Health Department ಡೆಂಗ್ಯೂಗೆ ವಾರ್‌ ರೂಂ, ಟಾಸ್ಕ್ ಫೋರ್ಸ್‌ ರಚನೆ

2ಕ್ಕಿಂತ ಹೆಚ್ಚು ಪ್ರಕರಣವಿದ್ದರೆ ಅದು ಹಾಟ್‌ಸ್ಪಾಟ್‌ ; ಮುನ್ನೆಚ್ಚರಿಕೆ ಕ್ರಮಕ್ಕೆ ಜಿಲ್ಲಾಡಳಿತಕ್ಕೆ ಸೂಚನೆ

Team Udayavani, Jul 12, 2024, 7:35 AM IST

Health Department ಡೆಂಗ್ಯೂಗೆ ವಾರ್‌ ರೂಂ, ಟಾಸ್ಕ್ ಫೋರ್ಸ್‌ ರಚನೆ

ಬೆಂಗಳೂರು: ರಾಜ್ಯದಲ್ಲಿ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣಗಳ ಸೂಕ್ಷ್ಮ ಮೇಲ್ವಿಚಾರಣೆ ಹಾಗೂ ಉಸ್ತುವಾರಿಗೆ ಎನ್‌ವಿಬಿಡಿಸಿಪಿ (ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣ ಕಾರ್ಯಕ್ರಮ) ವಿಭಾಗದಿಂದ ಆರೋಗ್ಯಸೌಧದಲ್ಲಿ “ಡೆಂಗ್ಯೂ ವಾರ್‌ ರೂಂ’ ತೆರೆದು ಡೆಂಗ್ಯೂ ನಿಯಂತ್ರಣ ಹಾಗೂ ಮುಂಜಾಗ್ರತೆಗೆ ಸಂಬಂಧಿಸಿ ಹೊಸ ಸುತ್ತೋಲೆಯನ್ನು ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿದೆ.

ರಾಜ್ಯದ ಪ್ರತೀ ಜಿಲ್ಲೆ ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಗ್ಯೂ ಪರಿಸ್ಥಿತಿ ಮೇಲ್ವಿಚಾರಣೆ ಹಾಗೂ ದತ್ತಾಂಶ, ಮಾಹಿತಿ ಸಂಗ್ರಹಕ್ಕಾಗಿ ಕಂಟ್ರೋಲ್‌ ರೂಂ ಹಾಗೂ ಡೆಂಗ್ಯೂ ವಾರ್‌ ರೂಂ ಪ್ರಾರಂಭಿಸಬೇಕು. ಪರಿಸ್ಥಿತಿಯ ದೈನಂದಿನ ನಿರ್ವಹಣೆಗಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಟಾಸ್ಕ್ ಫೋರ್ಸ್‌ ರಚನೆಯಾಗಬೇಕು. ವಾರಕ್ಕೊಮ್ಮೆ ಸಭೆ ಸೇರಿ ಡೆಂಗ್ಯೂ ನಿಯಂತ್ರಣವನ್ನು ಪರಿಶೀಲನೆ ನಡೆಸಿ, ಸ್ಥಳೀಯ ಪರಿಸ್ಥಿತಿ ನಿರ್ವಹಣೆಗೆ ಅಗತ್ಯವಿರುವ ಸೂಚನೆಯನ್ನು ನೀಡಬೇಕು ಎಂದು ತಿಳಿಸಲಾಗಿದೆ.

14 ದಿನಗಳ ಆರೋಗ್ಯ ವರದಿ
ಡೆಂಗ್ಯೂ ಲಕ್ಷಣ ಕಂಡು ಬಂದ ದಿನದಿಂದ 14 ದಿನಗಳ ವರೆಗೆ ಆರೋಗ್ಯ ಸ್ಥಿತಿಯನ್ನು ಅನುಪಾಲನೆ ಮಾಡಬೇಕು. ಆರೋಗ್ಯ ಸಿಬಂದಿ ನಿಗದಿತ ವರದಿ ನಮೂನೆಯಲ್ಲಿ ರೋಗಿಯ ಸಂಪೂರ್ಣ ವಿವರವನ್ನು ರಾಜ್ಯ ಡೆಂಗ್ಯೂ ವಾರ್‌ ರೂಂಗೆ ಸಲ್ಲಿಸಬೇಕು. ಸಾಧಾರಣ, ಮಧ್ಯಮ ಹಾಗೂ ತೀವ್ರ ಜ್ವರ ಚಿನ್ಹೆಗಳ ಕುರಿತು ಜನರಿಗೆ ಅರಿವು ಮೂಡಿಸ ಬೇಕು ಎಂದು ಸೂಚಿಸಲಾಗಿದೆ.

200 ರೂ. ಗೌರವಧನ
ಆರೋಗ್ಯ ಸಿಬಂದಿ ಹಾಗೂ ಆಶಾ ಕಾರ್ಯಕರ್ತೆರು ತಮ್ಮ ವ್ಯಾಪ್ತಿಯ ಎಲ್ಲ ಮನೆಗಳ, ಶಾಲಾ, ಕಾಲೇಜು, ಕಚೇರಿಗಳಲ್ಲಿ 15 ದಿನಗಳಿಗೊಮ್ಮೆ ಈಡಿಸ್‌ ಲಾರ್ವಾ ಸಮೀಕ್ಷೆ ಹಾಗೂ ಉತ್ಪತ್ತಿ ತಾಣ ಚಟುವಟಿಕೆಗಳನ್ನು ಪೂರ್ಣಗೊಳಿಸಬೇಕು. ನಗರ/ಪಟ್ಟಣ ಪ್ರದೇಶದಲ್ಲಿ ಈ ಚಟುವಟಿಕೆಗೆ ಬಳಸಿಕೊಳ್ಳುವ ಆರೋಗ್ಯ ಹಾಗೂ ಆಶಾ ಕಾರ್ಯಕರ್ತೆಯರಿಗೆ ಆಯಾ ಸ್ಥಳೀಯ ಸಂಸ್ಥೆಗಳು ದಿನಕ್ಕೆ 200 ರೂ. ಗೌರವಧನ ಪಾವತಿಸಬೇಕು. ಜತೆಗೆ ಅಗತ್ಯ ಸಂಖ್ಯೆಯ ಸ್ವಯಂ ಸೇವಕರನ್ನು ಒದಗಿಸಬೇಕು ಎಂದು ಇಲಾಖೆ ಸೂಚಿಸಿದೆ.

ಹೆಚ್ಚುವರಿ ಅನುದಾನ ಜಿ.ಪಂ., ತಾ.ಪಂ. ಹೆಗಲಿಗೆ
ಬಿಬಿಎಂಪಿ, ಜಿಲ್ಲೆಗಳಲ್ಲಿನ ಡೆಂಗ್ಯೂ ಹಾಟ್‌ಸ್ಪಾಟ್‌ಗಳನ್ನು ಗುರುತಿಸಿ ಸಂಪೂರ್ಣ ವಿವರವನ್ನು ರಾಜ್ಯ ಡೆಂಗ್ಯೂ ವಾರ್‌ ರೂಂಗೆ ಸಲ್ಲಿಸಬೇಕು. ಆ ಪ್ರದೇಶದಲ್ಲಿ ಫೀವರ್‌ ಕ್ಲಿನಿಕ್‌ಗಳನ್ನು ಸಕ್ರಿಯಗೊಳಿಸುವುದರ ಜತೆಗೆ ಬಿಪಿಎಲ್‌ ಕುಟುಂಬಗಳಿಗೆ ಸೊಳ್ಳೆ ನಿರೋಧಕ ಬೇವಿನ ಎಣ್ಣೆ, ಸೊಳ್ಳೆ ಪರದೆಗಳ ವಿತರಣೆಯನ್ನು ಖಚಿತಪಡಿಸಿಕೊಳ್ಳಬೇಕು. ಇದಕ್ಕೆ ಅಗತ್ಯವಿರುವ ಅನುದಾನವನ್ನು ಎಆರ್‌ಎಸ್‌/ಎಬಿಎಕೆಆರ್‌-ಕೆ ನಿಯಮಾನುಸಾರ ಬಳಸಿಕೊಳ್ಳಬೇಕು. ಆರೋಗ್ಯ ಕೇಂದ್ರಗಳಿಗೆ ಹೆಚ್ಚುವರಿ ಅನುದಾನ ಅಗತ್ಯವಿದ್ದರೆ ಜಿಲ್ಲಾ ಹಾಗೂ ತಾಲೂಕು ಪಂಚಾಯತ್‌ ಭರಿಸುವಂತೆ ಸೂಚಿಸಿದೆ.

ಮುಂಜಾಗ್ರತೆ-ಮುನ್ನೆಚ್ಚರಿಕೆ ಕ್ರಮಗಳು
-ಒಂದೇ ಸ್ಥಳದಲ್ಲಿ ಎರಡಕ್ಕಿಂತ ಹೆಚ್ಚು ಪ್ರಕರಣ ವರದಿಯಾದರೆ ಆ ಸ್ಥಳಗಳನ್ನು ಹಾಟ್‌ಸ್ಪಾಟ್‌ಗಳಾಗಿ ಗುರುತಿಸುವಿಕೆ
– ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು
– ಜಿಲ್ಲಾ ಹಾಗೂ ತಾಲೂಕು ಆಸ್ಪತ್ರೆಯಲ್ಲಿ ಕನಿಷ್ಠ 5ರಿಂದ 10 ಬೆಡ್‌ ಮೀಸಲು
– ಡೆಂಗ್ಯೂ ಪರೀಕ್ಷೆ, ಚಿಕಿತ್ಸೆ ಹಾಗೂ ನಿರ್ವಹಣೆಯ ಸೌಲಭ್ಯ ಸಂಪೂರ್ಣ ಉಚಿತ
– ಚಿಕಿತ್ಸೆಗೆ ಅಗತ್ಯವಿರುವ ಔಷಧ, ಬಿಳಿ ರಕ್ತಕಣ ಹಾಗೂ ಇತರ ಅಗತ್ಯ ಔಷಧ ಶೇಖರಣೆ
– ನ್ಯಾಶನಲ್‌ ಗೈಡ್‌ಲೈನ್ಸ್‌ ಆನ್‌ ಡೆಂಗ್ಯೂ ಫೀವರ್‌ ಮ್ಯಾನೇಜ್ಮೆಂಟ್ ಶಿಷ್ಟಾಚಾರ ಪಾಲನೆ
– ಡೆಂಗ್ಯೂ ಹಾಟ್‌ಸ್ಪಾಟ್‌ ಪ್ರದೇಶದಲ್ಲಿ ಫೀವರ್‌ ಕ್ಲಿನಿಕ್‌ ಸಕ್ರಿಯ
– ಹಾಟ್‌ಸ್ಪಾಟ್‌ಗಳಲ್ಲಿ ಲಾರ್ವಾ ನಾಶ ತೀವ್ರಗೊಳಿಸಲು ಸೂಚನೆ
– ಹಾಟ್‌ಸ್ಪಾಟ್‌ನ ಬಿಪಿಎಲ್‌ ಕುಟುಂಬಕ್ಕೆ ಸೊಳ್ಳೆ ನಿರೋಧಕ ಎಣ್ಣೆ ವಿತರಣೆ

ಟಾಪ್ ನ್ಯೂಸ್

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

BSY ಪೋಕ್ಸೋ ಪ್ರಕರಣ: ಸೆ. 19ಕ್ಕೆ ವಿಚಾರಣೆ ಮುಂದೂಡಿಕೆ

BSY ಪೋಕ್ಸೋ ಪ್ರಕರಣ: ಸೆ. 19ಕ್ಕೆ ವಿಚಾರಣೆ ಮುಂದೂಡಿಕೆ

ಕೊನೆಗೂ 3 ವಿಧೇಯಕಕ್ಕೆ ಗವರ್ನರ ಅಸ್ತು

Bengaluru: ಕೊನೆಗೂ 3 ವಿಧೇಯಕಕ್ಕೆ ಗವರ್ನರ ಅಸ್ತು

R-Ashok

CM ಕುರ್ಚಿಗೆ ಕಾಂಗ್ರೆಸ್ಸಿಗರ ಕಾದಾಟ: ಆರ್‌.ಅಶೋಕ್‌ ವ್ಯಂಗ್ಯ

1-hunsur

Hunsur ನಗರಸಭೆ; ಎನ್‌ಡಿಎ ಪಾಲಾದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ:ಕೈ ಪ್ರತಿಭಟನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.