![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 23, 2023, 2:48 PM IST
ದಾವಣಗೆರೆ: ಅತಿ ಶೀಘ್ರದಲ್ಲಿ 13 ಸಾವಿರ ದಷ್ಟು ಹುದ್ದೆಗಳ ನೇಮಕ ಮಾಡಿಕೊಳ್ಳ ಲಾಗುವುದು ಎಂದು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, 13 ಸಾವಿರ ಹುದ್ದೆಗಳ ನೇಮಕಾತಿ ಜೊತೆಗೆ 5 ಸಾವಿರ ಹೊಸ ಬಸ್ ಖರೀದಿಸಲಾಗುವುದು. ಹುದ್ದೆಗಳ ನೇಮಕ, ಬಸ್ ಖರೀದಿ ನಂತರ ಕೊರೊನಾ ಕಾರಣಕ್ಕಾಗಿ ಗ್ರಾಮಾಂತರ ಭಾಗದಲ್ಲಿ ಸ್ಥಗಿತಗೊಳಿಸ ಲಾಗಿದ್ದ ಬಸ್ ಸಂಚಾರ ಪುನಾರಂಭಗೊಳಿಸಲಾಗುವುದು ಎಂದು ತಿಳಿಸಿದರು.
ಕೆಎಸ್ಸಾರ್ಟಿಸಿ, ಬಿಬಿಎಂಪಿ ಒಳಗೊಂಡಂತೆ ಎಲ್ಲ ವಿಭಾಗದಲ್ಲಿ ವಿದ್ಯುತ್ ಬಸ್ ಖರೀದಿ ಮಾಡಲಾಗುವುದು. ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದಷ್ಟು ಬೇಗ ವಿದ್ಯುತ್ ಬಸ್ ಖರೀದಿಸಿ ನಗರ ಸಾರಿಗೆ ವ್ಯವಸ್ಥೆಗೂ ಬಳಕೆ ಮಾಡಲಾಗುವುದು ಎಂದು ತಿಳಿಸಿದರು.
ಶಕ್ತಿ ಯೋಜನೆಯಿಂದ ಸಂಸ್ಥೆಗೆ ನಷ್ಟ ಆಗುವುದಿಲ್ಲ. ಯೋಜನೆ ಆರಂಭದ ನಂತರ 43 ಕೋಟಿಯಷ್ಟು ಮಹಿಳೆಯರು ಪ್ರಯಾಣ ಮಾಡಿದ್ದಾರೆ. ಮಹಿಳೆಯರಿಂ ದಲೇ ಶಕ್ತಿ ಯೋಜನೆ ಯಶಸ್ವಿಯಾಗಿ ನಡೆಯುತ್ತಿದೆ. ನಾಲ್ಕೂ ವಿಭಾಗದಿಂದ ರಾಜ್ಯದ ಎಲ್ಲ ಮಹಿಳೆಯರಿಗೆ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.
ರಾಜ್ಯದಲ್ಲಿ ದಿನಕ್ಕೆ 1.56 ಲಕ್ಷದಷ್ಡು ಷೆಡ್ಯೂಲ್ ಇದೆ. ಅದರಲ್ಲಿ ಒಂದರೆಡು ಮಾರ್ಗದಲ್ಲಿ ಸಣ್ಣಪುಟ್ಟ ವ್ಯತ್ಯಾಸ ಆಗಿರ ಬಹುದು. ನಮ್ಮ ವಿರೋಧ ಪಕ್ಷಗಳು ಅದನ್ನೇ ದೊಡ್ಡದ್ದಾಗಿ ಮಾಡುವ ಮೂಲಕ ಶಕ್ತಿ ಯೋಜನೆಯನ್ನೇ ಮುರಿಯುವ ಕೆಲಸ ಮಾಡುತ್ತಿವೆ ಎಂದು ದೂರಿದರು.
ಶಕ್ತಿ ಯೋಜನೆಯಡಿ ಜೂನ್ ನಲ್ಲಿ ಶೇ. 80 ರಷ್ಟು ಹಣ ಸಂದಾಯವಾಗಿದೆ. ಜುಲೈನಲ್ಲಿ 293 ಕೋಟಿ ಬಂದಿದೆ. ಇನ್ನೂ ಹಣ ಬರಬೇಕಿದೆ. ನಾಲ್ಕು ವಿಭಾಗದಿಂದ ಡೇಟಾ ನೀಡಿದ ತಕ್ಷಣವೇ ಹಣ ಬಿಡುಗಡೆ ಆಗುತ್ತದೆ. ಶಕ್ತಿ ಯೋಜನೆಗಾಗಿಯೇ 500 ಕೋಟಿ ಮೀಸಲಿಡಲಾಗಿದೆ ಎಂದು ತಿಳಿಸಿದರು.
ದೇವಾಲಯಗಳ ಅರ್ಚಕರಿಗೆ ನೇರವಾಗಿ ಹಣ ಸಂದಾಯ ಮಾಡಲು ಕಂದಾಯ ಇಲಾಖೆಯವರಿಗೆ ಸೂಚನೆ ನೀಡಲಾಗಿದೆ ಎಂದು ಮುಜರಾಯಿ ಇಲಾಖೆಯ ಸಚಿವರೂ ಆಗಿರುವ ರಾಮಲಿಂಗಾ ರೆಡ್ಡಿ ತಿಳಿಸಿದರು.
ಕಾಂಗ್ರೆಸ್ ನಲ್ಲಿ ಫ್ರೀಬರ್ಡ್ ನಂತಿದ್ದವರಿಗೆ ಬಿಜೆಪಿಯಲ್ಲಿ ಉಸಿರು ಗಟ್ಟುವ ವಾತಾವರಣ ಇರುವ ಕಾರಣಕ್ಕೆ ಮತ್ತೆ ಕಾಂಗ್ರೆಸ್ ಗೆ ಬರುತ್ತಿದ್ದಾರೆ ಎಂದು ರಾಮಲಿಂಗಾರೆಡ್ಡಿ ತಿಳಿಸಿದರು.
ನಮ್ಮ ಪಕ್ಷದಲ್ಲಿ ಫ್ರೀ ಬರ್ಡ್ ನಂತೆ ಓಡಾಡಿಕೊಂಡು ಇದ್ದವರಿಗೆ ಬಿಜೆಪಿಯಲ್ಲಿ ಉಸಿರುಗಟ್ಟುವ ವಾತಾವರಣ ಇರುವ ಕಾರಣಕ್ಕೆ ಬಿಟ್ಟು ಬರುತ್ತಿದ್ದಾರೆ. ಅಲ್ಲಿ ಕೋಳಿಗಳನ್ನು ಕೆಜಿ ಗಟ್ಟಲೆ ತೂಕಕ್ಕೆ ಹಾಕುವಂತಹ ವಾತಾವರಣ ಇದೆ. ಹಾಗಾಗಿ ಮತ್ತೆ ನಮ್ಮ ಪಕ್ಷಕ್ಕೆ ಬರುತ್ತಿದ್ದಾರೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಬಿಜೆಪಿಯವರು ಹತಾಶರಾಗಿ ಏನಾದರೂ ಮಾಡಿ ಶಕ್ತಿ ಇತರೆ ಯೋಜನೆಗಳ ಮುರಿಯುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.