
ಕೆಲವು ಸೇವೆಗಳನ್ನು ಹೊರತುಪಡಿಸಿ ಮುಂದಿನ ಐದು ಭಾನುವಾರ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್
Team Udayavani, Jun 28, 2020, 5:11 PM IST

ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿರುವ ಹಿನ್ನಲೆಯಲ್ಲಿ ಸರ್ಕಾರ ಕೆಲವು ಮುಂಜಾಗೃತ ಕ್ರಮಗಳನ್ನು ತೆಗೆದುಕೊಂಡಿದ್ದು, ಈ ಪ್ರಕಾರ ಮುಂದಿನ ನಾಲ್ಕು ಭಾನುವಾರಗಳಂದು ರಾಜ್ಯದಲ್ಲಿ ಪೂರ್ಣ ಲಾಖ್ ಡೌನ್ ಇರಲಿದೆ.
ಸರ್ಕಾರ ಈ ಬಗ್ಗೆ ಆದೇಶ ಪ್ರಕಟಿಸಿದ್ದು, ಜುಲೈ 5ರಿಂದ ಮುಂದಿನ ನಾಲ್ಕು ಭಾನುವಾರಗಳಂದು ರಾಜ್ಯದಲ್ಲಿ ಪೂರ್ಣ ದಿನದ ಲಾಕ್ ಡೌನ್ ಇರಲಿದೆ. ( ಜುಲೈ 5ರಿಂದ ಆ.2ರ ಭಾನುವಾರ) ಆದರೆ ಅಗತ್ಯ ಸರಕು ಸರಂಜಾಮು ಸಾಗಾಣಿಕೆಗೆ ಯಾವುದೇ ನಿರ್ಬಂಧವಿರುವುದಿಲ್ಲ .
ತುರ್ತು ಸೇವೆ ಒದಗಿಸುವ ಇಲಾಖೆ ಕಚೇರಿಗಳನ್ನು ಹೊರತುಪಡಿಸಿ ರಾಜ್ಯ ಸರಕಾರದ ಎಲ್ಲ ಇಲಾಖೆಗಳು, ಕಚೇರಿಗಳು, ಬೋರ್ಡ್ ಗಳು ಜುಲೈ 10ರಿಂದ ಆಗಸ್ಟ್ ಎಂಟರವರೆಗೆ ಎಲ್ಲಾ ಶನಿವಾರಗಳಂದು ಮುಚ್ಚಿರುತ್ತದೆ ಎಂದು ಆದೇಶಿಸಲಾಗಿದೆ.
ಇದಲ್ಲದೆ ರಾಜ್ಯಾದ್ಯಂತ ರಾತ್ರಿ ಎಂಟರಿಂದ ಬೆಳಿಗ್ಗೆ ಐದರವರೆಗೆ ರಾತ್ರಿ ಕರ್ಪ್ಯೂ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಅತ್ಯಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದಂತೆ ವ್ಯಕ್ತಿಗಳ ಚಲನೆಯನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಸರ್ಕಾರ ಆದೇಶಿಸಿದೆ.
ಟಾಪ್ ನ್ಯೂಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

R.Ashwin retirement: ಅಶ್ವಿನ್ ವಿದಾಯದ ಸುತ್ತಮುತ್ತ…

Surathkal: ತಡಂಬೈಲ್ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ

Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.