![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Sep 18, 2019, 5:31 AM IST
ಬೆಂಗಳೂರು: ರಾಜ್ಯದ 22 ಜಿಲ್ಲೆಗಳಲ್ಲಿ ಪ್ರವಾಹದಿಂದ ಉಂಟಾದ ನಷ್ಟದ ನೈಜತೆ ಪರಿಶೀಲನೆ ಬಳಿಕ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಹಾನಿಗೊಳಗಾದ ಮನೆಗಳ ಸಂಖ್ಯೆ 2.50 ಲಕ್ಷದಿಂದ 1.50 ಲಕ್ಷಕ್ಕೆ ಇಳಿದಿದೆ. ಬೆಳೆ ನಷ್ಟ ಪ್ರಮಾಣವೂ 8.88 ಲಕ್ಷ ಹೆಕ್ಟೇರ್ಗಳಿಂದ 6.5 ಲಕ್ಷ ಹೆಕ್ಟೇರ್ಗಳಿಗೆ ಇಳಿಯುವ ಸಾಧ್ಯತೆ ಇದೆ!
ಇದಕ್ಕೆ ಕಾರಣ ಪ್ರವಾಹ ಪೀಡಿತ ಪ್ರದೇಶಗಳಲ್ಲಿ “ಬೋಗಸ್’ ಮನವಿಗಳ ಹಾವಳಿ. ಮನೆ ಕುಸಿತ, ಬೆಳೆ ನಷ್ಟ, ಜಾನುವಾರು ನಷ್ಟ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ಬೋಗಸ್ ಮನವಿಗಳು ಸಲ್ಲಿಕೆಯಾಗಿವೆ. ಇದೇ ಕಾರಣಕ್ಕೆ ಬೆಳಗಾವಿ ಭಾಗದಲ್ಲಿ ಪ್ರತಿ ಕುಟುಂಬಕ್ಕೆ ಹತ್ತು ಸಾವಿರ ರೂ. ತುರ್ತು ಪರಿಹಾರ ನೀಡುವ 1,200 ಅರ್ಜಿಗಳ ಇತ್ಯರ್ಥಕ್ಕೆ “ಬ್ರೇಕ್’ ಬಿದ್ದಿದೆ ಎನ್ನಲಾಗಿದೆ. ಜತೆಗೆ ಜಾನುವಾರು ಸಾವಿನ ಬಗ್ಗೆಯೂ ವ್ಯತ್ಯಾಸದ ಅಂಕಿ- ಅಂಶ ನೀಡಿ ಪರಿಹಾರ ಕೊಡಿಸುವುದಾಗಿ ಕೆಲವು ಮಧ್ಯವರ್ತಿಗಳು ಅಮಾಯಕ ಜನರ ಬಳಿ ಆಧಾರ್ ಕಾರ್ಡ್ ಸೇರಿ ದಾಖಲಾತಿ ಪಡೆಯುತ್ತಿರುವುದು ಬೆಳಕಿಗೆ ಬಂದಿದೆ.
ನಿಗಾ ತಂಡ ರಚನೆ
ಬೋಗಸ್ ಅರ್ಜಿಗಳಿಗೆ ಕಡಿವಾಣ ಹಾಕಲು ಕಂದಾಯ, ಕೃಷಿ, ತೋಟಗಾರಿಕೆ, ಸಹಕಾರ, ಪಶು ಸಂಗೋಪನ ಇಲಾಖೆ ಅಧಿಕಾರಿಗಳ ನಿಗಾ ತಂಡ ರಚನೆಗೆ ಸರಕಾರ ನಿರ್ಧರಿಸಿದ್ದು, ಅಧಿಕಾರಿಗಳ ಪರಿಶೀಲನೆ ಬಳಿಕವಷ್ಟೇ ಪರಿಹಾರಕ್ಕೆ ಶಿಫಾರಸು ಮಾಡಲು ತೀರ್ಮಾನಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಬೆಳಗಾವಿ, ಬಾಗಲಕೋಟೆ ಭಾಗದಲ್ಲಿ ಬೋಗಸ್ ಅರ್ಜಿಗಳ ಹಾವಳಿ ಹೆಚ್ಚಾಗಿದೆ.
ಕೇಂದ್ರಕ್ಕೆ ಪರಿಷ್ಕೃತ ಪ್ರಸ್ತಾವನೆ ಸಲ್ಲಿಕೆ
ಪ್ರವಾಹದಿಂದ ಉಂಟಾಗಿರುವ ನಷ್ಟಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರವು 35,160.81 ಕೋಟಿ ರೂ.ಗಳ ಪರಿಷ್ಕೃತ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಿದೆ. ಈ ಹಿಂದೆ 38,451.11 ಕೋಟಿ ರೂ. ಮೊತ್ತದ ಪ್ರಸ್ತಾವನೆ ಸಲ್ಲಿಸಲಾಗಿತ್ತಾದರೂ ಖಾಸಗಿ ಕಟ್ಟಡಗಳ ನಷ್ಟ ಹೊರತುಪಡಿಸಿ ನಷ್ಟದ ಅಂದಾಜು ಸಲ್ಲಿಸಲು ಸೂಚನೆ ನೀಡಿದ್ದ ಮೇರೆಗೆ ಈಗ 35,160.81 ಕೋಟಿ ರೂ. ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಎನ್ಡಿಆರ್ಎಫ್ ಮಾರ್ಗಸೂಚಿಯನ್ವಯ 3,891 ಕೋಟಿ ರೂ. ಪರಿಹಾರ ಕೇಂದ್ರದಿಂದ ಬರುವ ನಿರೀಕ್ಷೆಯಿದೆ. ಇದನ್ನು ಹೊರತುಪಡಿಸಿ ವಿಶೇಷ ಆನು ದಾನಕ್ಕೂ ರಾಜ್ಯ ಸರಕಾರ ಮನವಿ ಸಲ್ಲಿಸಿದೆ ಎಂದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.