Joint Session; ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿದ ಸರಕಾರ: ವಿಪಕ್ಷ ಟೀಕೆ


Team Udayavani, Feb 13, 2024, 12:27 AM IST

bjp-jJoint Session; ರಾಜ್ಯಪಾಲರ ಮೂಲಕ ಸುಳ್ಳು ಹೇಳಿಸಿದ ಸರಕಾರ: ವಿಪಕ್ಷ ಟೀಕೆ

ಬೆಂಗಳೂರು: ರಾಜ್ಯಪಾಲರ ಭಾಷಣದ ಮೂಲಕ ರಾಜ್ಯ ಸರಕಾರ ಸುಳ್ಳು ಹೇಳಿಸಿದೆ ಎಂದು ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್‌ ಕಿಡಿ ಕಾರಿದ್ದು, ಉಪ್ಪು-ಹುಳಿ-ಖಾರ ಏನೂ ಇಲ್ಲದ ಸಪ್ಪೆ ಭಾಷಣ ಎಂದು ಟೀಕಿಸಿವೆ.

ಸೋಮವಾರ ರಾಜ್ಯಪಾಲರ ಭಾಷಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ್‌, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಡಿಸಿಎಂ ಡಾ| ಸಿ.ಎನ್‌. ಅಶ್ವತ್ಥನಾರಾಯಣ, ಜೆಡಿಎಸ್‌ ನಾಯಕ ಎಚ್‌.ಡಿ. ಕುಮಾರಸ್ವಾಮಿ ಮತ್ತಿತರ ನಾಯಕರು ಸರಕಾರದ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಬೊಮ್ಮಾಯಿ, ನನ್ನ ರಾಜಕೀಯ ಅನುಭವದಲ್ಲಿ ಇಷ್ಟು ಸಪ್ಪೆ, ನಿರಾಸೆಯ ಹಾಗೂ ಭವಿಷ್ಯದ ದಿಕ್ಕು-ದೆಸೆಯಿಲ್ಲದ ರಾಜ್ಯಪಾಲರ ಭಾಷಣ ನೋಡಿರಲಿಲ್ಲ. 9 ತಿಂಗಳುಗಳಿಂದ ಅಭಿವೃದ್ಧಿ ಶೂನ್ಯ, ಜನವಿರೋಧಿ ಸರಕಾರ ಇದೆ ಎಂಬುದು ಗೊತ್ತಿದೆ. ರಾಜ್ಯಪಾಲರ ಬಾಯಿಂದ ಬಹಳಷ್ಟು ಹಸಿ ಸುಳ್ಳು ಹೇಳಿಸಿದ್ದಾರೆ ಎಂದು ಟೀಕಿಸಿದರು.

ರಾಜ್ಯಪಾಲರ ಭಾಷಣ ಅತ್ಯಂತ ನೀರಸವಾಗಿದ್ದು, ಸುಳ್ಳುಗಳ ಕಂತೆಯನ್ನೇ ತುರುಕಲಾಗಿದೆ. ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಗ್ಯಾರಂಟಿ ಸುತ್ತ ಗಿರಕಿ ಹೊಡೆಯುವುದನ್ನು ಬಿಟ್ಟರೆ ಬೇರೆ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗಿಲ್ಲ ಎನ್ನುವುದು ರಾಜ್ಯಪಾಲರ ಭಾಷಣದಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.
– ಬಿ.ವೈ. ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ

ಕೆಟ್ಟ ಪರಂಪರೆಗೆ ನಾಂದಿ: ಸಿ.ಟಿ.ರವಿ
ಬೆಂಗಳೂರು: ಮುಂದಿನ ದಿನಗಳಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಮುನ್ಸೂಚಿಯಾಗಬೇಕಾಗಿದ್ದ ಭಾಷಣವನ್ನು ದೇಶವನ್ನು ಮತ್ತೂಮ್ಮೆ ವಿಭಜಿಸುವ ಕಾಂಗ್ರೆಸ್ಸಿನ ಒಳ ಹುನ್ನಾರದ ಭಾಗವನ್ನಾಗಿ ಮಾಡಿರುವುದು ದುರಂತ ಎಂದು ಶಾಸಕ ಸಿ.ಟಿ.ರವಿ ಹೇಳಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ಐದು ಗ್ಯಾರಂಟಿಯಲ್ಲಿ ನಾಲ್ಕನ್ನು ಅರೆಬರೆಯಾಗಿ ಜಾರಿಗೆ ತಂದ ಈ ಸರಕಾರಕ್ಕೆ ನಾಚಿಕೆ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಕೇಂದ್ರ ಸರಕಾರದ ಅಭಿವೃದ್ಧಿ ಕೆಲಸಗಳನ್ನು ಮುಚ್ಚಿಟ್ಟು, ರಾಜ್ಯಕ್ಕೆ ಅನ್ಯಾಯ ಆಗಿದೆ ಎಂದು ರಾಜ್ಯಪಾಲರ ಬಾಯಲ್ಲಿ ಹೇಳಿಸುವ ಕೆಟ್ಟ ಪರಂಪರೆಗೆ ನಾಂದಿ ಹಾಕಿದೆ ಎಂದು ಟೀಕಿಸಿದರು.

 

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

Jayalalittha-Golds

Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.