Conflict: ರಾಜ್ಯದಲ್ಲೂ ರಾಜ್ಯಪಾಲ- ಸರಕಾರ ಸಂಘರ್ಷ ಆರಂಭ?

ಲಾಭದಾಯಕ ಹುದ್ದೆ ವಿನಾಯಿತಿ ಮಸೂದೆ ಸರಕಾರಕ್ಕೆ ವಾಪಸ್‌/ ದೇಶಪಾಂಡೆ, ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಹುದ್ದೆ ಅತಂತ್ರ

Team Udayavani, Apr 13, 2024, 11:30 AM IST

13

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಬಿಸಿ ಏರುತ್ತಿರುವ ಸಂದರ್ಭದಲ್ಲೇ ರಾಜಭವನ ಹಾಗೂ ಮುಖ್ಯಮಂತ್ರಿ ಕಚೇರಿಯ ಮಧ್ಯೆ ಶೀತಲ ಸಮರ ಆರಂಭವಾಗಿದೆ. ಸಿಎಂ ಸಲಹೆಗಾರರ ನೇಮಕಕ್ಕೆ ಕಾನೂನು ತೊಡಕು ಉಂಟಾಗಬಾರದೆಂಬ ಉದ್ದೇಶದಿಂದ ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ಅಂಗೀಕರಿಸಿ ಅನುಮೋದನೆಗೆ ಕಳುಹಿಸಿದ್ದ “ಲಾಭದಾಯಕ ಹುದ್ದೆ ವಿನಾಯಿತಿ ಮಸೂದೆ’ಯನ್ನು ರಾಜ್ಯ ಪಾಲರು ವಾಪಸ್‌ ಕಳುಹಿಸಿದ್ದಾರೆ.

ರಾಜ್ಯದ ನೆರೆಯ ರಾಜ್ಯಗಳಾಗಿರುವ ತಮಿಳು ನಾಡು, ತೆಲಂಗಾಣ, ಕೇರಳಗಳಲ್ಲಿ ಮಸೂದೆ ಅಂಗೀಕಾರ ಸಹಿತ ಪ್ರಮುಖ ವಿಚಾರಗಳ ಬಗ್ಗೆ ರಾಜ್ಯಪಾಲರು ಮತ್ತು ಆಯಾ ಸರಕಾರಗಳ ನಡುವೆ ಸಂಘರ್ಷ ನಡೆಯುತ್ತಿರುವಂತೆಯೇ ರಾಜ್ಯದಲ್ಲಿ ಈ ಬೆಳವಣಿಗೆ ನಡೆದಿದೆ.

ಇದರಿಂದಾಗಿ ಸಿಎಂ ಸಿದ್ದರಾಮಯ್ಯನವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಸಲಹೆಗಾರ ಬಿ.ಆರ್‌. ಪಾಟೀಲ್‌ ಹಾಗೂ ಆಡಳಿತ ಸುಧಾ ರಣ ಆಯೋಗದ ಅಧ್ಯಕ್ಷ ಆರ್‌.ವಿ. ದೇಶಪಾಂಡೆ ಯವರ ನೇಮಕ ಪ್ರಕ್ರಿಯೆ ಅತಂತ್ರ ಸ್ಥಿತಿ ತಲುಪುವ ಸಾಧ್ಯತೆ ಇದೆ. ಧಾರ್ಮಿಕ ದತ್ತಿ ಮಸೂದೆಯ ಬಳಿಕ ಸರಕಾರದ ಮತ್ತೂಂದು ಮಹತ್ವದ ನಿರ್ಧಾರಕ್ಕೆ ರಾಜ್ಯಪಾಲರು “ಕೆಂಪು ದೀಪ’ ತೋರಿದ್ದಾರೆ.

ರಾಜ್ಯಪಾಲರ ಈ ನಡೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ತೀವ್ರ ಸಿಡಿಮಿಡಿ ವ್ಯಕ್ತಪಡಿಸಿದ್ದಾರೆ ಎಂದು ತಿಳಿದು ಬಂದಿದೆ. ಜತೆಗೆ ಈ ಬಗ್ಗೆ ಮಹತ್ವದ ಚರ್ಚೆಯೂ ನಡೆದಿದೆ. ರಾಜ್ಯಪಾಲರ ನಡೆ ಅಸಾಂವಿಧಾನಿಕ ಎಂದು ರಾಜಭವನಕ್ಕೆ ಪತ್ರ ಬರೆಯುವಂತೆ ಕಾನೂನು ಕಾರ್ಯದರ್ಶಿಗೆ ಸಿಎಂ ಕಚೇರಿಯಿಂದ ನಿರ್ದೇಶನ ನೀಡಲಾಗಿದೆ.

ಆದರೆ ರಾಜ್ಯಪಾಲರ ಕಾರ್ಯದರ್ಶಿಯನ್ನು ಖುದ್ದು ಭೇಟಿ ಮಾಡಿದ ಬಳಿಕವೇ ಮುಂದಿನ ನಿರ್ಧಾರ ತೆಗೆದುಕೊಳ್ಳುವಂತೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯ ಕಾರ್ಯದರ್ಶಿ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಸವರಾಜ ರಾಯರೆಡ್ಡಿ, ಬಿ.ಆರ್‌. ಪಾಟೀಲ್‌ ಹಾಗೂ ಆರ್‌.ವಿ. ದೇಶಪಾಂಡೆಯವರ ನೇಮಕಕ್ಕೆ ರಾಜ್ಯಪಾಲರು ಆಕ್ಷೇಪ ಎತ್ತಬಹುದೆಂಬ ಕಾರಣಕ್ಕೆ ರಾಜ್ಯ ಸರಕಾರ ಈ ತಿದ್ದುಪಡಿ ಮಸೂದೆ ತಂದಿತ್ತು. ಈ ಹಿಂದೆ ಸಿಎಂ ಕಾನೂನು ಸಲಹೆಗಾರರ ಹುದ್ದೆಗೆ ಶಾಸಕ ಪೊನ್ನಣ್ಣ ಅವರನ್ನು ನೇಮಕ ಮಾಡಿದಾಗ ರಾಜ್ಯಪಾಲರಿಂದ ಯಾವುದೇ ಆಕ್ಷೇಪ ವ್ಯಕ್ತವಾಗಿರಲಿಲ್ಲ. ಆದರೆ ಬೇಕಾಬಿಟ್ಟಿಯಾಗಿ ಸಚಿವ ಸಂಪುಟ ಸ್ಥಾನಮಾನ ನೀಡುತ್ತಿರುವ ಪ್ರಕ್ರಿಯೆ ಬಗ್ಗೆ ರಾಜಭವನ ಮುನಿಸಿಕೊಂಡಿದೆ ಎನ್ನಲಾಗುತ್ತಿದೆ.

ಚುನಾವಣೆಯ ಹೊಸ್ತಿಲಲ್ಲಿ ರಾಜ್ಯಪಾಲರು ಈ ನಿರ್ಧಾರ ತೆಗೆದುಕೊಂಡಿರುವುದು ತೀವ್ರ ರಾಜಕೀಯ ಕೋಲಾಹಲ ಸೃಷ್ಟಿಸುವ ಸಾಧ್ಯತೆ ಇದೆ. ಕೇಂದ್ರದ ವಿರುದ್ಧ ಈಗಾಗಲೇ ತಿರುಗಿ ಬಿದ್ದಿರುವ ಸಿದ್ದರಾಮಯ್ಯ ಸರಕಾರ ಈ ವಿಚಾರವನ್ನು ಸರಳವಾಗಿ ಸ್ವೀಕರಿಸುವ ಸಾಧ್ಯತೆ ಕಡಿಮೆ. ಇದು ಮತ್ತೂಂದು ಸಾಂವಿಧಾನಿಕ ಬಿಕ್ಕಟ್ಟಿನ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆ ಇದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಟಾಪ್ ನ್ಯೂಸ್

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

MBPatil

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

1-a-da

Rain; ಭಾರತ ಮತ್ತು ದಕ್ಷಿಣ ಆಫ್ರಿಕಾ ವನಿತಾ ಟಿ20 ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

MBPatil

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

1-paris

Paris Olympics; ಅಲ್ಡ್ರಿನ್‌, ಅಂಕಿತಾ ಧ್ಯಾನಿಗೆ ಒಲಿಂಪಿಕ್ಸ್‌ ಟಿಕೆಟ್‌

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

1-eweweqw

Wrestling; ವಿನೇಶ್‌ ಫೋಗಾಟ್‌ ಗೆ ಸ್ವರ್ಣ ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.