ರಾಜ್ಯಕ್ಕೆ ವಿಶೇಷ ನೆರವು ಕೊಡಿ; ಮಳೆ ಹಾನಿ ಪರಿಶೀಲನೆಗೆ ಆಗಮಿಸಿದ ಕೇಂದ್ರ ತಂಡ
ಕಡಲ ಕೊರೆತದಿಂದ ಹಾನಿ ಹೆಚ್ಚಳದ ಬಗ್ಗೆ ಪ್ರಸ್ತಾವ ಹೆಚ್ಚು ಅನುದಾನಕ್ಕೆ ಸಿಎಂ ಆಗ್ರಹ
Team Udayavani, Sep 8, 2022, 7:18 AM IST
ಬೆಂಗಳೂರು: ಮಳೆ ಹಾನಿ ಪರಿಶೀಲ ನೆಗೆ ಕೇಂದ್ರದ ತಂಡ ಆಗಮಿಸಿದೆ. ವಿಶೇಷ ಪ್ರಕರಣ ಎಂದು ಪರಿಗಣಿಸಿ ಹೆಚ್ಚಿನ ಅನುದಾನ ಒದಗಿಸುವಂತೆ ರಾಜ್ಯ ಸರಕಾರ ಆಗ್ರಹಿಸಿದೆ.
ಕೇಂದ್ರದ ತಂಡದ ಜತೆ ಸಮಾಲೋಚಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯದ ಪರಿಸ್ಥಿತಿ, ಬೆಳೆ ಹಾನಿಯ ಅಂದಾಜು, ರಾಜ್ಯ ಸರಕಾರ ಕೈಗೊಂಡ ಕ್ರಮಗಳ ಬಗ್ಗೆ ವಿವರಿಸಿ ಕೇಂದ್ರದಿಂದ ಹೆಚ್ಚಿನ ನೆರವಿನ ನಿರೀಕ್ಷೆಯಲ್ಲಿದ್ದೇವೆ ಎಂದರು.
ಜುಲೈ ಹಾಗೂ ಆಗಸ್ಟ್ನಲ್ಲಿ ನಿರಂತರ ಮಳೆಯಿಂದ ಉಂಟಾದ ನಷ್ಟದ ಬಗ್ಗೆ ತಂಡಕ್ಕೆ ಮನವರಿಕೆ ಮಾಡಿದ ಅವರು, ರಾಜ್ಯ ಸರಕಾರವು ಅತ್ಯಂತ ನಿಖರ, ಪಾರದರ್ಶಕ ವಾಗಿ ಹಾನಿಯ ಪ್ರಸ್ತಾವನೆ ಸಲ್ಲಿಸಿದೆ. ಕೇಂದ್ರ ಸರಕಾರ ಹೆಚ್ಚು ನೆರವು ಒದಗಿಸಬೇಕು ಎಂದು ಸಿಎಂ ಕೋರಿದರು.
ಮೀನುಗಾರಿಕಾ ದೋಣಿಗಳಿಗೆ, ಅಂಗಡಿ ಮುಂಗಟ್ಟುಗಳಿಗೆ, ರಾಮನಗರದ ರೇಷ್ಮೆ ರೀಲಿಂಗ್ ಘಟಕ ಹಾಗೂ ಟ್ವಿಸ್ಟಿಂಗ್ ಘಟಕಗಳಿಗೆ ಆದ ಹಾನಿ ವಿವರಿಸಲಾಯಿತು.
ಸಂಕಷ್ಟದಲ್ಲಿರುವ ಈ ಕುಟುಂಬಗಳಿಗೆ ಮಾನವೀಯ ದೃಷ್ಟಿಯಿಂದ ಹೆಚ್ಚು ನೆರವು ನೀಡಬೇಕು ಎಂದು ಸಿಎಂ ಹೇಳಿದರು.
ಕಡಲಕೊರೆತ ಹಾನಿ: ಹೆಚ್ಚಿನ ನೆರವು ಅಗತ್ಯ
ರಾಜ್ಯ 330 ಕಿ.ಮೀ. ಕರಾವಳಿ ಪ್ರದೇಶವನ್ನು ಹೊಂದಿದ್ದು, ಸಮುದ್ರ ಕೊರೆತ ತಡೆಗಟ್ಟಲು ಹಲವು ಸೂಕ್ಷ್ಮ ಪ್ರದೇಶಗಳಲ್ಲಿ 350 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಗಳನ್ನು ಕೈಗೊಳ್ಳಲಾಗಿದೆ. ಆದರೆ ಹೊಸ ಜಾಗಗಳಲ್ಲಿ ಕಡಲಕೊರೆತ ಉಂಟಾಗಿದ್ದು ಸಾಕಷ್ಟು ಹಾನಿ ಉಂಟಾಗಿದೆ. ರಾಜ್ಯದ ಸಂಪೂರ್ಣ ಕರಾವಳಿ ಪ್ರದೇಶದ ರಕ್ಷಣೆಗೆ ಕೇಂದ್ರದ ನೆರವಿನ ಅಗತ್ಯವಿದೆ ಎಂದು ಬೊಮ್ಮಾಯಿ ಪ್ರತಿಪಾದಿಸಿದರು.
ಮಳೆ ಹಾನಿ ಪರಿಶೀಲನೆ: ದ.ಕ. ಜಿಲ್ಲೆಗೆ ತಂಡ ಆಗಮನ
ಮಂಗಳೂರು: ಮಳೆ ಹಾನಿ ಪರಿಶೀಲಿ ಸಲು ಕೇಂದ್ರ ತಂಡ ಬುಧವಾರ ಜಿಲ್ಲೆಗೆ ಆಗಮಿಸಿದೆ. ಐಎಎಸ್ ಶ್ರೇಣಿಯ ಮೂವರು ಕೇಂದ್ರ ಸರಕಾರದ ಅಧಿಕಾರಿಗಳು ಹಾಗೂ ರಾಜ್ಯದಿಂದ ಓರ್ವ ಅಧಿಕಾರಿಯನ್ನು ಕೇಂದ್ರ ತಂಡ ಒಳಗೊಂಡಿದೆ.
ಕೇಂದ್ರ ತಂಡ ಕೊಡಗಿನಿಂದ ಬುಧವಾರ ಸಂಜೆಯ ವೇಳೆಗೆ ಜಿಲ್ಲೆಗೆ ಆಗಮಿಸಿತು. ಸುಳ್ಯತಾಲೂಕಿನ ಹರಿಹರ ಪಲ್ಲತಡ್ಕ, ಕೊಲ್ಲಮೊಗರು,ಕಲ್ಮಕಾರು ಸೇರಿದಂತೆ ಜಿಲ್ಲೆಯಲ್ಲಿ ವಿವಿಧ ಪ್ರದೇಶಗಳಲ್ಲಿ ಮಳೆಯಿಂದ ಆಗಿರುವ ಹಾನಿಯ ಮಾಹಿತಿಯನ್ನು ಜಿಲ್ಲಾಡಳಿತದಿಂದ ಪಡೆದುಕೊಂಡಿತು. ದ.ಕ.ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅವರು ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳ ಚಿತ್ರಣದ ಮೂಲಕ ಸಂಭವಿಸಿರುವ ನಷ್ಟಗಳ ಬಗ್ಗೆ ತಂಡಕ್ಕೆ ವಿವರಿಸಿದರು. ಕೇಂದ್ರ ತಂಡ ಗುರುವಾರವೂ ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಹಾನಿಯ ಬಗ್ಗೆ ಮತ್ತಷ್ಟು ಪರಿಶೀಲನೆ ನಡೆಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್
Bidar; ತೊಗರಿ ಹೊಲದಲ್ಲಿ 700ಕ್ಕೂ ಹೆಚ್ಚು ಗಾಂಜಾ ಗಿಡಗಳು!; ಪೊಲೀಸ್ ದಾಳಿ
Hindalga Jail: ಕೈದಿ ಮೇಲೆ ನಾಲ್ವರು ವಿಚಾರಣಾಧೀನ ಕೈದಿಗಳಿಂದ ಹಲ್ಲೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK11: ಮೊದಲ ವಾರದಲ್ಲೇ ಬಿಗ್ ಬಾಸ್ ಆಟ ಮುಗಿಸಿದ ಯಮುನಾ ಶ್ರೀನಿಧಿ!
By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್.ಡಿ.ಕುಮಾರಸ್ವಾಮಿ
Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್ಆರ್!!
Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ
Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್ಯಾಪಿಡ್ ರೈಲು: ರೈಲ್ವೆ ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.