ಪಾರ್ಕಿಂಗ್‌ ಅವ್ಯವಸ್ಥೆ ಸರಿಪಡಿಸುವತ್ತ ಗಮನ ಇರಲಿ


Team Udayavani, Mar 9, 2023, 6:27 AM IST

ಪಾರ್ಕಿಂಗ್‌ ಅವ್ಯವಸ್ಥೆ ಸರಿಪಡಿಸುವತ್ತ ಗಮನ ಇರಲಿ

ಪ್ರೊ| ಎಂ.ಎನ್‌. ಶ್ರೀಹರಿ, ಸಂಚಾರ ತಜ್ಞ
ಬೆಂಗಳೂರು: ದಿನೇದಿನೆ ಶರವೇಗದಲ್ಲಿ ಬೆಳೆಯುತ್ತಿರುವ ಸಿಲಿಕಾನ್‌ ಸಿಟಿ ಬೆಂಗಳೂರಿಗೆ ಸಂಚಾರ ದಟ್ಟಣೆಯೇ ದೊಡ್ಡ ಸವಾಲಾಗಿದೆ. ಮೆಟ್ರೋ, ಸರ್ಬನ್‌ ರೈಲುಗಳ ಸಂಚಾರ, ಸಾರ್ವಜನಿಕ ಸಾರಿಗೆ ಹೆಚ್ಚಳವಾಗಿದ್ದರೂ ಟ್ರಾಫಿಕ್‌ ಸಮಸ್ಯೆಗೆ ಪೂರ್ಣ ಪ್ರಮಾಣದಲ್ಲಿ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಈ ನಿಟ್ಟಿನಲ್ಲಿ ರಾಜಕೀಯ ಪಕ್ಷಗಳು ಈ ಬಾರಿಯ ಚುನಾವಣ ಪ್ರಣಾಳಿಕೆಯಲ್ಲಿ ಬೆಂಗಳೂರಿನ ಸಂಚಾರ ದಟ್ಟಣೆ ಪರಿಹಾರದ ಬಗ್ಗೆಯೇ ಹೆಚ್ಚು ಆದ್ಯತೆ ನೀಡಬೇಕು.

ಬೆಂಗಳೂರು ಸಂಚಾರ ದಟ್ಟಣೆಯಲ್ಲಿ ವಿಶ್ವದ ಹತ್ತು ನಗರಗಳ ಪಟ್ಟಿಯಲ್ಲಿದೆ. ಹೀಗಾಗಿ ಸಂಚಾರ ನಿರ್ವಹಣೆಗೆ ರಾಜ್ಯ ಮತ್ತು ಕೇಂದ್ರ ಸರಕಾರಗಳು ಕೈಜೋಡಿಸಿ ಒಟ್ಟಿಗೆ ಕೆಲಸ ಮಾಡಬೇಕಿದೆ. ನಗರದ ರಸ್ತೆಗಳ ಎರಡು ಬದಿಯಲ್ಲಿ ವಾಹನಗಳ ಪಾರ್ಕಿಂಗ್‌ಗೆ ಅವಕಾಶ ನೀಡಲಾಗಿದೆ. ಅದರಿಂದ ವಾಹನಗಳ ಸಂಚಾರಕ್ಕೆ ತೊಡಕಾಗುತ್ತದೆ. ಆದರಿಂದ ಸಂಚಾರ ಪೊಲೀಸರು ಎರಡು ಕಡೆ ನೋ-ಪಾರ್ಕಿಂಗ್‌ ಬೋರ್ಡ್‌ ಹಾಕಬಹುದು. ಸಾಧ್ಯವಾದರೆ ದಂಡ ಕೂಡ ವಿಧಿಸಬಹುದು. ಆದರೆ ಅದು ಆಗುತ್ತಿಲ್ಲ.

ಮತ್ತೊಂದೆಡೆ ಬಿಬಿಎಂಪಿ ಅಧಿಕಾರಿಗಳು ನಗರದ ಪ್ರತೀ ವಾರ್ಡ್‌ನಲ್ಲಿ ನಾಲ್ಕೈದು ಸ್ಥಳಗಳನ್ನು ಗುರುತಿಸಿ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಿದರೆ ಸಾಧ್ಯವಾದಷ್ಟು ಪಾರ್ಕಿಂಗ್‌ ಸಮಸ್ಯೆ ಬಗೆಹರಿಸಬಹುದು. ಈ ಹಿಂದೆ ವಾಹನಗಳ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಿಕೊಳ್ಳದ ಕಟ್ಟಡ ಅಥವಾ ಮನೆಗಳ ನಿರ್ಮಾಣಕ್ಕೆ ಅವಕಾಶ ನೀಡಬಾರದು ಎಂಬ ನಿಯಮ ಇತ್ತು. ಅದು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಅಧಿಕಾರಿಗಳು ಇಚ್ಛಾಶಕ್ತಿ ಇಲ್ಲದೆ ಕೆಲಸ ಮಾಡುತ್ತಿದ್ದಾರೆ.

ಇನ್ನೂ ಮೆಟ್ರೋ ರೈಲುಗಳ ಸಂಚಾರದಿಂದ ಕೆಲವೆಡೆ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಬರುತ್ತಿದ್ದರೂ ಮೆಟ್ರೋ ನಿಲ್ದಾಣದ ಆಸು-ಪಾಸಿನಲ್ಲಿ ವಾಹನಗಳ ನಿಲುಗಡೆ ಹಾವಳಿ ಹೆಚ್ಚಾಗಿದೆ. ಒಂದೆರಡು ಮೆಟ್ರೋ ನಿಲ್ದಾಣಗಳಲ್ಲಿ ವಾಹನಗಳ ಪಾರ್ಕಿಂಗ್‌ಗೆ ಅವಕಾಶ ನೀಡಿದರೂ ಬಹುತೇಕ ನಿಲ್ದಾಣಗಳ ಸುತ್ತ-ಮುತ್ತ ಸುಮಾರು ಅರ್ಧ ಕಿ.ಮೀಟರ್‌ ವ್ಯಾಪ್ತಿಯ ರಸ್ತೆ ಇಕ್ಕೆಲಗಳಲ್ಲೇ ವಾಹನಗಳ ನಿಲುಗಡೆ ಮಾಡಲಾಗುತ್ತಿದೆ. ಜತೆಗೆ ಮೆಟ್ರೋ ಔಟರ್‌ರಿಂಗ್‌ ಮಾರ್ಗ ಕಲ್ಪಿಸುವುದರಿಂದ ನಗರದಲ್ಲಿ ಕೊಂಚ ವಾಹನ ದಟ್ಟಣೆ ಕಡಿಮೆ ಆಗುವ ಸಾಧ್ಯತೆಯಿದೆ. ಅಲ್ಲದೆ ಗ್ರೀನ್‌ ಕಾರಿಡಾರ್‌ ಮೂಲಕವೇ ಸಂಚಾರ ದಟ್ಟಣೆ ನಿಯಂತ್ರಿಸಲು ಸಾಧ್ಯವಿದೆ. ಈ ಅಂಶಗಳನ್ನು ರಾಜಕೀಯ ಪಕ್ಷಗಳು ತಮ್ಮ ಪ್ರಣಾಳಿಕೆಯಲ್ಲಿ ಉಲ್ಲೇಖೀಸಬೇಕು.

ಸದ್ಯ 55 ಕಿ.ಮೀಟರ್‌ ವ್ಯಾಪ್ತಿಯಲ್ಲಿರುವ ಮೆಟ್ರೋ ಮಾರ್ಗವನ್ನು 300 ಕಿ.ಮೀಟರ್‌ಗೆ ಹೆಚ್ಚಿಸಬೇಕು.

ಮುಂಬಯಿ ಮಾದರಿಯಲ್ಲಿ ಮೆಟ್ರೋ, ಸರ್ಬನ್‌ ರೈಲು ಮಾರ್ಗಗಳ ಅಭಿವೃದ್ಧಿ ಮಾಡಬೇಕು.

ಪಾರ್ಕಿಂಗ್‌ಗೆ ಜಾಗಕ್ಕೆ ಅವಕಾಶ ಕೊಡದ ಮನೆ, ಕಟ್ಟಡ ನಿರ್ಮಾಣಕ್ಕೆ ಅವಕಾಶ ಕೊಡಬಾರದು.

ಗ್ರೀನ್‌ ಕಾರಿಡಾರ್‌ ಮಾಡಬಹುದು.

ಏರಿಯಾ ಟ್ರಾಫಿಕ್‌ ಕಂಟ್ರೋಲ್‌ ಆ್ಯಂಡ್‌ ಮ್ಯಾನೇಜ್‌ಮೆಂಟ್‌(ಎಟಿಸಿ) ಮೂಲಕ ಅಧ್ಯಯನ ನಡೆಸಬೇಕು.

ಹೊರ ಮತ್ತು ಒಳ ವರ್ತುಲ ರಸ್ತೆಗಳ ಮಾದರಿಯಲ್ಲಿ ಮೆಟ್ರೋ ಔಟರ್‌ ರಿಂಗ್‌ ಮಾರ್ಗ ಸ್ಥಾಪಿಸಬೇಕು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Chikkamagaluru: ಸಾವಿನಲ್ಲೂ ಸಾರ್ಥಕತೆ; ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು

9

Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.