![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Nov 18, 2022, 6:38 AM IST
ಬೆಂಗಳೂರು: ಬಹುನಿರೀಕ್ಷಿತ ಫಿನ್ಟೆಕ್ ಕಾರ್ಯಪಡೆ ವರದಿ ಸಿದ್ಧಗೊಂಡಿದ್ದು, ಡಿಸೆಂಬರ್ನಲ್ಲಿ ಫಿನ್ಟೆಕ್ ಹಬ್ ಮಂಗಳೂರಿನಲ್ಲಿ ಬಿಡುಗಡೆ ಆಗಲಿದೆ ಎಂದು ರಾಜ್ಯದ ಸ್ಟಾರ್ಟ್ಅಪ್ ವಿಜನ್ ಗ್ರೂಪ್ ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ತಿಳಿಸಿದರು.
ಅರಮನೆ ಆವರಣದಲ್ಲಿ ಗುರುವಾರ ಬೆಂಗಳೂರು ಟೆಕ್ ಸಮಿಟ್ನಲ್ಲಿ “ಉದಯವಾಣಿ’ ಜತೆಗೆ ಮಾತನಾಡಿದ ಅವರು, ಹಣಕಾಸು ತಂತ್ರಜ್ಞಾನ(ಫಿನ್ಟೆಕ್)ಕ್ಕೆ ಸಂಬಂಧಿಸಿ ಹರ್ಷಿಲ್ ಮಾಥುರ್ ನೇತೃತ್ವದಲ್ಲಿ ರಚಿಸಲಾದ ಕಾರ್ಯಪಡೆಯ ವರದಿ ಸಿದ್ಧಗೊಂಡಿದ್ದು, ಡಿಸೆಂಬರ್ನಲ್ಲಿ ಇದು ಬಿಡುಗಡೆ ಆಗಲಿದೆ. ಈ ವರದಿಯು ರಾಜ್ಯದಲ್ಲಿ ಹಣಕಾಸು ತಂತ್ರಜ್ಞಾನದ ಬೆಳವಣಿಗೆಗೆ ಹೊಸ ನೀಲನಕ್ಷೆ ನೀಡಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕರ್ನಾಟಕ ಈಗಾಗಲೇ “ಫಿನ್ಟೆಕ್ ರಾಜಧಾನಿ’ಯಾಗಿ ಬೆಳೆಯುತ್ತಿದೆ. ಇದಕ್ಕೆ ಇನ್ನಷ್ಟು ಉತ್ತೇಜನ ನೀಡುವ ಅಗತ್ಯ ಇದ್ದು, ಈ ನಿಟ್ಟಿನಲ್ಲಿ ಬೆಂಗಳೂರು ಹೊರತಾಗಿ ಉಳಿದ ನಗರ ಮತ್ತು ಮಹಾನಗರಗಳಿಗೆ ಫಿನ್ಟೆಕ್ ಅನ್ನು ಪರಿಣಾಕಾರಿಯಾಗಿ ತೆಗೆದುಕೊಂಡು ಹೋಗಬೇಕಿದೆ. ಈ ದಿಸೆಯಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ವರದಿ ಬೆಳಕು ಚೆಲ್ಲಲಿದೆ.
ಬಹುತೇಕ ವಲಯಗಳಲ್ಲಿ ಫಿನ್ಟೆಕ್ ನೀತಿಗಳು ಕೇಂದ್ರದ ವ್ಯಾಪ್ತಿಯಲ್ಲಿ ಬರುತ್ತವೆ. ಇದರ ಹೊರತಾಗಿಯೂ ಹಲವಾರು ಕ್ಷೇತ್ರಗಳಲ್ಲಿ ರಾಜ್ಯದ ನೀತಿಗಳನ್ನು ಅಳವಡಿಸಲು ಅವಕಾಶ ಇದೆ. ಅದರ ಸಾಧ್ಯಾಸಾಧ್ಯತೆಗಳ ಜತೆಗೆ ಅದಕ್ಕೆ ಒತ್ತು ನೀಡಬೇಕಿದೆ. ಹಾಗೂ ಈಗಾಗಲೇ ಸ್ಟಾರ್ಟ್ಅಪ್ಗ್ಳ ತೊಟ್ಟಿಲು ಆಗಿರುವ ಕರ್ನಾಟಕದಲ್ಲಿ ಮತ್ತಷ್ಟು ಉತ್ತೇಜನ ನೀಡಬೇಕಿದೆ. ಈ ಮೂರು ಅಂಶಗಳ ಮೇಲೆ ವರದಿ ಕೇಂದ್ರೀಕೃತ ಆಗಿರಲಿದೆ ಎಂದು ಪ್ರಶಾಂತ್ ಪ್ರಕಾಶ್ ತಿಳಿಸಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.