕ ನಿಗದಿ ಬಗ್ಗೆ ಚರ್ಚೆಯೇ ಇಲ್ಲ
ಡೆಂಗ್ಯೂ ಪತ್ತೆಗಾಗಿ ರ್ಯಾಪಿಡ್‌ ಆಂಟಿಜನ್‌ ಪರೀಕ್ಷೆ ಮಾಡಿ ಶಂಕಿತ ಪ್ರಕರಣಗಳಲ್ಲಿ ಚಿಕಿತ್ಸೆ ಕೊಡಲಾಗುತ್ತಿದೆ. ಎಲಿಸಾ ಪರೀಕ್ಷೆ ಮಾಡಿದ ಪ್ರಕರಣಗಳನ್ನಷ್ಟೇ ಸರ್ಕಾರ ಪಾಸಿಟಿವ್‌ ಎಂದು ಪರಿಗಣಿಸುತ್ತಿದೆ. ಎನ್‌ಎಸ್‌ 1 ಟೆಸ್ಟ್‌ಗೆ ದರ ನಿಗದಿಪಡಿಸದೇ ಇರುವುದರಿಂದ ಖಾಸಗಿ ಆಸ್ಪತ್ರೆಗಳು ಮನಬಂದಂತೆ ಪರೀಕ್ಷಾ ಶುಲ್ಕ ಪಡೆಯುತ್ತಿವೆ. ಈ ಬಗ್ಗೆ ಸಚಿವರ ಸಭೆಯಲ್ಲಿ ಚರ್ಚೆಯೇ ಆಗಿಲ್ಲ. ಪರೀಕ್ಷಾ ಶುಲ್ಕದ ಬಗ್ಗೆ ಸಭೆಯಲ್ಲಿ ಏಕೆ ಚರ್ಚೆ ಮಾಡಿಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಎಚ್ಚೆತ್ತುಕೊಂಡ ಸಚಿವರು, ನಾಳೆಯೇ ದರ ನಿಗಿದಪಡಿಸಿ ಎಂದು ಗುಂಡೂರಾವ್‌ ಸೂಚಿಸಿದರು.

ಪ್ರತಿ ಶುಕ್ರವಾರ ಅಧಿಕಾರಿಗಳ ಖುದ್ದು ಭೇಟಿ
ಬಿಬಿಎಂಪಿ ವ್ಯಾಪ್ತಿಯಲ್ಲಿ ಬಡವರು, ಕಾರ್ಮಿಕರು, ಜನಸಂಖ್ಯೆ ಹೆಚ್ಚಿರುವ ಸೂಕ್ಷ್ಮ ಪ್ರದೇಶದಲ್ಲಿ ಮಾತ್ರ ಲಾರ್ವಾ ಸರ್ವೇ ಮಾಡಿ, ಜನಜಾಗೃತಿ ಮೂಡಿಸಲು ಸೂಚಿಸಿತ್ತು. ಈಗ ಬೆಂಗಳೂರಿನಲ್ಲಿರುವ 25-30 ಲಕ್ಷ ಮನೆಗಳಲ್ಲೂ ಲಾರ್ವಾ ಸರ್ವೇ ಮಾಡಿ, ಜಾಗೃತಿ ಮೂಡಿಸಬೇಕು. ಇದಕ್ಕಾಗಿ ಸ್ಥಳೀಯ ನಿವಾಸಿಗಳ ಕಲ್ಯಾಣ ಸಂಘ, ಕಟ್ಟಡ ಕಾರ್ಮಿಕರ ಸಂಘಗಳು, ಕ್ರೆಡೈನಂತಹ ಸಂಸ್ಥೆಗಳ ನೆರವು ಪಡೆಯಬಹುದು. ಉಳಿದ ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳಲ್ಲೂ ಪ್ರತಿ ಮನೆಯ ಲಾರ್ವಾ ಸಮೀಕ್ಷೆ ನಡೆಸಬೇಕು. ಪ್ರತಿ ಶುಕ್ರವಾರ ಅಧಿಕಾರಿಗಳು ಖುದ್ದು ಭೇಟಿ ನೀಡಿ ಮೇಲ್ವಿಚಾರಣೆ ಮಾಡಬೇಕು ಎಂದು ಆದೇಶಿಸಿದರು.

ಟಾಪ್ ನ್ಯೂಸ್

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

Heavy rain in Amboli; Five feet water rise in Hidkal reservoir in one day

Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

9 ತಿಂಗಳ ಹಿಂದೆ ನಾಪತ್ತೆಯಾದ ಮಗಳ ಬಗ್ಗೆ DCM ಪವನ್ ಕಲ್ಯಾಣ್ ಬಳಿ ದೂರು.. 9 ದಿನದಲ್ಲಿ ಪತ್ತೆ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

Bellary: ಡ್ರೈವಿಂಗ್ ಸ್ಕೂಲ್ ಲಾಭಿ; ಆರ್ ಟಿಓ ಕಚೇರಿ ಸಿಬ್ಬಂದಿ ಮೇಲೆ ಹಲ್ಲೆ

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

UK: Keir Starmer- ಕಾರ್ಮಿಕನ ಮಗ ಬ್ರಿಟನ್‌ ಪ್ರಧಾನಿ; ರಿಷಿ ಸುನಕ್‌ ಪಕ್ಷಕ್ಕೆ ಹೀನಾಯ ಸೋಲು

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Mysore; ಸಿಎಂ ಕುರ್ಚಿ ಮೇಲೆ ಕಣ್ಣಿಟ್ಟವರಿಂದ ಮುಡಾ ಹಗರಣ ಬಯಲು: ಎಚ್ ಡಿಕೆ ಸ್ಫೋಟಕ ಹೇಳಿಕೆ

Transfer of 23 IAS officers including five District Collectors

IAS transfer; ಐವರು ಜಿಲ್ಲಾಧಿಕಾರಿಗಳು ಸೇರಿ 23 ಐಎಎಸ್ ಅಧಿಕಾರಿಗಳ ವರ್ಗಾವಣೆ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ಆಯ್ಕೆ

Raichur: ನೂತನ ಜಿಲ್ಲಾಧಿಕಾರಿಯಾಗಿ ನಿತೀಶ್ ಕೆ. ನಿಯೋಜನೆ

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

Hosanagara: ಬಿದನೂರಲ್ಲಿ ನಿಲ್ಲದ ನಿಧಿ ಬೇಟೆ! ಭಗ್ನಗೊಳ್ಳುತ್ತಿದೆ ಇತಿಹಾಸದ ಪಳೆಯುಳಿಕೆಗಳು

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Maski: ಸಕಾಲಕ್ಕೆ ಬಾರದ ಮಳೆ ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

Maski: ಸಕಾಲಕ್ಕೆ ಬಾರದ ಮಳೆ, ಸಂಕಷ್ಟದಲ್ಲಿ ರೈತ… ವಾರದೊಳಗೆ ಮಳೆ ಬರದಿದ್ದರೆ ಬೆಳೆ ನಾಶ

7-bng

Bengaluru: ವಿಚಾರಣಾಧೀನ ಕೈದಿಯ ಗುದದ್ವಾರದಲ್ಲಿ 2 ಮೊಬೈಲ್‌

Kalki

Indian Cinema; ಕಲ್ಕಿ ಗೆಲುವಲ್ಲಿ ಸ್ಟಾರ್ ನಗು

6-bng

ನಿಯಮಗಳ ಉಲ್ಲಂಘನೆ, ಹೈಬೀಮ್‌ ಲೈಟ್‌ಗಳ ಬಳಕೆ: 5.79 ಲಕ್ಷ ದಂಡ

Heavy rain in Amboli; Five feet water rise in Hidkal reservoir in one day

Belagavi: ಅಂಬೋಲಿ ಭಾಗದಲ್ಲಿ ಭಾರಿ ಮಳೆ; ಹಿಡಕಲ್ ಜಲಾಶಯದಲ್ಲಿ ಒಂದೇ ದಿನ ಐದಡಿ ನೀರು ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.