ನಿಯಮ ವ್ಯಾಪ್ತಿಗೆ ಚೌತಿ, ಮೊಹರಂ: ರಾಜ್ಯ ಸರಕಾರದಿಂದ ಹೊಸ ಮಾರ್ಗ ಸೂಚಿ


Team Udayavani, Aug 13, 2021, 6:20 AM IST

ನಿಯಮ ವ್ಯಾಪ್ತಿಗೆ ಚೌತಿ, ಮೊಹರಂ: ರಾಜ್ಯ ಸರಕಾರದಿಂದ ಹೊಸ ಮಾರ್ಗ ಸೂಚಿ

ಬೆಂಗಳೂರು: ರಾಜ್ಯದ ಕೇರಳ ಮತ್ತು ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಣೇಶ ಚತುರ್ಥಿ ಮತ್ತು ಮೊಹರಂ ಆಚರಣೆಗೆ ಸರಕಾರ ಕೆಲವು ನಿರ್ಬಂಧ ಹೇರಿದೆ. ಈ ಸಂಬಂಧ ಮಾರ್ಗಸೂಚಿ ಹೊರಡಿಸಿರುವ ಅದು, ಸಾರ್ವಜನಿಕವಾಗಿ ಗೌರಿ-ಗಣೇಶ ಪ್ರತಿಷ್ಠಾಪನೆ, ಆಲಂ/ ಪಂಜಾ ಸ್ಥಾಪಿಸುವು ದನ್ನು ನಿರ್ಬಂಧಿಸುವುದರ ಜತೆಗೆ ಮೆರವಣಿಗೆ ಮತ್ತು ಮನೋರಂಜನ ಕಾರ್ಯ ಕ್ರಮಗಳನ್ನೂ ನಿಷೇಧಿಸಿ ಆದೇಶ ಹೊರಡಿಸಿದೆ.

ಗೌರಿ-ಗಣೇಶ ಹಬ್ಬಕ್ಕೆ ನಿರ್ಬಂಧಗಳು :

  • ದೇವಸ್ಥಾನದ ಒಳಗೆ ಮತ್ತು ಮನೆಗಳಲ್ಲಿ ಮಾತ್ರ ಹಬ್ಬ ಆಚರಣೆ.
  • ಸಾರ್ವಜನಿಕವಾಗಿ ಚಪ್ಪರ, ಪೆಂಡಾಲ್‌, ಶಾಮಿಯಾನ ವೇದಿಕೆಗಳಲ್ಲಿ ವಿಗ್ರಹ ಪ್ರತಿಷ್ಠಾಪನೆ ಮಾಡುವಂತಿಲ್ಲ.
  • ಗೌರಿ-ಗಣೇಶ ಮೂರ್ತಿಗಳನ್ನು ತರುವಾಗ ಮತ್ತು ವಿಸರ್ಜಿಸುವಾಗ ಮೆರವಣಿಗೆ/ಮನೋರಂಜನೆ ನಿಷೇಧ.
  • ಅತೀ ಸಮೀಪದ ಮಾರ್ಗ ಬಳಸಿ ಹೊಂಡ, ಕಲ್ಯಾಣಿ, ಮೊಬೈಲ್‌ ಟ್ಯಾಂಕ್‌, ಕೃತಕ ವಿಸರ್ಜನ ಟ್ಯಾಂಕ್‌ ಬಳಸಿಕೊಳ್ಳಬಹುದು.
  • ದೇವಸ್ಥಾನಗಳಲ್ಲಿ ನಿತ್ಯ ಸ್ಯಾನಿಟೈಸೇಶನ್‌.
  • ಭಕ್ತರಿಗೆ ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ಯಾನಿಂಗ್‌.
  •  ಉತ್ಸವ ಆಚರಣೆ ಮಾಡುವ ಸಂಘಟನೆಗಳು ಸ್ಥಳೀಯ ಆಡಳಿತ ಸಂಸ್ಥೆಗಳ ನಿಯಮ ಪಾಲನೆ ಮಾಡಬೇಕು.

ಮೊಹರಂಗೆ ನಿರ್ಬಂಧಗಳು :

  • ಸಾರ್ವಜನಿಕ ಸ್ಥಳಗಳಲ್ಲಿ ಆಲಂ, ಪಂಚಾ ಸ್ಥಾಪನೆ ಮತ್ತು ತಾಜಿಯಾಕ್ಕೆ ನಿರ್ಬಂಧ.
  • ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಗುರುವಾರದಿಂದ ಆ. 20ರವರೆಗೆ ಮೊಹರಂ ಪ್ರಾರ್ಥನ ಸಭೆ-ಮೆರವಣಿಗೆ ನಿಷೇಧ.
  • ಮಸೀದಿಯಲ್ಲಿ ಮಾತ್ರ ಪ್ರಾರ್ಥನೆಗೆ ಅವಕಾಶ. ಎರಡು ಅಥವಾ ಹೆಚ್ಚಿನ ಪಾಳಿಯಲ್ಲಿ ಪ್ರಾರ್ಥನೆ ನಡೆಸತಕ್ಕದ್ದು.
  • ಮಸೀದಿ ಪ್ರವೇಶಿಸುವಾಗ ಎಲ್ಲರ ದೇಹದ ತಪಾಸಣೆ ಮತ್ತು ಸ್ಯಾನಿಟೈಸರ್‌, ಮಾಸ್ಕ್ ಕಡ್ಡಾಯ.
  • ಪ್ರಾರ್ಥನೆಯಲ್ಲಿ ಭಾಗವಹಿಸುವವರು ಮನೆಗಳಿಂದಲೇ ಮುಸಲ್ಲಾ (ಜಾಯನಮಾಜ್‌) ತರಬೇಕು.
  • ಪರಸ್ಪರ ಹಸ್ತಲಾಘವ ಮತ್ತು ಆಲಿಂಗನ ಮಾಡುವಂತಿಲ್ಲ.
  • 60 ವರ್ಷ ಮೇಲ್ಪಟ್ಟ ಹಾಗೂ 10 ವರ್ಷದ ಒಳಗಿನವರು ಮನೆಯಲ್ಲಿಯೇ ಪ್ರಾರ್ಥನೆ ಮಾಡಬೇಕು.

ಪ್ರವಾಸಿ ಸ್ಥಳಗಳಲ್ಲಿ ಕಟ್ಟೆಚ್ಚರ :

  1. ರಜೆ ಸಿಕ್ಕಿತೆಂದು ಸದ್ಯಕ್ಕೆ ದೂರದ ಊರಿಗೆ ಪ್ರಯಾಣ ಬೇಡ.
  2. ಶ್ರಾವಣದ ಹಬ್ಬಗಳನ್ನು ಮನೆಯಲ್ಲಿಯೇ ಆಚರಿಸಿ.
  3. ಕೊಪ್ಪಳದಲ್ಲಿ 17ರ ವರೆಗೆ ನಿಷೇಧಾಜ್ಞೆ.
  4. ತುಮಕೂರಿನಲ್ಲಿ ಶ್ರಾವಣ ಮಾಸದ ವಿಶೇಷ ದಿನ ಮತ್ತು ರಜಾದಿನಗಳಂದು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ.
  5.  ವಿವಿಧ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ನಿಯಮಗಳೊಂದಿಗೆ ಪ್ರವಾಸಿಗರಿಗೆ ಅನುಮತಿ. ಮಾರ್ಗಸೂಚಿ ಪಾಲನೆ ಕಡ್ಡಾಯ.

ಎರಡನೇ ಅಲೆ ತಗ್ಗಿ, ಮೂರನೇ ಅಲೆ ಆರಂಭ ಸಮಯ. ನಿರ್ಲಕ್ಷಿಸಿ ದರೆ ಮತ್ತೂಂದು ದೊಡ್ಡ ಹೊಡೆತ ಬೀಳುತ್ತದೆ. ಲಸಿಕೆ ಪಡೆದಿದ್ದರೆ ಮತ್ತೆ ಕಾಯಿಲೆ ಬರುವುದಿಲ್ಲ ಎಂದಿಲ್ಲ. ಹೆಚ್ಚು ಹಾನಿಯಾಗುವುದಿಲ್ಲ. ಇಂದಿಗೂ ಸಾಕಷ್ಟು ಮಂದಿ ಲಸಿಕೆ ಪಡೆಯದವರಿದ್ದು, ಅವರಿಗೆ ನಮ್ಮ ನಿರ್ಲಕ್ಷ್ಯದಿಂದ ಸೋಂಕು ತಗುಲುವ ಸಾಧ್ಯತೆ ಇರುತ್ತದೆ. ಪೂರ್ಣ ಪ್ರಮಾಣ ಲಸಿಕೆಯಾಗಿ, ರೂಪಾಂತರ ಹಾವಳಿ ನಿಲ್ಲುವವರೆಗೂ ಮುಂಜಾಗ್ರತೆ ಕ್ರಮ ಕಡ್ಡಾಯ.ಡಾ| ಸುದರ್ಶನ್‌ ಬಲ್ಲಾಳ್‌, ಅಧ್ಯಕ್ಷರು, ಮಣಿಪಾಲ್‌ ಆಸ್ಪತ್ರೆ

ಟಾಪ್ ನ್ಯೂಸ್

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

IFFI: ನವೆಂಬರ್ 20 ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ

IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವ ವಿಶ್ವಾಸವಿದೆ ಇಲ್ಲದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

ನನ್ನಂತ ದಲಿತರಿಗೆ ಒಳ್ಳೆಯದಾಗದಿದ್ದರೆ ಮುಂದೆ ಯಾವ ದಲಿತರಿಗೂ ಒಳ್ಳೆದಾಗಲ್ಲ: ಜಿಗಜಿಣಗಿ ಭಾವುಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.