ಸ್ಟಾರ್ಟ್‌ಅಪ್‌ಗೆ ಉತ್ತೇಜನ ರಾಜ್ಯಕ್ಕೆ ಅಗ್ರಸ್ಥಾನ

ಕೇಂದ್ರ ಸರಕಾರದ ಡಿಪಿಐಐಟಿ ರ್‍ಯಾಂಕ್‌ ಪಟ್ಟಿ ಬಿಡುಗಡೆ

Team Udayavani, Jul 5, 2022, 6:45 AM IST

ಸ್ಟಾರ್ಟ್‌ಅಪ್‌ಗೆ ಉತ್ತೇಜನ ರಾಜ್ಯಕ್ಕೆ ಅಗ್ರಸ್ಥಾನ

ಬೆಂಗಳೂರು: ಸ್ಟಾರ್ಟ್‌ಅಪ್‌ಗಳಿಗೆ ಪ್ರೋತ್ಸಾಹದಾಯಕ ವಾತಾವರಣ ಕಲ್ಪಿಸುವಲ್ಲಿ ಕರ್ನಾಟಕ ಮತ್ತು ಗುಜರಾತ್‌ಗೆ ಅಗ್ರ ಸ್ಥಾನ ಸಿಕ್ಕಿದೆ.

ಕೇಂದ್ರ ಸರಕಾರದ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ವಿಭಾಗ (ಡಿಪಿಐಐಟಿ) ಸತತ ಮೂರನೇ ವರ್ಷ ಪ್ರಕಟಿಸುವ ರ್‍ಯಾಂಕಿಂಗ್‌ ಪಟ್ಟಿಯನ್ನು ಕೇಂದ್ರ ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಬಿಡುಗಡೆ ಮಾಡಿದ್ದಾರೆ.

ಸಣ್ಣ ರಾಜ್ಯಗಳ ಪಟ್ಟಿಯಲ್ಲಿ ಮೇಘಾಲಯ ಉತ್ತಮ ಸಾಧಕ ರಾಜ್ಯ ಎಂಬ ಗರಿಮೆಗೆ ಭಾಜನವಾಗಿದೆ.

ಸತತ ಮೂರನೇ ಬಾರಿಗೆ ಗುಜರಾತ್‌ಗೆ ಅಗ್ರ ಸ್ಥಾನ ಸಿಕ್ಕಿದೆ. ಕರ್ನಾಟಕದಲ್ಲಿ ರಾಜ್ಯ ಸರಕಾರ ಸ್ಟಾರ್ಟ್‌ಅಪ್‌ಗಳ ಉತ್ತೇಜನಕ್ಕಾಗಿ 12 ಕಾರ್ಯಕ್ರಮಗಳನ್ನು ಆಯೋಜನೆ ಮಾಡಿತ್ತು. ಅದರಲ್ಲಿ ಸರಕಾರದ ಹತ್ತು ಇಲಾಖೆಗಳು ಮತ್ತು ಇಪ್ಪತ್ತು ಸ್ಟಾರ್ಟ್‌ಅಪ್‌ಗಳು ಭಾಗವಹಿಸಿದ್ದವು.

ಅತ್ಯುತ್ತಮ ಸಾಧಕರು, ಉತ್ತಮ ಸಾಧಕರು, ನಾಯಕರು, ಮಹತ್ವಾಕಾಂಕ್ಷೆಯ ನಾಯಕರು ಮತ್ತು ಹೊಸ ಸ್ಟಾರ್ಟ್‌ಅಪ್‌ ವ್ಯವಸ್ಥೆಗಳು ಎಂಬ ಐದು ವರ್ಗೀಕರಣದ ವ್ಯಾಪ್ತಿಯಲ್ಲಿ ರಾಜ್ಯಗಳನ್ನು ಆಯ್ಕೆ ಮಾಡಲಾಗಿದೆ. ಒಟ್ಟು 26 ಕಾರ್ಯ ಯೋಜನೆಗಳ ಅನ್ವಯ ಸ್ಟಾರ್ಟ್‌ಅಪ್‌ ಕ್ಷೇತ್ರದಲ್ಲಿ ರಾಜ್ಯಗಳು ಸಾಧನೆಯನ್ನು ಪರಿಶೀಲಿಸಲಾಗಿದೆ.

ದೇಶದಲ್ಲಿ 70,809 ಸ್ಟಾರ್ಟ್‌ಅಪ್‌ ಗಳಿವೆ ಎಂದು ಕೇಂದ್ರ ಕೈಗಾರಿಕೆ ಮತ್ತು ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಹೇಳಿದ್ದಾರೆ. ಕೇರಳ, ಮಹಾರಾಷ್ಟ್ರ, ಒಡಿಶಾ, ತೆಲಂಗಾಣ ಮತ್ತು ಜಮ್ಮು ಮತ್ತು ಕಾಶ್ಮೀರಗಳನ್ನು ಅತ್ಯುತ್ತಮ ಸಾಧಕ ರಾಜ್ಯಗಳ ಸಾಲಿಗೆ ಸೇರಿಸಲಾಗಿದೆ.

ಸ್ಟಾರ್ಟ್‌ಅಪ್‌ ಕ್ಷೇತ್ರಗಳಿಗೆ ರಾಜ್ಯ ಸರಕಾರ ನೆರವು ನೀಡಿದೆ. ಅದನ್ನು ಹಲವರು ಸದುಪಯೋಗಿಸಿಕೊಂಡಿದ್ದಾರೆ. ಎಲೆಕ್ಟ್ರಾನಿಕ್ಸ್‌ ವ್ಯವಸ್ಥೆ ವಿನ್ಯಾಸ ಮತ್ತು ಉತ್ಪಾದನ ಕ್ಷೇತ್ರಗಳಿಗೆ ಸಂಬಂಧಿಸಿ ವಿಶೇಷ ಪ್ರೋತ್ಸಾಹ ನೀಡಲಿದೆ.
ಡಾ| ಸಿ.ಎನ್‌.ಅಶ್ವತ್ಥ ನಾರಾಯಣ, ಎಲೆಕ್ಟ್ರಾನಿಕ್ಸ್‌ ಮತ್ತು ಐ.ಟಿ. ಸಚಿವ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.