New laws: “ಜುಲೈ 1ರಿಂದ ಐಪಿಸಿ ಕಾಯ್ದೆ ಇರಲ್ಲ, ಬದಲಿಗೆ ಬಿಎನ್ಎಸ್ ಕಾಯ್ದೆ ಜಾರಿ’
Team Udayavani, May 29, 2024, 11:00 AM IST
ಬೆಂಗಳೂರು: ಕೇಂದ್ರ ಸರ್ಕಾರ ನೂತನವಾಗಿ ಜಾರಿಗೆ ತಂದಿರುವ ಕಾಯ್ದೆಗಳ ಪ್ರಕಾರ ಹಳೇ ಪ್ರಕರಣ ಅಥವಾ ಶಿಕ್ಷೆ ಪ್ರಮಾಣ ಕಡಿಮೆ ಇರುವ ಪ್ರಕರಣಗಳಲ್ಲಿ ಏಕಾಏಕಿ ಎಫ್ಐಆರ್ ದಾಖಲಿಸಲು ಅವಕಾಶ ಇಲ್ಲ. ದೂರು ಸ್ವೀಕರಿಸಿ ಮಾಹಿತಿ ಕಲೆಹಾಕಲು 14 ದಿನಗಳ ಕಾಲಾವಕಾಶ ನೀಡಲಾಗಿದ್ದು, ಒಂದು ವೇಳೆ ಮೇಲ್ನೋಟಕ್ಕೆ ಕೃತ್ಯ ಸಾಬೀತಾದರೆ ಮಾತ್ರ ಎಫ್ ಐಆರ್ ದಾಖಲಿಸಬಹುದಾಗಿದೆ ಎಂದು ಹೈಕೋರ್ಟ್ ವಕೀಲ ಆರ್.ಎಂ.ಮಲ್ಲಿಕಾರ್ಜುನ್ ತಿಳಿಸಿದರು.
ನಗರ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಪೊಲೀಸರು ಹಾಗೂ ಅಪರಾಧ ವರದಿಗಾರರಿಗಾಗಿ ಮಂಗಳವಾರ ಆಯೋಜಿಸಿದ್ದ “ಮೂರು ಹೊಸ ಕಾನೂನುಗಳ ಪರಿಚಯ’ ವಿಶೇಷ ಕಾರ್ಯಾಗಾರದಲ್ಲಿ ಅವರು ವಿಷಯ ಮಂಡಿಸಿದರು. ಪ್ರತಿಯೊಬ್ಬ ನಾಗರಿಕನಿಗೂ ನ್ಯಾಯ ಒದಗಿಸಲು ಕೇಂದ್ರ ಸರ್ಕಾರ 3 ಹೊಸ ಕಾನೂನು ಜಾರಿಗೊಳಿಸಿದ್ದು,ಜುಲೈ 1ರಿಂದ ದೇಶಾದ್ಯಂತ ಅನುಷ್ಠಾನಗೊಳ್ಳಲಿದೆ.
ಭಾರತೀಯ ದಂಡ ಸಂಹಿತೆ (ಐಪಿಸಿ) ಬದಲು ಭಾರತೀಯ ನ್ಯಾಯ ಸಂಹಿತೆ (ಬಿಎನ್ಎಸ್) ಜಾರಿ ಯಾಗುತ್ತಿದೆ. ಅದರ ಜತೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಯೂ ಜಾರಿಗೆ ಬರಲಿದೆ ಎಂದು ಅವರು ಹೇಳಿದರು.
ಹೊಸ ಕಾಯ್ದೆಗಳ ಪ್ರಕಾರ ದೂರುದಾರರ ಜತೆಯಲ್ಲಿ ಆರೋಪಿಗೂ ಕೃತ್ಯದ ಬಗ್ಗೆ ವಿವರಣೆ ನೀಡಲು ಅವಕಾಶ ಕಲ್ಪಿಸಲಾಗಿದೆ. ದೇಶದ ಯಾವುದೇ ಭಾಗದಲ್ಲಿ ಕೃತ್ಯ ನಡೆದರೆ, ಠಾಣೆ ಮಿತಿ ಇಲ್ಲದೇ ಸಮೀಪದ ಠಾಣೆಗೆ ದೂರು ಕೊಡಲು ಹೊಸ ಕಾಯ್ದೆ ಅವಕಾಶ ನೀಡಿದೆ. ಹಾಗೆಯೇ ತನಿಖೆ ಪ್ರಕ್ರಿಯೆಯನ್ನು ವಿಡಿಯೋ ಚಿತ್ರೀಕರಣ ಮಾಡುವುದನ್ನುಕಡ್ಡಾಯ ಗೊಳಿಸಲಾಗಿದೆ. ದೋಷಾರೋಪ ಪಟ್ಟಿ ಸಲ್ಲಿಸಿದ ನಂತರ, ಪ್ರಕರಣ ಇತ್ಯರ್ಥಪಡಿಸಲು ನ್ಯಾಯಾಲಯ ಗಳಿಗೂ ಮಿತಿ ನಿಗದಿಪಡಿಸಲಾಗಿದೆ ಎಂದು ಅವರು ವಿವರಿಸಿದರು.
358ಕ್ಕೆ ಇಳಿಕೆ: ಕೆಎಲ್ಇ ಕಾನೂನು ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕ ಡಾ. ಸುಬ್ರಮಣ್ಯ ಗೌಡಪ್ಪ ನಗರ ಮಾತನಾಡಿ, ಐಪಿಸಿಯಲ್ಲಿ 511 ಸೆಕ್ಷನ್ಗಳಿವೆ. ಬಿಎನ್ಎಸ್ನಲ್ಲಿ ಸೆಕ್ಷನ್ಗಳನ್ನು 358ಕ್ಕೆ ಇಳಿಸಲಾಗಿದೆ. ಆದರೆ, ಯಾವುದೇ ಹಳೇ ಅಂಶವನ್ನು ಕೈಬಿಟ್ಟಿಲ್ಲ. ಕೆಲ ಮಾರ್ಪಾಡು ಮಾತ್ರ ಮಾಡಲಾಗಿದೆ. ಆದರೆ, ಹೊಸ ಕಾಯ್ದೆಯ ಕೆಲ ಸೆಕ್ಷನ್ಗಳಲ್ಲಿ ಅಸ್ಪಷ್ಟತೆ ಇದ್ದು, ಅವುಗಳ ಪರಿಶೀಲನೆ ನಡೆಯಬೇಕಿದೆ ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ಕೆಎಲ್ಇ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಜೆ.ಎಂ. ಮಲ್ಲಿಕಾರ್ಜು ನಯ್ಯ, ಸಹ ಪ್ರಾಧ್ಯಾಪಕ ಡಾ. ಮಧುಸೂದನ್ ಜಿ., ಸಿಸಿಬಿ ಡಿಸಿಪಿ ಶ್ರೀನಿವಾಸ್ ಗೌಡ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ
Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ
Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್
Shimoga; ಸಿದ್ದರಾಮಯ್ಯಗೆ ನ್ಯಾಯಾಧೀಶರ ಮೇಲೂ ನಂಬಿಕೆ ಇಲ್ಲ: ಶಾಸಕ ಚನ್ನಬಸಪ್ಪ
Significant Agreement: ವನ-ವನ್ಯಜೀವಿ ಸಂರಕ್ಷಣೆಗೆ ಯತ್ನ: ಸಚಿವ ಈಶ್ವರ ಖಂಡ್ರೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Google 25th Birthday! ಗ್ಯಾರೇಜ್ನಿಂದ ಮೌಂಟ್ವಿವ್ವರೆಗೆ….ಗೂಗಲ್ ರಜತ ಸಂಭ್ರಮ
Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್ ಖಾನ್
Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್ ಬಸ್’
Israel: ಬೈರೂತ್ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್ ಸಾವು: ಇಸ್ರೇಲ್ ಸೇನೆ
Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.