![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Oct 11, 2022, 6:02 PM IST
ಬೆಂಗಳೂರು : ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಆಶ್ರಯದಲ್ಲಿ ಅಕ್ಟೋಬರ್ 28 ರಂದು ನಡೆಯುವ ಕೋಟಿ ಕಂಠ ಗಾಯನ ಕಾರ್ಯಕ್ರಮಕ್ಕೆ ಭರದ ಸಿದ್ಧತೆ ಪ್ರಾರಂಭವಾಗಿದ್ದು, ಅ.20 ರೊಳಗೆ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಇಂಧನ, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ನಿರ್ದೇಶ ನೀಡಿದ್ದಾರೆ.
ಕಾರ್ಯಕ್ರಮ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಜತೆಗೆ ಸಮನ್ವಯ ಸಭೆ ನಡೆಸಿದ ಅವರು, ಇಡಿ ಸರ್ಕಾರವೇ ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, 20ನೇ ತಾರೀಕಿನೊಳಗಾಗಿ ನೋಂದಣಿ ಕಾರ್ಯ ಮುಕ್ತಾಯಗೊಳಿಸಬೇಕು. ಇದಕ್ಕಾಗಿ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ವೆಬ್ ಸೈಟ್ ನಲ್ಲಿರುವ ಕ್ಯೂ ಆರ್ ಕೋಡ್ ಅಥವಾ ಲಿಂಕ್ ಅನ್ನು ಬಳಸಬಹುದು. ವ್ಯಕ್ತಿಗತ ಹಾಗೂ ಸಂಘ ಸಂಸ್ಥೆಗಳು ಹೆಸರು ನೋಂದಾಯಿಸಬಹುದು ಎಂದು ಹೇಳಿದರು.
ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆ ಜತೆಗೆ ಸಭೆ ನಡೆಸಿದ್ದು, ರಾಜ್ಯದ ಎಲ್ಲ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳಿಂದ 25 ಲಕ್ಷ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಬೆಂಗಳೂರಿನ 11 ಸ್ಥಳಗಳಲ್ಲಿ ಕಾರ್ಯಕ್ರಮ ನಡೆಯುತ್ತದೆ ಎಂದರು.
ಕೋಟಿ ಕಂಠ ಗಾಯನದಲ್ಲಿ ಆರು ಹಾಡುಗಳ ಗಾಯನ ಕಡ್ಡಾಯವಾಗಿದೆ. ನಂತರ ಬೇಕಾದರೆ ಕನ್ನಡಪರವಾದ ಎಷ್ಟು ಗೀತೆಗಳನ್ನು ಬೇಕಾದರೂ ಹಾಡಬಹುದು.ಐಟಿ, ಬಿಟಿ ಸೇರಿದಂತೆ ಎಲ್ಲಾ ಇಲಾಖೆಗಳನ್ನೂ ರಾಜ್ಯೋತ್ಸವ ಸಂಭ್ರಮದಲ್ಲಿ ಸೇರಿಸಿ ಕೊಳ್ಳಲಾಗುವುದು. ಈ ಸಂಬಂಧ ಸಭೆಗಳನ್ನು ನಡೆಸಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ‘ನನ್ನ ನಾಡು ನನ್ನ ಹಾಡು’ ಪೋಸ್ಟರ್ ಅನ್ನು ಸಚಿವರು ಬಿಡುಗಡೆ ಮಾಡಿದರು. ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ, ಶಾಸಕ ರಾಜಕುಮಾರ ಪಾಟೀಲ್,ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಮಂಜುಳಾ, ಬೆಂಗಳೂರು ನಗರ ವಿವಿ ಕುಲಪತಿ ಪ್ರೊ ಲಿಂಗರಾಜ ಗಾಂಧಿ, ಬೆಂಗಳೂರು ಉತ್ತರ ವಿವಿ ಕುಲಪತಿ ಪ್ರೊ ನಿರಂಜನ, ನೃಪತುಂಗ ವಿವಿ ಕುಲಪತಿ ಪ್ರೊ ಶ್ರೀನಿವಾಸ ಬಳ್ಳಿ, ಮಹಾರಾಣಿ ವಿವಿ ಕುಲಪತಿ ಸೇರಿದಂತೆ ಇತರ ಅಧಿಕಾರಿಗಳು ಈ ಸಭೆಯಲ್ಲಿ ಹಾಜರಿದ್ದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.