![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 23, 2021, 6:06 PM IST
ಮೈಸೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಹಣ ಸೇರಿದಂತೆ ಎಲ್ಲಾ ಬಲಗಳು ವರ್ಕ್ ಆಗುತ್ತವೆ. ಪ್ರಜಾಪ್ರಭುತ್ವದಲ್ಲಿ ಇದು ನಮಗೆ ಇಷ್ಟವಿಲ್ಲದಿದ್ದರೂ ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಮಾಜಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಹೇಳಿದರು.
ನಗರದಲ್ಲಿ ಮಾತಾನಾಡಿದ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಮೈಸೂರು-ಚಾಮರಾಜನಗರ ಜಿಲ್ಲೆಯಲ್ಲಿ ಮೂರುವರೆ ಸಾವಿರಕ್ಕೂ ಅಧಿಕವಾಗಿ ನಮ್ಮ ಸದಸ್ಯರಿದ್ದಾರೆ. ನಾವು ಮೊದಲ ಪ್ರಾಶಸ್ತ್ಯದಲ್ಲೇ ಗೆಲ್ಲುತ್ತೇವೆ. ಎರಡನೇ ಸ್ಥಾನಕ್ಕೆ ಯಾರು ಯಾರು ಯಾವ ಬಲಗಳನ್ನು ಪ್ರಯೋಗಿಸುತ್ತಾರೋ ಗೊತ್ತಿಲ್ಲ. ಅದರ ಮೇಲೆ ಎರಡನೇ ಸ್ಥಾನದ ಫಲಿತಾಂಶ ನಿಂತಿದೆ ಎಂದರು.
ಇದನ್ನೂ ಓದಿ:ಸಂದೇಶ್ ನಾಗರಾಜ್ ಪಕ್ಷದಿಂದ ಅಂತರ ಕಾಯ್ದುಕೊಂಡಿದ್ದರಿಂದ ಹೀಗೆ ಆಗಿದೆ: ಸಾ.ರಾ. ಮಹೇಶ್
ಹಾಲಿ ಪರಿಷತ್ ಸದಸ್ಯರಿಗೆ ಟಿಕೆಟ್ ನೀಡದಿರುವುದಕ್ಕೆ ದೊಡ್ಡ ಕಾರಣಗಳೇನು ಇಲ್ಲ. ಕಾರ್ಯಕರ್ತರು ಬದಲಾವಣೆ ಬಯಸಿದ್ದರು. ಹಾಗಾಗಿ ಬೇರೆ ಅಭ್ಯರ್ಥಿಗೆ ಟಿಕೆಟ್ ಕೊಟ್ಟಿದ್ದೇವೆ ಎಂದರು.
ನಾನು ಟಿಕೆಟ್ ಆಕಾಂಕ್ಷಿಯಲ್ಲ:
ನಾನು ಎಂದಿಗೂ ಕನಸು ಮನಸಿನಲ್ಲೂ ಪರಿಷತ್ ಚುನಾವಣೆ ಬಗ್ಗೆ ಯೋಚನೆಯೇ ಮಾಡಿಲ್ಲ. ಆ ಸುದ್ದಿಯನ್ನು ಯಾರು ಸೃಷ್ಟಿಸಿದರೋ ನನಗೆ ಗೊತ್ತಿಲ್ಲ. ನಾನಂತೂ ಎಂದಿಗೂ ಪರಿಷತ್ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿರಲಿಲ್ಲ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ: ಈಶ್ವರಪ್ಪನವರೇ ನಮ್ಮಲ್ಲಿ ಜನ ಇಲ್ಲ,ಎಲ್ಲ ಕಡೆ ಶಂಖ ಊದಲಿಕ್ಕೆ ನಾನೇ ಹೋಗಬೇಕು: ಎಚ್ .ಡಿ.ಕೆ
ರಾಜ್ಯದ ನೆರೆ ಪರಿಸ್ಥಿತಿಯನ್ನು ಸರ್ಕಾರ ಸಂಪೂರ್ಣ ನಿರ್ಲಕ್ಷ್ಯಸಿದೆ. ಕೇವಲ ಪರ್ಸೆಂಟೇಜ್ಗಾಗಿ ಸಚಿವರು ಕೆಲಸ ಮಾಡುತ್ತಿದ್ದಾರೆ. ಖುದ್ದು ಪ್ರಧಾನಿಗೆ ಈ ವಿಚಾರದಲ್ಲಿ ಪತ್ರ ಹೋಗಿದೆ. ಕೆಲಸ ಮಾಡಲು ಸಚಿವರುಗಳಿಗೆ ಬದ್ಧತೆಯೂ ಇಲ್ಲ, ಆಸಕ್ತಿಯೂ ಇಲ್ಲ. ಸರ್ಕಾರ ಇರುವುದರ ಬಗ್ಗೆ ನನಗೆ ಅನುಮಾನ ಇದೆ. ಬೆಂಗಳೂರಿನಲ್ಲಿ ಕೆರೆ ಮತ್ತು ರಾಜಕಾಲುವೆ ಒತ್ತವರಿ ತೆರವು ಆಗಬೇಕು. ಇಲ್ಲದಿದ್ದರೆ ಬೆಂಗಳೂರು ಮತ್ತೊಂದು ಚೆನ್ನೈ ಆಗಲಿದೆ. ಸರ್ಕಾರ ಈ ನಿಟ್ಟಿನಲ್ಲಿ ಗಮನ ಹರಿಸಬೇಕಿದೆ ಎಂದು ಸರ್ಕಾರದ ವಿರುದ್ಧ ಅಸಮಾಧಾನ ಹೊರ ಹಾಕಿದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.