![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Aug 30, 2019, 3:00 AM IST
ಬೆಂಗಳೂರು: ವಾರ್ಷಿಕವಾಗಿ 25 ಮಹನೀಯರ ಜಯಂತಿ ಆಚರಣೆಗಾಗಿಯೇ ಇಲಾಖೆಯ ಸಂಪೂರ್ಣ ಶ್ರಮ ಹೋಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹನೀಯರ ಜಯಂತಿಗಳನ್ನು ಕೆಲವೊಂದು ಇಲಾಖೆಯೇ ಮಾಡುತ್ತಿದೆ. ಮತ್ತೆ ಕೆಲವು ಸಾರ್ವಜನಿಕರು, ಸಂಘ-ಸಂಸ್ಥೆಗಳ ಜತೆಗೂಡಿ ಮಾಡಲಾಗುತ್ತಿದೆ. ಆದರೆ, ಇಲಾಖೆಯ ಶ್ರಮ ಇದಕ್ಕೇ ಹೋಗುತ್ತಿದೆ. ಹೀಗಾಗಿ, ವಿಭಿನ್ನವಾಗಿ ಜಯಂತಿಗಳ ಆಚರಣೆ ಬಗ್ಗೆ ಚಿಂತನೆ ನಡೆಯಬೇಕಿದೆ ಎಂದರು.
ಮಹನೀಯರ ಜಯಂತಿ ಬೇಡ ಎಂದರೆ ಅದಕ್ಕೆ ಜಾತಿ ಅಥವಾ ರಾಜಕೀಯ ಬಣ್ಣ ಕಟ್ಟಲಾಗುತ್ತದೆ. ಆದರೆ, ದಾರ್ಶನಿಕರು ಯಾರೂ ತಮ್ಮ ಜಯಂತಿ ಆಚರಣೆ ಅದ್ಧೂರಿಯಾಗಿ ಮಾಡಬೇಕೆಂದು ಬಯಸಿರಲಿಲ್ಲ. ಈ ನಿಟ್ಟಿನಲ್ಲಿ ಸಮುದಾಯದ ನಾಯಕರು, ರಾಜಕೀಯ ಪಕ್ಷಗಳ ಜತೆ ಚರ್ಚಿಸಿ ಸರ್ವಸಮ್ಮತ ಸೂತ್ರ ಕಂಡುಹಿಡಿಯಲಾಗುವುದು ಎಂದು ಹೇಳಿದರು.
ಮಾಸಾಶನ: ಕಲಾವಿದರಿಗೆ ಮಾಸಾಶನ ಯಾವುದೇ ಕಾರಣಕ್ಕೂ ತಡೆಹಿಡಿಯುವುದಿಲ್ಲ. ಆದರೆ, ಸಂಘ-ಸಂಸ್ಥೆಗಳಿಗೆ ನೀಡುವ ಅನುದಾನದಲ್ಲಿ ತಾರತಮ್ಯದ ಆರೋಪ ಹಿನ್ನೆಲೆಯಲ್ಲಿ ನಿಲ್ಲಿಸಲಾಗಿದೆ. ಆ ಬಗ್ಗೆ ಸಮಗ್ರ ವರದಿ ನೀಡುವಂತೆಯೂ ಸೂಚಿಸಲಾಗಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಪ್ರವಾಸೋದ್ಯಮ ಇಲಾಖೆ ವತಿಯಿಂದ ಜಾರಿಗೊಳಿಸಿದ್ದ ಗೋಲ್ಡನ್ ಚಾರಿಯೇಟ್ನಿಂದ ಇಲಾಖೆಗೆ 41 ಕೋಟಿ ರೂ. ನಷ್ಟವಾಗಿದೆ. ಅದಕ್ಕಾಗಿ ಅದನ್ನು ಸ್ಥಗಿತಗೊಳಿಸಲಾಗಿದೆ. ಯಾತ್ರಿ ನಿವಾಸಗಳ ಬಗ್ಗೆಯೂ ಅಧ್ಯಯನ ವರದಿ ಕೇಳಿದ್ದೇನೆಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.