ಬಿಜೆಪಿಯಲ್ಲಿ ನನ್ನನ್ನು ಕಡೆಗಣಿಸಿಲ್ಲ, ಮೋದಿ ನನಗೆ ಅನ್ಯಾಯ ಮಾಡಿಲ್ಲ: ಯಡಿಯೂರಪ್ಪ

ಬಿಜೆಪಿ ಮತ್ತೆ ಅಧಿಕಾರಕ್ಕೆ

Team Udayavani, Feb 23, 2023, 7:20 AM IST

ಬಿಜೆಪಿಯಲ್ಲಿ ನನ್ನನ್ನು ಕಡೆಗಣಿಸಿಲ್ಲ, ಮೋದಿ ನನಗೆ ಅನ್ಯಾಯ ಮಾಡಿಲ್ಲ: ಯಡಿಯೂರಪ್ಪ

ವಿಧಾನಸಭೆ: “ನಾನು ಚುನಾವಣೆಗೆ ನಿಲ್ಲುವುದಿಲ್ಲ. ಹೀಗಾಗಿ, ಈ ಸದನಕ್ಕೆ ಮತ್ತೆ ಬರಲ್ಲ. ಆದರೆ, ಬಿಜೆಪಿ ಅಧಿಕಾರಕ್ಕೆ ತರಲು ಸರ್ವ ಪ್ರಯತ್ನ ಮಾಡುತ್ತೇನೆ. ರಾಜ್ಯ ಸುತ್ತುತ್ತೇನೆ..’ -ಇದು ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಮಾತುಗಳು.

ಬಜೆಟ್‌ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಜೆಪಿಯಲ್ಲಿ ನನ್ನನ್ನು ಕಡೆಗಣಿಸಿಲ್ಲ, ನರೇಂದ್ರ ಮೋದಿ ನನಗೆ ಅನ್ಯಾಯ ಮಾಡಿಲ್ಲ. ನನಗೆ ಕೊಟ್ಟಷ್ಟು ಅವಕಾಶ ಬೇರೆ ಯಾರಿಗೂ ಕೊಟ್ಟಿಲ್ಲ. ನಾನು ಅವರಿಗೆ ಋಣಿ ಎಂದು ಹೇಳಿದರು.

ಬಸವರಾಜ ಬೊಮ್ಮಾಯಿ ಅವರು ಉತ್ತಮ ಬಜೆಟ್‌ ನೀಡಿದ್ದಾರೆ. ಪ್ರತಿಪಕ್ಷ ನಾಯಕರು ಬಜೆಟ್‌ನಲ್ಲಿನ ಒಳ್ಳೆಯ ಅಂಶಗಳನ್ನು ಶ್ಲಾ ಸಬೇಕಿತ್ತು. ಕಾಂಗ್ರೆಸ್‌ ಅಧಿಕಾರದಲ್ಲಿರುವ ರಾಜಸ್ಥಾನದಲ್ಲಿ ಕೊರತೆ ಬಜೆಟ್‌ ಮಂಡಿಸಿರುವುದು ಅವರಿಗೆ ಗೊತ್ತಿದೆ. ತೆರಿಗೆ ಆದಾಯ ಉತ್ತಮವಾಗಿದ್ದು ಆರ್ಥಿಕ ಶಿಸ್ತು ಇದೆ. ಬಜೆಟ್‌ನಲ್ಲಿ ಘೋಷಿಸಿರುವ ಕಾರ್ಯಕ್ರಮ ಜನರ ಮುಂದಿಟ್ಟು ನಮ್ಮ ಶಾಸಕರು ಮತ ಕೇಳಬೇಕೆಂದು ಹೇಳಿದರು.

ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವೋ ರಾಜ್ಯದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ. ನಮ್ಮ ಶಾಸಕರು ಧೈರ್ಯದಿಂದ ಅಧಿವೇಶನ ಮುಗಿದ ತಕ್ಷಣ ಕ್ಷೇತ್ರಗಳಿಗೆ ಹೋಗಿ ಜನರ ವಿಶ್ವಾಸಗಳಿಸುವತ್ತ ಕೆಲಸ ಮಾಡಬೇಕೆಂದು ತಿಳಿಸಿದರು.

ಅನ್ಯಾಯ ಮಾಡಿಲ್ಲ: ಬಿಜೆಪಿ ಯಡಿಯೂರಪ್ಪ ಅವರಿಗೆ ಅನ್ಯಾಯ ಮಾಡಿದೆ, ಕಡೆಗಣಿಸಿದೆ ಎಂಬ ಮಾತುಗಳು ಇವೆ. ಆದರೆ, ಬಿಜೆಪಿ ನನಗೆ ಕೊಟ್ಟಷ್ಟು ಅವಕಾಶ ಯಾರಿಗೂ ಕೊಡಲಿಲ್ಲ. ಸಾಕಷ್ಟು ಸ್ಥಾನಮಾನ ಕೊಟ್ಟಿದ್ದಾರೆ, ನಾಲ್ಕು ಬಾರಿ ಮುಖ್ಯಮಂತ್ರಿಯಾಗುವ ಅವಕಾಶ ಕಲ್ಪಿಸಿಕೊಡಲಾಗಿತ್ತು. ಇದಕ್ಕಿಂತ ಬೇರೇನು ಬೇಕು ಎಂದು ಪ್ರಶ್ನಿಸಿದರು.

ನಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಹಾಗೆಂದು ಮನೆಯಲ್ಲಿ ಕುಳಿತುಕೊಳ್ಳುವುದಿಲ್ಲ. ಮುಂದಿನ ಎರಡು ತಿಂಗಳು ವಿಶ್ರಾಂತಿ ಇಲ್ಲದೆ ರಾಜ್ಯ ಪ್ರವಾಸ ಮಾಡುತ್ತೇನೆ. ಶಾಸಕರು ಕರೆದಲ್ಲಿಗೆ ಹೋಗುತ್ತೇನೆ. ಆರೋಗ್ಯ ಇದ್ದರೆ ಈ ಚುನಾವಣೆಯಷ್ಟೇ ಅಲ್ಲ, ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ತರಲು ಶ್ರಮಿಸುತ್ತೇನೆಂದು ಹೇಳಿದರು.

ಸ್ಪರ್ಧೆಗೆ ಒತ್ತಾಯ: ಯಡಿಯೂರಪ್ಪ ಅವರು ನಾನು ಸದನಕ್ಕೆ ಮತ್ತೆ ಬರಲು ಆಗದು, ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ ಎಂದಾಗ, ಕಾಂಗ್ರೆಸ್‌ನ ಪ್ರಿಯಾಂಕ್‌ ಖರ್ಗೆ, ಯು.ಟಿ.ಖಾದರ್‌, ಜೆಡಿಎಸ್‌ನ ಶಿವಲಿಂಗೇಗೌಡ, ವೆಂಕಟರಾವ್‌ ನಾಡಗೌಡ, ನಿಮ್ಮ ಹಿರಿತನ, ಅನುಭವ, ಮಾರ್ಗದರ್ಶನ ಬೇಕು. ಮತ್ತೆ ಸ್ಪರ್ಧೆ ಮಾಡಿ ಎಂದು ಒತ್ತಾಯ ಮಾಡಿದರು.

ಪ್ರಿಯಾಂಕ್‌ ಖರ್ಗೆ ಅವರು, ದೆಹಲಿಯವರ ಮಾತು ಕೇಳಬೇಡಿ ಸಾರ್‌. ನೀವು ಚುನಾವಣೆಗೆ ಸ್ಪರ್ಧೆ ಮಾಡಿ ಎಂದು ಹೇಳಿದರು. ಯು.ಟಿ.ಖಾದರ್‌, ನಿಮ್ಮ ಪಕ್ಷ ನಿಷ್ಠೆ ಕೇವಲ ಬಿಜೆಪಿಯಷ್ಟೇ ಅಲ್ಲ ಎಲ್ಲರಿಗೂ ಮಾದರಿ. ಎಷ್ಟೇ ಅನ್ಯಾಯ, ಅಪಮಾನ ಆದರೂ ಪಕ್ಷವೇ ಮುಖ್ಯ ಎಂದು ಹೇಳುತ್ತಿದ್ದೀರಿ. ನೀವು ಪಕ್ಷದ ಮೇಲಿಟ್ಟಿರುವ ಪ್ರೀತಿಗೆ ಇಷ್ಟು ಸಾಕ್ಷಿ. ನೀವು ಮತ್ತೆ ಸ್ಪರ್ಧೆ ಮಾಡಿ ಇಲ್ಲಿಗೆ ಬರಬೇಕು ಎಂದು ತಿಳಿಸಿದರು.

ಆದರೆ, ಯಡಿಯೂರಪ್ಪ ಅವರು ಮತ್ತೆ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ತೀರ್ಮಾನ ತೆಗೆದುಕೊಂಡಿದ್ದೇನೆ. ಆ ನಿರ್ಧಾರದಲ್ಲಿ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.

ಸಿದ್ದುಗೆ ಬಿಎಸ್‌ವೈ ಟಾಂಗ್‌
ಬಾದಾಮಿಯಲ್ಲಿ ಜನ ಗೆಲ್ಲಿಸಿ ಮತ್ತೆ ಗೆಲ್ಲಿಸುತ್ತೇವೆ ಎಂದು ಹೇಳುವಾಗ ಸಿದ್ದರಾಮಯ್ಯ ಅವರು ಬೇರೆ ಕ್ಷೇತ್ರ ಹುಡುಕಾಟ ಮಾಡುವುದು ಅಲ್ಲಿನ ಜನರಿಗೆ ಮಾಡಿದ ದ್ರೋಹವಾಗುತ್ತದೆ. ಅಲ್ಲಿ ಸ್ಪರ್ಧೆ ಮಾಡುವುದಿಲ್ಲ ಎಂದರೆ ಗೆಲ್ಲುವ ವಿಶ್ವಾಸ ಇಲ್ಲ ಎಂದು ಅರ್ಥವೇ ಎಂದು ಯಡಿಯೂರಪ್ಪ ಕುಟುಕಿದರು.

ಬಜೆಟ್‌ ಮೇಲಿನ ಚರ್ಚೆ ವೇಳೆ ಸಿದ್ದರಾಮಯ್ಯ ಬೇರೆ ಕ್ಷೇತ್ರ ಹುಡುಕಾಟ ಪ್ರಸ್ತಾಪಿಸಿ, ಬಾದಾಮಿ ಬಿಟ್ಟು ಬೇರೆ ಎಲ್ಲೇ ಸ್ಪರ್ಧೆ ಮಾಡಿದರೂ ಜನ ಒಪ್ಪಲ್ಲ, ಅಲ್ಲಿಂದ ಓಡಿ ಬಂದಿದ್ದಾರೆ ಎಂದು ಮಾತನಾಡಿಕೊಳ್ಳುತ್ತಾರೆ. ಹೀಗಾಗಿ, ನಾನು ಸಲಹೆ ಮಾಡುತ್ತೇನೆ, ಬಾದಾಮಿಯಲ್ಲಿ ಸ್ಪರ್ಧಿಸಿ ಎಂದು ಹೇಳಿದರು.

ಇದಕ್ಕೆ ಧ್ವನಿಗೂಡಿಸಿದ ಸಚಿವ ಗೋವಿಂದ ಕಾರಜೋಳ, ಕಷ್ಟ ಕಾಲದಲ್ಲಿ ನನ್ನ ಜನ ಸಿದ್ದರಾಮಯ್ಯ ಅವರನ್ನು ಕೈ ಹಿಡಿದಿದ್ದಾರೆ. ಆದರೆ, ಇದೀಗ ಅವರನ್ನು ಬಿಟ್ಟು ಬೇರೆಡೆ ನೋಡುತ್ತಿದ್ದಾರೆ. ಇದು ಸರಿಯೇ ಎಂದು ಕೇಳಿದರು.

ಇದಕ್ಕೆ ಯು.ಟಿ.ಖಾದರ್‌, ಸಿದ್ದರಾಮಯ್ಯ ಅವರು ಸೋಲಿನ ಭಯದಿಂದ ಬೇರೆಡೆ ಸ್ಪರ್ಧೆ ಮಾಡುತ್ತಿಲ್ಲ, ಚಾಮುಂಡೇಶ್ವರಿಯಲ್ಲಿ ನಿಂತರೂ ಗೆಲ್ಲುತ್ತಾರೆ, ಬಾದಾಮಿಯಲ್ಲೂ ಗೆಲ್ಲುತ್ತಾರೆ. ರಾಜ್ಯದ 224 ಕ್ಷೇತ್ರಗಳಲ್ಲಿ ಎಲ್ಲೇ ಸ್ಪರ್ಧೆ ಮಾಡಿದರೂ ಗೆಲ್ಲುತ್ತಾರೆ. ಅವರೊಬ್ಬ ಜನನಾಯಕ ಎಂದು ಹೇಳಿದರು.

ಇದಕ್ಕೆ ಯಡಿಯೂರಪ್ಪ ಅವರು, ನೀವು ನಿಮ್ಮ ಪಕ್ಷದ ನಾಯಕನ ಸಮರ್ಥನೆ ಮಾಡಿಕೊಳ್ಳುವುದು ತಪ್ಪಲ್ಲ, ಆದರೆ, ನನ್ನ ಪ್ರಕಾರ ಅವರು ಬಾದಾಮಿಯಲ್ಲೇ ಸ್ಪರ್ಧಿಸಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.