ಕಾಂಗ್ರೆಸ್‌ ಸರ್ಕಾರ 5 ಗ್ಯಾರಂಟಿಗಳಿಗೆ ಷರತ್ತು: ಬೊಮ್ಮಾಯಿ ಟೀಕೆ

ಸ್ಪಷ್ಟ ನೀತಿ ಇಲ್ಲದ ಕವಲು ದಾರಿಯಲ್ಲಿ ಸರ್ಕಾರ ಸಾಗುತ್ತಿದೆ ಎಂದು ಹರಿಹಾಯ್ದ ಮಾಜಿ ಸಿಎಂ

Team Udayavani, Jul 11, 2023, 6:15 AM IST

ಕಾಂಗ್ರೆಸ್‌ ಸರ್ಕಾರ 5 ಗ್ಯಾರಂಟಿಗಳಿಗೆ ಷರತ್ತು: ಬೊಮ್ಮಾಯಿ ಟೀಕೆ

ವಿಧಾನಸಭೆ: ಕಾಂಗ್ರೆಸ್‌ ಸರ್ಕಾರ 5 ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸುವ ಬದಲು “ದೇತೋ… ದಿಲಾತೋ.. ದೇನೇವಾಲೋ ಕೋ ದಿಖಾತೋ’ ಎನ್ನುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟೀಕಿಸಿದರು.

ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯ ಬೆಂಬಲಿಸಿ ಮಾತನಾಡಿದ ಅವರು, 5 ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಟೀಕಿಸಿದರಲ್ಲದೆ, ಅದರಲ್ಲಿನ ಹುಳುಕುಗಳನ್ನೂ ಎಳೆ ಎಳೆಯಾಗಿ ಬಿಡಿಸಿಟ್ಟರು.

ಚುನಾವಣೆಗೂ ಮೊದಲು ನೀಡಿದ್ದ ಗ್ಯಾರಂಟಿ ಕಾರ್ಡ್‌ಗೂ, ಜಾರಿ ಹಂತದಲ್ಲಿರುವ ಗ್ಯಾರಂಟಿಗಳಿಗೂ, ರಾಜ್ಯಪಾಲರ ಭಾಷಣಕ್ಕೂ, ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ಗೂ ಭೂಮಿ-ಆಕಾಶದಷ್ಟು ಅಂತರವಿದೆ. ನುಡಿದಂತೆ ನಡೆಯದ, ಸ್ಪಷ್ಟ ನೀತಿ ಇಲ್ಲದ ಕವಲು ದಾರಿಯಲ್ಲಿ ಸರ್ಕಾರ ಸಾಗುತ್ತಿದೆ. ಇವರು ಆಡುವುದೊಂದು, ಮಾಡುವುದೊಂದು ಎಂದು ಹರಿಹಾಯ್ದರು.

ಎಷ್ಟು ದಿನ ಈ ನಗದು ಭಾಗ್ಯ?: ಆರಂಭದಲ್ಲಿ 10 ಕೆ.ಜಿ. ಅಕ್ಕಿ ಎಂದಿದ್ದವರು, ಹಣ ತಿನ್ನಲು ಸಾಧ್ಯವೇ ಎಂದೆಲ್ಲಾ ಪ್ರಶ್ನಿಸಿದ್ದವರು ಇದೀಗ 170 ರೂ. ಕೊಡುತ್ತಿದ್ದೀರಿ. ಅನ್ನಭಾಗ್ಯದ ಬದಲು ಇನ್ನೆಷ್ಟು ತಿಂಗಳು ಈ ನಗದು ಭಾಗ್ಯ ಕೊಡುತ್ತೀರಿ? ಕಾಳಸಂತೆ ದಂಧೆಕೋರರಿಗೆ ಕಡಿವಾಣ ಹಾಕದಿದ್ದರೆ, ಅನ್ನಭಾಗ್ಯವು ಕನ್ನಭಾಗ್ಯವಾಗಲಿದೆ ಎಂದು ಎಚ್ಚರಿಸಿದರು.

ನಕಲಿ ಡಿಪ್ಲೊಮಾ ಪ್ರಮಾಣಪತ್ರ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಪದವಿ, ಡಿಪ್ಲೊಮಾ ಪಡೆದು ಉದ್ಯೋಗ ಸಿಗದವರಿಗೆ ಯುವನಿಧಿ ಎಂದಿದ್ದೀರಿ. ಅನೇಕರು ನಕಲಿ ಡಿಪ್ಲೊಮಾ ಪ್ರಮಾಣಪತ್ರ ಪಡೆಯುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಗಮನ ಹರಿಸಿದೆಯೇ? ನಿಜವಾದ ನಿರುದ್ಯೋಗಿಗಳಿಗೆ ಈ ಹಣ ತಲುಪುವ ಬದಲು ನಕಲಿ ಪ್ರಮಾಣಪತ್ರ ಹೊಂದಿರುವವರಿಗೆ ತಲುಪುವ ಅಪಾಯವಿದೆ. ಯುವಕರ ದಾರಿ ತಪ್ಪಿಸುವ ನಿಧಿ ಇದಾಗಲಿದೆ.

ಬಡವರ ಬದುಕಿಗೆ ಮಿತಿ ಹೇರಿದ ಗೃಹಜ್ಯೋತಿ: ಎಲ್ಲರಿಗೂ 200 ಯುನಿಟ್‌ ಉಚಿತ ವಿದ್ಯುತ್‌ ಎಂದಿದ್ದ ಸರ್ಕಾರ, ವಾರ್ಷಿಕ ಸರಾಸರಿ ಬಳಕೆಯ ಮೇಲೆ ಹೆಚ್ಚುವರಿಯಾಗಿ 10 ಯುನಿಟ್‌ಗಳನ್ನಷ್ಟೇ ಬಳಸಲು ಮಿತಿ ಹೇರಿದೆ. ಈ ಮೂಲಕ ಜನರನ್ನು ಯಾಮಾರಿಸಿದೆ. ಬಡವರ ಆಸೆಗೆ ಮಿತಿ ಹೇರಿದೆ. ಹೀಗೇ ಆದರೆ, ಬಡತನದಿಂದ ಮೇಲೆ ಬರಲು ಅಗತ್ಯ ಮೂಲಸೌಕರ್ಯಗಳನ್ನು ಪಡೆಯುವುದು ಹೇಗೆ ಎಂದು ಪ್ರಶ್ನಿಸಿದರು.

ಗೃಹಲಕ್ಷ್ಮೀಗೆ ಗ್ರಹಣ, ಶಕ್ತಿಗೆ ಗರ: ಗೃಹಲಕ್ಷ್ಮೀ ಯೋಜನೆ ಇದುವರೆಗೆ ಬಾಲಗ್ರಹದಿಂದ ಹೊರಬರಲಾಗಿಲ್ಲ. ದುಡಿಯುವ ಶಕ್ತಿ ಇರುವ ಮಹಿಳೆಯರಿಗೆ ಸ್ತ್ರೀ ಸಾಮರ್ಥ್ಯದಂತಹ ಯೋಜನೆಗಳಡಿ ನೆರವು ನೀಡುವ ಬದಲು ಅತ್ತೆ-ಸೊಸೆ ನಡುವೆ ಜಗಳ ಹಚ್ಚುವ ಯೋಜನೆ ಇದಾಗಿದೆ. ಇನ್ನು ಪುರುಷರಿಗೂ ಮಹಿಳೆಯರ ಹೆಸರಿನಲ್ಲಿ ಶಕ್ತಿ ಯೋಜನೆ ಟಿಕೆಟ್‌ ಸಿಗುತ್ತಿವೆ. ಇದೆಲ್ಲದರ ಬಗ್ಗೆ ಸರ್ಕಾರ ಲಕ್ಷ್ಯ ವಹಿಸಬೇಕಿದೆ.

ಆರ್ಥಿಕತೆ ಮೇಲೆ ಶಾಶ್ವತ ಭಾರ
ಗ್ಯಾರಂಟಿ ಜಾರಿಗೆ 52 ಸಾವಿರ ಕೋಟಿ ರೂ. ಖರ್ಚಾಗುವ ಅಂದಾಜು ಮಾಡಿದ್ದೀರಿ. ದೇಶ ಹಾಗೂ ರಾಜ್ಯದ ಆಂತರಿಕ ನಿವ್ವಳ ಉತ್ಪನ್ನ (ಜಿಎಸ್‌ಡಿಪಿ) ಹೆಚ್ಚಾಗಿರುವುದರಿಂದ ಹೆಚ್ಚುವರಿ ಸಾಲ ಮಾಡಲು ಸಾಧ್ಯವಾಗಿದೆ. ಪ್ರತಿ ವರ್ಷ ಈ 52 ಸಾವಿರ ಕೋಟಿ ರೂ. ಹೆಚ್ಚಾಗುತ್ತಲೇ ಹೋಗುತ್ತದೆ. ಜನರ ತೆರಿಗೆ ಹಣ ಹೇಗೆ ಬಳಸಬೇಕೆಂಬ ಬಗ್ಗೆ ಸರ್ಕಾರ ಯೋಚಿಸಬೇಕು. ಇದು ರಾಜ್ಯದ ಆರ್ಥಿಕತೆ ಮೇಲೆ, ಬಜೆಟ್‌ ಮೇಲೆ ಶಾಶ್ವತ ಭಾರ ಆಗಲಿದೆ. ಇದಕ್ಕೆ ಹೊಣೆಗಾರರು ಯಾರು ಎಂದು ಬೊಮ್ಮಾಯಿ ಪ್ರಶ್ನಿಸಿದರು.

10 ವರ್ಷದ ಭ್ರಷ್ಟಾಚಾರ ಪ್ರಕರಣಗಳ ತನಿಖೆ
ಲೋಕಾಯುಕ್ತ ಸಂಸ್ಥೆಯನ್ನು ನಿಷ್ಕ್ರಿಯಗೊಳಿಸಿದ ನೀವು ಭ್ರಷ್ಟಾಚಾರ ಹೆಚ್ಚಾಗಿದೆ ಎಂಬುದನ್ನು ರಾಜ್ಯಪಾಲರ ಭಾಷಣದಲ್ಲಿ ಹೇಳಿಸಿದ್ದೀರಿ. ಎಸಿಬಿ ಮೂಲಕ ಉನ್ನತ ಮಟ್ಟದ ಭ್ರಷ್ಟಾಚಾರವನ್ನು ಸಲಹಲಾಗುತ್ತಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು. ನಿಜಕ್ಕೂ ಭ್ರಷ್ಟಾಚಾರವನ್ನು ಕನಿಷ್ಠಗೊಳಿಸಬೇಕಿದ್ದರೆ 2013 ರಿಂದ 2023 ರವರೆಗಿನ 10 ವರ್ಷಗಳ ಭ್ರಷ್ಟಾಚಾರ ಪ್ರಕರಣಗಳನ್ನು ಆಯೋಗವೊಂದರ ಮೂಲಕ ತನಿಖೆಗೊಪ್ಪಿಸಿ ಎಂದು ಸವಾಲು ಹಾಕಿದರು.

ಎಲ್ಲ ಜಾತಿಗಳನ್ನು ಸಮಾನವಾಗಿ ಕಾಣುವುದರ ಜೊತೆಗೆ ಜಾತಿ ಮೀರಿ ಯೋಚಿಸಬೇಕು. ಜಾತಿಗಳ ನಡುವೆ ಸಂಘರ್ಷ ಸೃಷ್ಟಿಸಬಾರದು. ಇದು ನಿಜವಾದ ಜಾತ್ಯತೀತತೆ. ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವುದು, ಪ್ರತಿಯೊಂದಕ್ಕೂ ರಾಜಕಾರಣ ಮಾಡುವುದು ಪ್ರಗತಿಪರ ಚಿಂತನೆಯೂ ಅಲ್ಲ, ನಾಯಕತ್ವ ಗುಣವೂ ಅಲ್ಲ.
-ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ

ಟಾಪ್ ನ್ಯೂಸ್

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ…  ಆರನೇ ಮಹಡಿಯಿಂದ ಬಿದ್ದು ಮೃತಪಟ್ಟ

Tragedy: ಯುವಕನಿಗೆ ನಿದ್ದೆಯಲ್ಲಿ ನಡೆಯುವ ಅಭ್ಯಾಸ… ಆರನೇ ಮಹಡಿಯಿಂದ ಬಿದ್ದು ಮೃತ್ಯು

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Bengaluru Crime: ಹವಾ ತೋರಿಸಲು ಹೋಗಿ ಹೆಣವಾದ!

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.

Darshan Case ಒಳ್ಳೆಯ ಸಮಯ ಬರುತ್ತದೆ: ಸುಮಲತಾ ಪೋಸ್ಟ್‌ ವೈರಲ್‌

Darshan Case ಒಳ್ಳೆಯ ಸಮಯ ಬರುತ್ತದೆ: ಸುಮಲತಾ ಪೋಸ್ಟ್‌ ವೈರಲ್‌

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್‌; ಯುವಕನ ವಿರುದ್ಧ ಎಫ್ಐಆರ್‌

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

BBMP: ಪಾಲಿಕೆಯಲ್ಲಿ ಬಹುಕೋಟಿ ಅವ್ಯವಹಾರ; ಅಧಿಕಾರಿಗಳ ತನಿಖೆಗೆ ಆಯುಕ್ತರ ಸಮ್ಮತಿ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Missing Case: ನಾಪತ್ತೆಯಾಗಿದ್ದ ಕಾನ್‌ಸ್ಟೇಬಲ್ ಮೃತದೇಹ ಶಂಕಾಸ್ಪದವಾಗಿ ಪತ್ತೆ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Ullal: ಟಿಪ್ಪರ್‌ ಅಪಘಾತ; ಗಾಯಾಳು ಸ್ಕೂಟರ್‌ ಸವಾರ ಚಿಕಿತ್ಸೆ ಫಲಕಾರಿಯಾಗದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.