Karnataka: ವಾರದೊಳಗೆ ಬೆಳೆ ನಷ್ಟ ಪರಿಹಾರ ಕೊಡಿ: ಅಶೋಕ್
Team Udayavani, Oct 28, 2024, 1:04 AM IST
ಬೆಂಗಳೂರು: ತಂತ್ರಾಂಶದಲ್ಲಿ ತೊಂದರೆ ಇದೆ, ಆಧಾರ್ ವಿಲೀನ ಆಗಿಲ್ಲ ಎಂಬ ಕುಂಟು ನೆಪವೊಡ್ಡದೆ ಅತಿವೃಷ್ಟಿಯಿಂದಾಗಿರುವ ಬೆಳೆ ನಷ್ಟ ಪರಿಹಾರವನ್ನು ಒಂದು ವಾರದೊಳಗೆ ಬಿಡುಗಡೆ ಮಾಡುವಂತೆ ರಾಜ್ಯ ಸರಕಾರಕ್ಕೆ ಆಗ್ರಹಿಸಿರುವ ವಿಧಾನಸಭೆ ವಿಪಕ್ಷದ ನಾಯಕ ಆರ್. ಅಶೋಕ್, ರೈತರು ನೆಮ್ಮದಿಯಿಂದ ದೀಪಾವಳಿ ಹಬ್ಬವನ್ನಾದರೂ ಆಚರಿಸಲು ಸಹಕಾರಿಯಾಗುತ್ತದೆ ಎಂದಿದ್ದಾರೆ.
ರವಿವಾರ ಈ ಕುರಿತು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿ, ಹಿಂಗಾರು ಅವಧಿಯಲ್ಲಿ ಸುರಿದಿರುವ ಅತಿವೃಷ್ಟಿಯಿಂದ ಅಪಾರ ಬೆಳೆ ಹಾನಿಯಾಗಿದ್ದು, ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಇದನ್ನು ವಿಪಕ್ಷಗಳು ಗಮನಕ್ಕೆ ತಂದ ಬಳಿಕ ಗಾಢ ನಿದ್ರೆಯಿಂದ ಎಚ್ಚೆತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರ, ಜಿಲ್ಲಾಡಳಿತಗಳೊಂದಿಗೆ ವೀಡಿಯೋ ಸಂವಾದ ನಡೆಸಿದೆ ಎಂದರು.
ಕಳೆದ ವರ್ಷ ಬರ ಪರಿಹಾರ ವಿತರಣೆ ವೇಳೆ, ಈ ವರ್ಷ ಮುಂಗಾರು ಬೆಳೆ ಹಾನಿ ಪರಿಹಾರ ವಿತರಣೆ ವೇಳೆ ಉಂಟಾದ ಎಡವಟ್ಟುಗಳು ಮರುಕಳಿಸದಂತೆ ಸರಕಾರ ಈ ಬಾರಿಯಾದರೂ ಎಚ್ಚರ ವಹಿಸಬೇಕು. ಬೆಳೆ ಹಾನಿ ಸಮೀಕ್ಷೆಯನ್ನು ಸಮರೋಪಾದಿಯಲ್ಲಿ ನಡೆಸಿ, ಒಂದು ವಾರದೊಳಗೆ ಪರಿಹಾರದ ಹಣ ರೈತರ ಕೈಸೇರುವಂತೆ ಕ್ರಮ ಕೈಗೊಳ್ಳಬೇಕು. ಫ್ರೂಟ್ಸ್ ತಂತ್ರಾಂಶದಲ್ಲಿ ಸಮಸ್ಯೆ ಇದೆ, ಆಧಾರ್ ಲಿಂಕ್ ಆಗಿಲ್ಲ ಎಂದು ಕುಂಟು ನೆಪವೊಡ್ಡಿ ಪರಿಹಾರ ವಿತರಣೆಯಲ್ಲಿ ವಿಳಂಬ ಮಾಡದೆ ಈಗಲೇ ಪೂರ್ವಸಿದ್ಧತೆ ಮಾಡಿಕೊಂಡು, ಸಮೀಕ್ಷೆ ವರದಿ ಕೈಸೇರುತ್ತಿದ್ದಂತೆ ಡಿಬಿಟಿ ಮೂಲಕ ರೈತರ ಬ್ಯಾಂಕ್ ಖಾತೆಗಳಿಗೆ ಹಣ ಜಮೆ ಮಾಡಬೇಕು. ಕಳೆದ 2 ವರ್ಷದಿಂದ ಸತತವಾಗಿ ಬರ, ನೆರೆ ಹಾವಳಿಯಿಂದ ಹೈರಾಣಾಗಿರುವ ರೈತರು ವಾರದೊಳಗೆ ಪರಿಹಾರ ಹಣ ಕೈಸೇರಿದರೆ ದೀಪಾವಳಿ ಹಬ್ಬವನ್ನಾದರೂ ನೆಮ್ಮದಿಯಿಂದ ಆಚರಿಸಲು ಸಹಕಾರಿಯಾಗುತ್ತದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ನಟ ದರ್ಶನ್ ಜಾಮೀನು ಅರ್ಜಿ: ಇಂದು ವಿಚಾರಣೆ
Siddaramaiah: ಈ ಹಿಂದೆ ನಿಖಿಲ್ ಕುಮಾರಸ್ವಾಮಿ ಸೋತಾಗ ಅಭಿಮನ್ಯು ಆಗಿರಲಿಲ್ಲವೇ?
By Election: ಎಚ್ಡಿಕೆ ಯಾವ ಒಕ್ಕಲಿಗ ನಾಯಕ ಬೆಳೆಯುವುದನ್ನೂ ಸಹಿಸಲ್ಲ: ಡಿ.ಕೆ.ಸುರೇಶ್
Karnataka govt; ಅಧಿಸೂಚನೆ ಹಿಂತೆಗೆದುಕೊಳ್ಳುವಂತೆ ಬಿಯರ್ ತಯಾರಕರ ಒತ್ತಾಯ
Waqf Property: ವಕ್ಫ್ ವಿವಾದ: ವಿಜಯಪುರ ರೈತರ ಅಹವಾಲು ಆಲಿಸಲು ಬಿಜೆಪಿಯಿಂದ ತಂಡ ರಚನೆ
MUST WATCH
ಹೊಸ ಸೇರ್ಪಡೆ
Mangaluru: “ಕ್ಯಾಂಪ್ಕೊ’ದಿಂದ ವಿಶ್ವ ಆರೋಗ್ಯ ಸಂಸ್ಥೆಯ ವಿಜ್ಞಾನಿಯ ಭೇಟಿ
Udupi: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ: ಡಾ.ಎಂ.ಎನ್.ರಾಜೇಂದ್ರ ಕುಮಾರ್
Mangaluru: ವಿಪತ್ತು ನಿರ್ವಹಣೆಗೆ ಸಮನ್ವಯ ಅಗತ್ಯ: ಡಿಐಜಿಪಿ ಅಮಿತ್ ಸಿಂಗ್
Coastal Karnataka: ಉಭಯ ಜಿಲ್ಲೆಯ 31 ಕೇಂದ್ರಗಳಲ್ಲಿ ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ
Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.