“ಮೋದಿ ಅಟ್‌-20: ಡ್ರೀಮ್ಸ್‌ ಮೀಟ್‌ ಡೆಲಿವರಿ’ ಕೃತಿ ಅನಾವರಣಗೊಳಿಸಿ ಸಿಎಂ ಬೊಮ್ಮಾಯಿ

ಅಧಿಕಾರ ರಾಜಕಾರಣ ಮಾಡದ ಪ್ರಧಾನಿ ಮೋದಿ

Team Udayavani, Jun 28, 2022, 12:36 AM IST

“ಮೋದಿ ಅಟ್‌-20: ಡ್ರೀಮ್ಸ್‌ ಮೀಟ್‌ ಡೆಲಿವರಿ’ ಕೃತಿ ಅನಾವರಣಗೊಳಿಸಿ ಸಿಎಂ ಬೊಮ್ಮಾಯಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಅಧಿಕಾರದ ರಾಜಕಾರಣ ಮಾಡದೆ ಜನರ ರಾಜಕಾರಣ ಮಾಡಿದ್ದರಿಂದ ದೇಶದ ಇತಿಹಾಸ, ಚರಿತ್ರೆ ಮತ್ತು ಭವಿಷ್ಯದಲ್ಲಿ ಚಿರಸ್ಮರಣೀಯರಾಗಿ ಇರಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದರು.

ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಸೋಮವಾರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯೋಜಿಸಿದ್ದ “ಮೋದಿ ಅಟ್‌-20: ಡ್ರೀಮ್ಸ್‌ ಮೀಟ್‌ ಡೆಲಿವರಿ’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮೋದಿ ಬರುವ ಮೊದಲು ಹಲವಾರು ಸ್ಪಷ್ಟ ನೀತಿ ಇಲ್ಲದ ಕಾರಣ ಹಗರಣಗಳ ದೇಶ, ಕಠಿನ ನಿಲುವು ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಅರಾಜಕತೆ ಮೂಡಿತ್ತು, ಆದರೆ ಮೋದಿ ಆರ್ಥಿಕತೆ, ಸಾಮಾಜಿಕ ಬದಲಾವಣೆ ತಂದಿದ್ದಾರೆ. ಜನರ ಜೀವನ ಗುಣಮಟ್ಟ ಸುಧಾರಣೆ, ಕಾನೂನು ವ್ಯವಸ್ಥೆ, ಬಂದರು ಅಭಿವೃದ್ಧಿ, ಜನಸಾಮಾನ್ಯರಿಗೆ ಬೇಕಾದ ವ್ಯವಸ್ಥೆಯನ್ನು ಬದಲಾಯಿಸಿದ್ದಾರೆ ಎಂದು ಹೇಳಿದರು.

ಗಾಂಧಿ ಕಂಡ ಸ್ವಚ್ಛ  ಭಾರತದ ಬಗ್ಗೆ ಎಲ್ಲ ಪ್ರಧಾನಿಗಳು ಕಡೆಗಣಿಸಿದ್ದರು. ಆದರೆ ಮೋದಿ ಅವರು “ಸ್ವಚ್ಛ  ಭಾರತ್‌’ ಪರಿಕಲ್ಪನೆ ಕಂಡವರು. ಪ್ರತಿ ಮನೆ ಮನೆಗೆ ನೀರು ನೀಡುವುದಾಗಿ ಘೋಷಿಸಿದ್ದಾರೆ. ಅಸಾಧ್ಯವಾದುದನ್ನು ಸಾಧ್ಯವಾಗಿಸಿದ್ದಾರೆ. ತಂತ್ರಜ್ಞಾನ ಬಳಸಿ ನೇರವಾಗಿ ಫ‌ಲಾನುಭವಿಗಳಿಗೆ ಅನುದಾನ ಬಿಡುಗಡೆ, 66 ಸಾವಿರ ಕೋಟಿ ರೂ. ವೆಚ್ಚದಲ್ಲಿ ಸೆಮಿಕಂಡಕ್ಟರ್‌ ಉತ್ಪಾದನ ಘಟಕ ನಿರ್ಮಾಣ, ಖೇಲೋ ಇಂಡಿಯಾ ಮೂಲಕ ದೇಶದ ಇತಿಹಾಸದಲ್ಲಿ ಮೊದಲ ಬಾರಿ ಒಲಿಂಪಿಕ್ಸ್‌ನಲ್ಲಿ ಹೆಚ್ಚು ಪದಕ ಗೆಲ್ಲುವಂತೆ ಮಾಡಿದ್ದು ಮೋದಿಯವರ ಪರಿವರ್ತನೆಗೆ ಸಾಕ್ಷಿಯಾಗಿದೆ ಎಂದರು.

ಪುಸ್ತಕದಲ್ಲಿ ಕನ್ನಡಿಗರಾದ ಸುಧಾಮೂರ್ತಿ, ಡಾ| ದೇವಿ ಶೆಟ್ಟಿ ಅವರಂಥ ಸಾಧಕರ ಬರಹಗಳಿವೆ. ರಾಜ್ಯದ ನೆಲ ಜಲ, ಕೃಷಿ, ಉದ್ಯಮ, ಹೊಸ ತಂತ್ರಜ್ಞಾನದ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಒಲವಿದೆ. ಆದ್ದರಿಂದ ಅವರ ಸಾಧನೆಯ “ಮೋದಿ 20′ ಕೃತಿಯನ್ನು ಕನ್ನಡಕ್ಕೆ ಅನುವಾದ ಮಾಡಿಸಿ ರಾಜ್ಯದ ಜನರಿಗೆ ನೀಡಲಾಗುತ್ತದೆ ಎಂದರು.
ಕೇಂದ್ರ ವಾರ್ತಾ ಮತ್ತು ಪ್ರಸಾರ ರಾಜ್ಯ ಖಾತೆ ಸಚಿವ ಎಲ್‌. ಮುರುಗನ್‌ ಮಾತನಾಡಿ, ಮೋದಿಯವರು ಪ್ರತಿ ಕ್ಷೇತ್ರದಲ್ಲಿಯೂ ಉತ್ತಮ ಆಡಳಿತ ನೀಡಿದ್ದಾರೆ. ದಲಿತರು, ಬುಡಕಟ್ಟು ಜನಾಂಗ, ಯುವಕರು, ಹೆಣ್ಣು ಮಕ್ಕಳ ಸಬಲೀಕರಣಗೊಳಿಸುವ ಯೋಜನೆಗಳನ್ನು ರೂಪಿಸಿದ್ದಾರೆ ಎಂದು ತಿಳಿಸಿದರು.

ಕಿಸಾನ್‌ ಸಮ್ಮಾನ್‌ ಯೋಜನೆ ಮೂಲಕ ರೈತರಿಗೆ ನೇರವಾಗಿ ಅನುದಾನ ತಲುಪುವಂತೆ ಮಾಡಿರುವುದು ಮಾದರಿ ಕಾರ್ಯಕ್ರಮವಾಗಿದೆ. ಆತ್ಮನಿರ್ಭರ ಭಾರತ ಮೂಲಕ ಸ್ಥಳೀಯ ಉತ್ಪನ್ನಗಳಿಗೆ ಆದ್ಯತೆ ನೀಡುವ ಮೂಲಕ ಹೊಸ ಭಾರತ ನಿರ್ಮಾಣಕ್ಕೆ ಮುಂದಾಗಿದ್ದಾರೆ ಎಂದರು.

ಇನ್ಫೋಸಿಸ್‌ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಮಾತನಾಡಿ, ಮೋದಿ ಅಟ್‌ 20- ಪುಸ್ತಕದಲ್ಲಿ “ದೆ ಆರ್‌ ಕಮ್‌ ವಿಂಡ್ಸ್‌ ಆಫ್ ಚೇಂಜ್‌’ ಎಂಬ ಅಂಕಣವಿದೆ. ಈ ಅಂಕಣವನ್ನು ಮೋದಿ ಕೂಡ ಇಷ್ಟಪಟ್ಟಿದ್ದಾರಂತೆ. ಸಾಮಾನ್ಯ ಜನರೊಂದಿಗೆ ಅವರು ಬೆರೆಯುವುದರಿಂದ ನನ್ನ ಅಂಕಣ ಇಷ್ಟವಾಗಿರಬಹುದು ಎಂದು ಹೇಳಿದರು.

ಸಚಿವರಾದ ಡಾ. ಸಿ.ಎನ್‌. ಅಶ್ವತ್ಥ ನಾರಾಯಣ, ಬಿ.ಸಿ. ಪಾಟೀಲ್‌, ವಿ. ಸೋಮಣ್ಣ, ವಿ. ಸುನೀಲ್‌ಕುಮಾರ್‌, ಶಾಸಕ ಉದಯ್‌ ಗರುಡಾಚಾರ್‌, ನಟಿ ತಾರಾ ಅನುರಾಧಾ ಹಾಗೂ ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್‌. ಮಂಜುನಾಥ ಪ್ರಸಾದ್‌ ಉಪಸ್ಥಿತರಿದ್ದರು.

ಕಠಿನ ದಾರಿ ಸವೆಸಿದ ಮೋದಿ: ಗೆಹ್ಲೋಟ್
ರಾಜ್ಯಪಾಲರಾದ ಥಾವರ್‌ ಚಂದ್‌ ಗೆಹ್ಲೋಟ್ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಬಾಲ್ಯದಿಂದ ದೇಶದ ಪ್ರಧಾನಿಯಾಗುವರೆಗಿನ ಪ್ರಯಾಣವು ಕಷ್ಟಗಳುಮತ್ತು ಕಠಿನ ಪರಿಶ್ರಮದಿಂದ ಕೂಡಿದೆ. ಪ್ರತಿಯೊಬ್ಬ ವ್ಯಕ್ತಿಗೂ ಅವರ ವ್ಯಕ್ತಿತ್ವ ಮತ್ತು ಜೀವನ ಸ್ಫೂರ್ತಿದಾಯಕ ವಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಈ ಪುಸ್ತಕದ ಮೂಲಕ ಮೋದಿ ಅವರು ರಾಷ್ಟ್ರದ ಏಕತೆ-ಸಮಗ್ರತೆ, ಸಾಮಾಜಿಕ ಸಾಮರಸ್ಯ ಮತ್ತು ರಾಷ್ಟ್ರೀಯವಾದಿ ಚಿಂತನೆ ಯೊಂದಿಗೆ ಮಾಡಿದ ಕಾರ್ಯಗಳ ಮಾಹಿತಿ ದೊರೆಯಲಿದೆ. ದೇಶದ ಹಿತಾಸಕ್ತಿ, ಸಾರ್ವಜನಿಕ ಹಿತಾಸಕ್ತಿ ಜನರ ಚಿಂತನೆಯಲ್ಲಿ ಬದಲಾವಣೆ ಆಗಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.