![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
Government ಬಸ್ ಪ್ರಯಾಣ ದರ ಹೆಚ್ಚಳ: ಸಾರಿಗೆ ಸಚಿವರ ಸುಳಿವು
ನಿಗಮಗಳಿಗೆ 1,100 ಕೋಟಿ ರೂ. "ಶಕ್ತಿ' ಬಾಕಿ
Team Udayavani, Jun 20, 2024, 6:45 AM IST
![ಸರ್ಕಾರಿ ಬಸ್ ಪ್ರಯಾಣ ದರ ಹೆಚ್ಚಳ: ಸಾರಿಗೆ ಸಚಿವರ ಸುಳಿವು](https://www.udayavani.com/wp-content/uploads/2024/06/RAMA-620x404.jpg)
ಬೆಂಗಳೂರು: ಸಾರಿಗೆ ನಿಗಮಗಳಿಗೆ ಆಗುತ್ತಿರುವ ನಷ್ಟವನ್ನು ಸರ್ಕಾರವಾದರೂ ಭರಿಸಿಕೊಡಬೇಕು ಅಥವಾ ಪ್ರಯಾಣ ದರ ಪರಿಷ್ಕರಣೆಗಾದರೂ ಅವಕಾಶ ಮಾಡಿಕೊಡಬೇಕು ಎಂದು ಹೇಳುವ ಮೂಲಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಸ್ ಪ್ರಯಾಣ ದರ ಹೆಚ್ಚಳದ ಸ್ಪಷ್ಟ ಸೂಚನೆ ನೀಡಿದರು.
“ಶಕ್ತಿ’ ಯೋಜನೆ ಅಡಿ 1,100 ಕೋಟಿ ರೂ. ಸರ್ಕಾರದಿಂದ ಬಾಕಿ ಬರಬೇಕಿದೆ. ಮತ್ತೂಂದೆಡೆ ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಹತ್ತು ಸಾವಿರ ಟ್ರಿಪ್ಗ್ಳನ್ನು ಹೆಚ್ಚಿಸಲಾಗಿದೆ. ವೇತನ ಪರಿಷ್ಕರಣೆ ಮಾಡಬೇಕಿದೆ. ಸಾಲದ ಹೊರೆಯೂ ಇದೆ. ಡೀಸೆಲ್ ದರ ಹೆಚ್ಚಳದಿಂದ ಮತ್ತಷ್ಟು ಹೊರೆ ಬಿದ್ದಿದೆ. ಇದೆಲ್ಲವನ್ನೂ ನೀಗಿಸುವುದು ಸಾರಿಗೆ ನಿಗಮಗಳಿಗೆ ಕಷ್ಟವಾಗುತ್ತಿದೆ. ಈ ನಷ್ಟವನ್ನು ಸರ್ಕಾರವಾದರೂ ಭರಿಸಿಕೊಡಬೇಕು ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಬಿಎಂಟಿಸಿ ವ್ಯಾಪ್ತಿಯಲ್ಲಿ ಬಸ್ ಪ್ರಯಾಣ ದರ ಪರಿಷ್ಕರಣೆಯಾಗಿ ದಶಕ ಕಳೆದಿದ್ದರೆ, ಉಳಿದ ನಿಗಮಗಳ ವ್ಯಾಪ್ತಿಯಲ್ಲಿ 2020ರಲ್ಲಿ ಟಿಕೆಟ್ ದರ ಹೆಚ್ಚಿಸಲಾಗಿತ್ತು. ಅಲ್ಲಿಂದ ಇದುವರೆಗೆ ಡೀಸೆಲ್ ಬೆಲೆ ಸಾಕಷ್ಟು ಬಾರಿ ಏರಿಕೆ ಕಂಡಿದೆ. ಬಿಡಿಭಾಗಗಳ ಬೆಲೆ ಹೆಚ್ಚಳವಾಗಿದೆ. ನೌಕರರ ವೇತನವೂ ಪರಿಷ್ಕರಣೆಯಾಗಿದೆ ಎಂದು ಅಲವತ್ತುಕೊಳ್ಳುವ ಮೂಲಕ ಬಸ್ ಪ್ರಯಾಣ ದರ ಏರಿಕೆ ಸುಳಿವು ನೀಡಿದರು.
ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಏರಿಕೆ ಸಂಬಂಧ ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್ಸಿ) ಮಾದರಿಯಲ್ಲಿ ಸಮಿತಿ ರಚಿಸಿ ಕಾಲ ಕಾಲಕ್ಕೆ ದರ ಪರಿಷ್ಕರಣೆ ಮಾಡುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚಿಂತನೆ ಇದೆ. ಈ ರೀತಿ ಕಾಲ-ಕಾಲಕ್ಕೆ ದರ ಪರಿಷ್ಕರಣೆಯಾದರೆ ಹೆಚ್ಚು ಸೂಕ್ತ. ಪ್ರಯಾಣಿಕರ ಮೇಲೂ ಹೊರೆ ಆಗುವುದಿಲ್ಲ. ಸಮಿತಿ ರಚನೆ ಮಾಡುವುದು ಒಳ್ಳೆಯದು ಎಂದರು.
ಟಾಪ್ ನ್ಯೂಸ್
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-415x277.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು](https://www.udayavani.com/wp-content/uploads/2024/07/11-1-150x90.jpg)
Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು
![Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ](https://www.udayavani.com/wp-content/uploads/2024/07/baramasagara-150x84.jpg)
Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ
![Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ](https://www.udayavani.com/wp-content/uploads/2024/07/HK-PATIL-150x90.jpg)
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
![CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ](https://www.udayavani.com/wp-content/uploads/2024/07/dk-h-150x90.jpg)
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
![krishne-bhyre-gowda](https://www.udayavani.com/wp-content/uploads/2024/07/krishne-bhyre-gowda-150x100.jpg)
ಸರಕಾರಿ ಕಾರ್ಯಕ್ರಮಕ್ಕೆ ಬಂದು ಸ್ವಾಮೀಜಿ ರಾಜಕೀಯ ಮಾತಾಡಿದರೆ ಹೇಗೆ?: ಕೃಷ್ಣಭೈರೇಗೌಡ ಅಸಮಾಧಾನ
![Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!](https://www.udayavani.com/wp-content/uploads/2024/07/13-150x90.jpg)
Vijayapura: 18 ಲಕ್ಷ ರೂ.ಗೆ ಮಾರಾಟವಾಗಿ ದಾಖಲೆ ಬರೆದ ವಿಜಯಪುರದ ರೈತ ಸಾಕಿದ್ದ ಎತ್ತು.!
![12](https://www.udayavani.com/wp-content/uploads/2024/07/12-1-150x90.jpg)
Chowkidar Movie: ಚೌಕಿದಾರ್ಗೆ ಮುಹೂರ್ತ ಇಟ್ರಾ!
![Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?](https://www.udayavani.com/wp-content/uploads/2024/07/Crude-150x83.jpg)
Union Govt: ಕಚ್ಛಾ ಪೆಟ್ರೋಲಿಯಂ ತೆರಿಗೆ ಶೇ.160ರಷ್ಟು ಹೆಚ್ಚಳ: ಏನಿದು Windfall Tax?
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.