ಪ್ರವಾಹದಿಂದ ಆಯುರ್ವೇದ ಉದ್ಯಮಕ್ಕೆ ಹೊಡೆತ


Team Udayavani, Aug 29, 2018, 6:00 AM IST

s-18.jpg

ಹುಬ್ಬಳ್ಳಿ: ಮಹಾಮಳೆಯಿಂದಾಗಿ ಕೇರಳದ ಜನಜೀವನ ಅಸ್ತವ್ಯಸ್ತಗೊಂಡಂತೆ ಸಸ್ಯಸಂಪತ್ತು ಕೂಡ ಹಾಳಾಗಿದೆ. ಆಯುರ್ವೇದ ಔಷಧಗಳ
ತಯಾರಿಕೆಗೆ ಖ್ಯಾತಿ ಪಡೆದಿರುವ ಕೇರಳದಲ್ಲಿ ಆಯುರ್ವೇದ ವನಗಳು ಕೊಚ್ಚಿ ಹೋಗಿದ್ದು, ಇದು ಆಯುರ್ವೇದ ಉದ್ಯಮಕ್ಕೆ ಧಕ್ಕೆ ಉಂಟು
ಮಾಡಿದೆ.

ಉತ್ತರ ಭಾರತದಲ್ಲಿ ಹಿಮಾಲಯ ಆಯುರ್ವೇದ ಸಸ್ಯವೈವಿಧ್ಯ ಸಿಗುವಂತೆ ದಕ್ಷಿಣ ಭಾರತದಲ್ಲಿ ಕೇರಳ ಆಯುರ್ವೇದ ಸಸ್ಯಗಳ ಕಣಜ. ದೇವರನಾಡು ಕೇರಳದಲ್ಲಿ ಸಸ್ಯಸಿರಿ ಮಳೆ ಹಾಗೂ ಭೂ ಕುಸಿತದಿಂದ ಹಾಳಾಗಿದೆ. ಇದರಿಂದ ಕರ್ನಾಟಕ ಹಾಗೂ ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಮೇಲೆ ಅವಲಂಬನೆ ಹೆಚ್ಚಾಗಲಿದೆ. ಕೆಲವು ಗಿಡಗಳು ಒಂದು ವರ್ಷದಲ್ಲಿ ಬೆಳೆದು ಫ‌ಲ ನೀಡಿದರೆ, ಇನ್ನು ಕೆಲವು ಹತ್ತಾರು ವರ್ಷ ಮರಗಳಾಗಿ ಬೆಳೆದ ನಂತರ ಆಯುರ್ವೇದ ಔಷಧಗಳಿಗೆ ಬಳಕೆಯಾಗುತ್ತವೆ. ಆಯುರ್ವೇದ ವನಗಳು ಹೆಚ್ಚಾಗಿರುವ ಪ್ರದೇಶಗಳಲ್ಲಿಯೇ ಮಳೆಯಿಂದ ಹಾನಿ ಪ್ರಮಾಣ
ಹೆಚ್ಚಾಗಿರುವುದರಿಂದ ಆತಂಕ ಹೆಚ್ಚಾಗಿದೆ. ಆಯುರ್ವೇದಕ್ಕೆ ಆದ್ಯತೆ ನೀಡಿದ ಕೇರಳ ಸರ್ಕಾರ ಆಯುರ್ವೇದವನ್ನು ಪ್ರವಾಸೋದ್ಯಮದ ಭಾಗವಾಗಿಸಿದೆ. ಆಯುರ್ವೇದ ಉತ್ತೇಜನಕ್ಕೆ ಆದ್ಯತೆ ನೀಡುತ್ತಿದೆ. ಮನೆ ಮನೆಯಲ್ಲೂ ಆಯುರ್ವೇದವಿದೆ. ಪಂಚಕರ್ಮ ಚಿಕಿತ್ಸೆಗಾಗಿಯೇ ಕೇರಳಕ್ಕೆ
ಹೋಗುವವರಿದ್ದಾರೆ. ಮತ್ತೆ ಆಯುರ್ವೇದ ಪ್ರವಾಸೋದ್ಯಮ ಚೇತರಿಸಿಕೊಳ್ಳಲು ಹಲವು ತಿಂಗಳುಗಳೇ ಬೇಕು.

ಕೇರಳದಲ್ಲಿ ಹಲವಾರು ಆಯುರ್ವೇದ  ಕಂಪನಿಗಳಿವೆ. ಅವುಗಳಲ್ಲಿ ಕೇರಳ ಆಯುರ್ವೇದ ಫಾರ್ಮಾ ಲಿಮಿಟೆಡ್‌, ಕೊಟ್ಟಾಯಂ ಆಯುರ್ವೇದ, ನಾಗಾರ್ಜುನ ಹರ್ಬಲ್ಸ್‌, ಮಲಬಾರ್‌ ಆಯುರ್ವೇದ, ಆರ್ಯವೈದ್ಯ ನಿಲಯಂ (ಎವಿಎಂ) ಪ್ರಮುಖ ಕಂಪನಿಗಳು. ಕೇರಳದ ಆಯುರ್ವೇದ ಉತ್ಪನ್ನಗಳಿಗೆ ಬ್ರ್ಯಾಂಡ್‌ ವ್ಯಾಲ್ಯು ಇದೆ. ಕೇರಳ ಆಯುರ್ವೇದ ಎಂದೇ ಹಲವು ಆಯುರ್ವೇದ ಔಷಧಗಳ ಮಾರಾಟ ನಡೆಯುತ್ತದೆ. ರಾಜ್ಯದಲ್ಲಿ ಸಹಸ್ರಾರು ಜನರು ಕೇರಳ ಕಂಪನಿಗಳ ಆಯುರ್ವೇದ ಉತ್ಪನ್ನಗಳನ್ನು ಬಳಕೆ ಮಾಡುತ್ತಾರೆ. 

ಪಶ್ಚಿಮ ಘಟ್ಟದ ಮೇಲೆ ಭಾರ: ಕೇರಳದ ನೆರೆ ಹಾವಳಿಯಿಂದಾಗಿ ಆಯುರ್ವೇದ ಗಿಡ-ಮರಗಳು ಕೊಚ್ಚಿ ಹೋಗಿದ್ದರಿಂದ ಮುಂದೆ ಆಯುರ್ವೇದ ಉತ್ಪನ್ನಗಳ ದರ ಹೆಚ್ಚಳ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಅಲ್ಲದೇ ಔಷಧ ತಯಾರಿಕೆಯಲ್ಲಿ ಬೇಕಾದ ಎಲ್ಲ ದ್ರವ್ಯಗಳು ಸಿಗದಿದ್ದರೆ ಕಲಬೆರಕೆ ಕೂಡ ಮಾಡಬಹುದು ಇಲ್ಲವೇ 10 ದ್ರವ್ಯಗಳ ಔಷಧಿಗಳಲ್ಲಿ 7-8 ದ್ರವ್ಯಗಳನ್ನು ಮಾತ್ರ ಬಳಕೆ ಮಾಡಬಹುದು. ಮಹತ್ವದ ದ್ರವ್ಯಗಳನ್ನು ಔಷಧಿ
ಒಳಗೊಳ್ಳದಿದ್ದರೆ ಔಷಧಗಳ ಗುಣಮಟ್ಟ ಸಹಜವಾಗಿಯೇ ಕಡಿಮೆಯಾಗುತ್ತದೆ ಎನ್ನುತ್ತಾರೆ ಆಯುರ್ವೇದ ತಜ್ಞರು.

ದರ ಹೆಚ್ಚಳ ಸಾಧ್ಯತೆ
ಕೇರಳದ ಆಯುರ್ವೇದ ಸಸ್ಯಸಂಕುಲ ಸಹಜ ಸ್ಥಿತಿಗೆ ಬರಲು ಕನಿಷ್ಠ 20 ವರ್ಷಗಳಾದರೂ ಬೇಕು ಎಂದು ಆಯುರ್ವೇದ ತಜ್ಞರು ಅಂದಾಜಿಸಿದ್ದಾರೆ. ಇದರಿಂದ ಪಶ್ಚಿಮ ಘಟ್ಟ ಸೇರಿ ಉತ್ತರ ಭಾರತದ ಆಯುರ್ವೇದ ವನಗಳ ಮೇಲೆ ಅವಲಂಬನೆ ಹೆಚ್ಚಾಗಲಿದೆ. ಕೇರಳ ಪ್ರವಾಹದಿಂದಾಗಿ ಹಲವು ಆಯುರ್ವೇದ ಔಷಧಗಳ ದರದಲ್ಲಿ ಹೆಚ್ಚಳವಾದರೂ ಅಚ್ಚರಿಯಿಲ್ಲ ಎಂದು ಆಯುರ್ವೇದ ತಜ್ಞರಾದ ಡಾ| ಎ.ಎಸ್‌.ಪ್ರಶಾಂತ, ಡಾ| ಜೆ.ಆರ್‌.ಜೋಶಿ,
ಡಾ| ಬಿ.ಬಿ.ಜೋಶಿ ಅಭಿಪ್ರಾಯಪಡುತ್ತಾರೆ. 

● ವಿಶ್ವನಾಥ ಕೋಟಿ

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.