Government 137 ಶಿಶುಪಾಲನ ಕೇಂದ್ರಗಳು ರದ್ದು


Team Udayavani, Nov 8, 2023, 12:44 AM IST

Government 137 ಶಿಶುಪಾಲನ ಕೇಂದ್ರಗಳು ರದ್ದು

ಬೆಂಗಳೂರು: ರಾಜ್ಯಾದ್ಯಂತ ಕಟ್ಟಡ ಕಾರ್ಮಿಕರ 6 ವರ್ಷದೊಳಗಿನ ಮಕ್ಕಳ ಪೋಷಣೆಗೆಂದು 2020-21ರಲ್ಲಿ ಹಿಂದಿನ ಸರಕಾರ ಸ್ಥಾಪಿಸಿದ್ದ 137 ಶಿಶುಪಾಲನ ಕೇಂದ್ರಗಳನ್ನು ರದ್ದುಪಡಿಸಿ ಸರಕಾರ ಆದೇಶಿಸಿದೆ.

ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ (ನರೇಗಾ) ಕೂಲಿ ಕಾರ್ಮಿಕರ 3 ವರ್ಷದೊಳಗಿನ ಮಕ್ಕಳಿಗಾಗಿ ರಾಜ್ಯದ 4 ಸಾವಿರ ಗ್ರಾಮ ಪಂಚಾಯತ್‌ಗಳ ವ್ಯಾಪ್ತಿಯಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ಕೂಸಿನ ಮನೆ ನಿರ್ಮಿಸಲು ಮುಂದಾಗಿದೆ.

ಕಟ್ಟಡ ಮತ್ತು ಇತರ ನಿರ್ಮಾಣ ಕಾಮಗಾರಿಗಳು ನಡೆಯುವ ಸ್ಥಳದಲ್ಲಿ ಶಿಶುಪಾಲನ ಕೇಂದ್ರಗಳನ್ನು ಸ್ಥಾಪಿಸಿ, 6 ವರ್ಷದೊಳಗಿನ ಮಕ್ಕಳನ್ನು ಆರೈಕೆ ಮಾಡಲು 2020-21ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಇದಕ್ಕಾಗಿ ಕಾರ್ಮಿಕ ಇಲಾಖೆಯಿಂದ ಹಣ ವ್ಯಯಿಸಿ ಸಂಚಾರಿ ಶಿಶುಪಾಲನ ಕೇಂದ್ರಗಳೂ ಸೇರಿದಂತೆ ಒಟ್ಟು 137 ಶಿಶುಪಾಲನ ಕೇಂದ್ರಗಳನ್ನು ತೆರೆದಿತ್ತು. ಈ ಮೂಲಕ ಮಗುವಿನ ಆರೈಕೆಯ ಹೊರೆಯನ್ನು ಕಡಿಮೆ ಮಾಡಿ, ತಾಯಿಗೆ ಉದ್ಯೋಗದಲ್ಲಿ ತೊಡಗುವ ಅವಕಾಶ ನೀಡಲಾಗಿತ್ತು. ಆದರೀಗ ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಿಇಒ ನೀಡಿರುವ ವರದಿ ಆಧರಿಸಿ ಸಂಚಾರಿ ಶಿಶುಪಾಲನ ಕೇಂದ್ರಗಳೂ ಸೇರಿ 137 ಶಿಶುಪಾಲನ ಕೇಂದ್ರಗಳನ್ನೂ ರದ್ದುಪಡಿಸಿ ಕಾರ್ಮಿಕ ಇಲಾಖೆ ಆದೇಶಿಸಿದೆ.

4 ಸಾವಿರ ಕೂಸಿನ ಮನೆ
ಆರಂಭಿಸಲು ಸರಕಾರದಿಂದ ಕ್ರಮ
ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ರಾಜ್ಯದ 4 ಸಾವಿರ ಗ್ರಾಪಂ ವ್ಯಾಪ್ತಿಗಳಲ್ಲಿ 40 ಕೋಟಿ ರೂ. ವೆಚ್ಚದಲ್ಲಿ ಕೂಲಿ ಕಾರ್ಮಿಕರ ಮಕ್ಕಳ ಪಾಲನೆಗಾಗಿ ಕೂಸಿನ ಮನೆ ತೆರೆಯಲು ಘೋಷಿಸಿದ್ದ ಸರಕಾರ, ಅಗತ್ಯ ಕಟ್ಟಡ, ಇತರೆ ಮೂಲಸೌಕರ್ಯದ ವೆಚ್ಚವನ್ನು ಆಯಾ ಗ್ರಾಪಂಗಳೇ ತಮ್ಮ ಸಂಪನ್ಮೂಲದಲ್ಲಿ ಹೊಂದಿಸಬೇಕೆಂದು ಸೂಚಿಸಿದೆ. ಕಳೆದ ತಿಂಗಳಷ್ಟೇ ಕಲಬುರಗಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಸಿನ ಮನೆಯ ಲಾಂಛನ ಬಿಡುಗಡೆ ಮಾಡಿದ್ದರು.

ರಾಜ್ಯದಲ್ಲಿ ನರೇಗಾ ಕಾರ್ಡ್‌ ಹೊಂದಿದ ಸುಮಾರು 40 ಸಾವಿರ ಮಹಿಳಾ ಕಾರ್ಮಿಕರಿದ್ದು, ಉದ್ಯೋಗದಲ್ಲಿ ಭಾಗಿಯಾಗಲು ಅನುಕೂಲ ಆಗುವಂತೆ ಅವರ 3 ವರ್ಷದೊಳಗಿನ ಮಕ್ಕಳನ್ನು ಈ ಕೂಸಿನ ಮನೆಗಳಲ್ಲಿ ಆರೈಕೆ ಮಾಡಲಾಗುತ್ತದೆ. ಪ್ರತೀ ಕೇಂದ್ರದಲ್ಲಿ 25 ಶಿಶುವಿಗೆ ಅವಕಾಶ ನೀಡಿದ್ದು, 10 ಮಂದಿ ಆರೈಕೆದಾರರೂ ಇರಲಿದ್ದಾರೆ. ದಿಲ್ಲಿಯ ಮೊಬೈಲ್‌ ಕ್ರಶ್‌ ಸಂಸ್ಥೆಯ ಸಹಯೋಗದೊಂದಿಗೆ ಆರೈಕೆದಾರರಿಗೆ ತರಬೇತಿ ಸಹ ಕೊಡಲಾಗುತ್ತದೆ.

ಶಿಶುಪಾಲನ ಕೇಂದ್ರ ರದ್ದತಿಗೆ ಮೂರು ಕಾರಣ
-ಬಹುತೇಕ ಶಿಶುಪಾಲನ ಕೇಂದ್ರಗಳಲ್ಲಿ ಕನಿಷ್ಠ ಸಂಖ್ಯೆಯ ಮಕ್ಕಳು ಲಭ್ಯವಿಲ್ಲದೆ ಇರುವುದು.
– ಕೆಲವು ಕೇಂದ್ರಗಳಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳನ್ನು ಹೊರತುಪಡಿಸಿ ಬೇರೆ ಮಕ್ಕಳಿರದಿರುವುದು.
– ಶಿಶುಪಾಲನ ಕೇಂದ್ರಗಳನ್ನು ನಿರ್ವಹಣೆ ಮಾಡಲು ಆವಶ್ಯಕ ಸಂಖ್ಯೆಯ ಸೂಕ್ತ ತರಬೇತಿ ಹೊಂದಿದ ಅಧಿಕಾರಿಗಳ ಕೊರತೆ.

ಟಾಪ್ ನ್ಯೂಸ್

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Artificial Intelligence: ಕೃತಕ ಬುದ್ಧಿಮತ್ತೆ ಕ್ರಾಂತಿ- ಹೊಸ ಸಂಗಾತಿ ಹೊಸ ಅವಕಾಶ!

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

Mangaluru: ಶೋಷಣೆ ಎಲ್ಲ ರಂಗದಲ್ಲೂ ಇದೆ: ಡಾ| ಗುರುಕಿರಣ್‌

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು

Desi Swara: ಸೌಪರ್ಣಿಕಾ ನದಿ ತೀರದಲ್ಲಿ- ಏಕಾಂತದಿ ತೆರೆದ ನೆನೆಪಿನ ಗುಚ್ಛಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

Mudigere: 30 ಅಡಿ ಎತ್ತರದಿಂದ ಪಂಚಾಯಿತಿ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

Mudigere: 30 ಅಡಿ ಎತ್ತರದಿಂದ ಪಂಚಾಯತ್ ಆವರಣಕ್ಕೆ ಬಿದ್ದ ಕಾರು… ಮೂವರ ಸ್ಥಿತಿ ಗಂಭೀರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Mahalingapura: ಗಮನ ಸೆಳೆದ ಮಹಾಲಿಂಗೇಶ್ವರ ಜಾತ್ರೆಯ ರಾಷ್ಟ್ರಮಟ್ಟದ ಕುಸ್ತಿ ಪಂದ್ಯಾವಳಿ…

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Desi Swara: ಮೊಂತಿ ಆಚರಣೆ- ವರ್ಷದ ಮೊದಲ ಸುಗ್ಗಿ ಸಂಭ್ರಮ

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Alanda: ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Parvin Dabas: ಬಾಲಿವುಡ್ ನಟ ಪರ್ವಿನ್ ದಾಬಾಸ್ ಕಾರು ಅಪಘಾತ… ಐಸಿಯುನಲ್ಲಿ ಚಿಕಿತ್ಸೆ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Upendra: ‘ಭಗವಂತನೇ ಈ ಸಿನಿಮಾ ಮಾಡ್ಸಿದಾನೆ..’: ‘ಉಪೇಂದ್ರ’ ನೋಡಿ ಉಪೇಂದ್ರ ಭಾವುಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.