ಅಕ್ರಮಗಳ ಬಗ್ಗೆ ಉತ್ತರ ನೀಡದೆ ಸರ್ಕಾರ ಪಲಾಯನ: ಸಿದ್ದರಾಮಯ್ಯ


Team Udayavani, Sep 23, 2022, 10:00 PM IST

ಅಕ್ರಮಗಳ ಬಗ್ಗೆ ಉತ್ತರ ನೀಡದೆ ಸರ್ಕಾರ ಪಲಾಯನ: ಸಿದ್ದರಾಮಯ್ಯ

ಬೆಂಗಳೂರು: ಪ್ರತಿಪಕ್ಷಗಳು ಪ್ರಸ್ತಾಪಿಸಿದ ಹಗರಣ-ಅಕ್ರಮಗಳ ಬಗ್ಗೆ ಉತ್ತರ ನೀಡದೆ ರಾಜ್ಯ ಸರ್ಕಾರ ಪಲಾಯನ ಮಾಡಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿ, ಪ್ರವಾಹ ಸಂಕಷ್ಟದ ಬಗ್ಗೆ ಸರ್ಕಾರ ಸಮಂಜಸ ಉತ್ತರ ನೀಡಿಲ್ಲ. ಪಿಎಸ್‌ಐ ಹಗರಣ ಕುರಿತು ಎಡಿಜಿಪಿ ಮಂಪರು ಪರೀಕ್ಷೆ, ನ್ಯಾಯಾಂಗ ತನಿಖೆಗೆ ಒಪ್ಪಲಿಲ್ಲ. ಬಸವರಾಜ ದಡೆಸಗೂರು ಆಡಿಯೋ ಲೀಕ್‌ ಆಗಿ ನನ್ನದೇ ಧ್ವನಿ ಎಂದು ಒಪ್ಪಿಕೊಂಡರೂ ಸರ್ಕಾರ ಮೌನ ವಹಿಸಿತು ಎಂದು ದೂರಿದರು.

ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಈ ಹಗರಣದಲ್ಲಿ ಒಬ್ಬ ಮಾಜಿ ಮುಖ್ಯಮಂತ್ರಿಗಳ ಮಗನ ಕೈವಾಡವಿದೆ ಎಂದು ಹೇಳಿದ್ದಾರೆ.

ಈ ಬಗ್ಗೆ ತನಿಖೆಯಾಗಿಲ್ಲ. ಇದರಲ್ಲಿ ಕೈವಾಡವಿರುವುದು ಯಡಿಯೂರಪ್ಪ ಅವರ ಮಗನಾ, ದೇವೇಗೌಡರ ಮಗನಾ, ಸಿದ್ದರಾಮಯ್ಯನ ಮಗನಾ ಎಂಬುದು ವಿಚಾರಣೆ ಆಗಲಿ ಎಂದು ಸವಾಲು ಹಾಕಿದರು.

ದಡೆಸಗೂರು ಲಂಚದ ಹಣ ಸರ್ಕಾರಕ್ಕೆ ನೀಡಿದ್ದೇನೆಂದು ಆಡಿಯೋದಲ್ಲಿ ಹೇಳಿದ್ದಾರೆ. ಈಗ ಯಾವ ಸರ್ಕಾರ ಇದೆ. ಬಿಜೆಪಿ ಸರ್ಕಾರ ಅಲ್ವಾ? ಈ ಹಣವನ್ನು ಮುಖ್ಯಮಂತ್ರಿಗಳಿಗೆ ಅಥವಾ ಗೃಹ ಸಚಿವರಿಗೆ ಕೊಟ್ಟಿರಬೇಕು ಎಂದು ದೂರಿದರು.

ನಾನು ಅಧಿವೇಶನವನ್ನು ಒಂದು ದಿನ ವಿಸ್ತರಣೆ ಮಾಡಿ, ಸೋಮವಾರ ಅಥವಾ ನಾಳೆ ಈ ವಿಚಾರ ಚರ್ಚೆ ಮಾಡೋಣ ಎಂದು ಹೇಳಿದೆ. ಆದರೆ ಸರ್ಕಾರ ಈ ಯಾವುದಕ್ಕೂ ಸಿದ್ಧವಿಲ್ಲ. ಬಿಜೆಪಿಯವರು ಸಿದ್ದರಾಮಯ್ಯ ಸ್ಕ್ಯಾಮ್‌ ರಾಮಯ್ಯ ಎಂಬ ಪುಸ್ತಕ ಹೊರತಂದಿದ್ದಾರೆ. ಈ ಪುಸ್ತಕದಲ್ಲಿರುವ ಯಾವುದಾದರೂ ಒಂದು ಆರೋಪವನ್ನು ಅವರು ಹಿಂದಿನ 3 ವರ್ಷಗಳ ಕಾಲ ಸದನದ ಒಳಗೆ ಅಥವಾ ಸದನದ ಹೊರಗೆ ಪ್ರಸ್ತಾಪ ಮಾಡಿದ್ದಾರಾ ಎಂದು ಪ್ರಶ್ನಿಸಿದರು.

ಇದೇ ಕಾರಣಕ್ಕೆ ನಾನು ಬಸವರಾಜ ಬೊಮ್ಮಾಯಿ ಅವರಿಗೆ 2006ರಿಂದ ಈ ವರೆಗಿನ ಸರ್ಕಾರದ ಎಲ್ಲವನ್ನೂ ನ್ಯಾಯಾಂಗ ತನಿಖೆ ಮಾಡಿಸಿ ಎಂದೆ. ಧಮ್‌ ಇದ್ರೆ ನ್ಯಾಯಾಂಗ ತನಿಖೆ ಮಾಡಿಸಲಿ ನೋಡೋಣ ಎಂದರು.

ಸರ್ಕಾರದ ಹಗರಣ, ಭ್ರಷ್ಟಾಚಾರವನ್ನು ಇಲ್ಲಿಗೇ ಬಿಡಲ್ಲ. ಮತ್ತೆ ಸದನ ಕರೆದರೆ ಶುರು ಮಾಡುತ್ತೇವೆ. ಈಗಾಗಲೇ 40 ಪರ್ಸೆಂಟ್‌ ಕಮಿಷನ್‌ ಕುರಿತು ಅಭಿಯಾನ ಆರಂಭ ಮಾಡಿದ್ದೇವೆ. ಜನರ ಬಳಿಗೆ ಹೋಗಿ ಸತ್ಯ ಹೇಳುತ್ತೇವೆ. ಇಂಥಾ ಭ್ರಷ್ಟ ಸರ್ಕಾರ ಇಡೀ ದೇಶದಲ್ಲಿ ಇಲ್ಲ, ನನ್ನ ರಾಜಕೀಯ ಜೀವನದಲ್ಲೂ ನೋಡಿಲ್ಲ.
– ಸಿದ್ದರಾಮಯ್ಯ, ಪ್ರತಿಪಕ್ಷ ನಾಯಕ

ಟಾಪ್ ನ್ಯೂಸ್

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Manglrui

Mangaluru: ಸಂಸ್ಥೆಯ ಬೆಳವಣಿಗೆಯಲ್ಲಿ ಮಾನವ ಸಂಪನ್ಮೂಲ ಪಾತ್ರ ಪ್ರಮುಖ: ಮಂಜುನಾಥ ಭಂಡಾರಿ

1-asasa

Test; ನ್ಯೂಜಿಲ್ಯಾಂಡ್‌ ಆಲೌಟ್‌ 88 : ಲಂಕೆಗೆ 514 ರನ್‌ ದಾಖಲೆ ಮುನ್ನಡೆ

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

leopard

leopard: ಮೂಲ್ಕಿ ಕೊಯ್ಯಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dinesh-gu

Dinesh Gundurao; ತಿಂಗಳೊಳಗೆ ಗೃಹ ಆರೋಗ್ಯ ಯೋಜನೆ ಜಾರಿ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-HDK

Documents ಬಿಡುಗಡೆಯಾದರೆ 6-7 ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ: ಎಚ್ ಡಿಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

congress

Haryana ಅನ್ನದಾತರ ಕಲ್ಯಾಣಕ್ಕೆ ಆಯೋಗ ರಚನೆ: ಕಾಂಗ್ರೆಸ್‌ ವಾಗ್ಧಾನ

MOdi (3)

Jammu and Kashmir ಜನತೆ ಭ್ರಷ್ಟ ಮುಕ್ತ ಸರಕಾರ ಬಯಸಿದ್ದಾರೆ: ಮೋದಿ

court

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

UNITED NATIONS

UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್‌ ಬೆಂಬಲ

1-wewewq

PM ರೇಸ್‌ನಲ್ಲಿ ನಾನು ಇಲ್ಲ; ಬೇಕಿದ್ದರೇ ಮೋದಿ ಕೇಳಿ: ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.