ಉಪಚುನಾವಣೆ: ಹಣ,ಹೆಂಡ ಹಂಚಿಕೆ ತಡೆಗೆ ಬಿಜೆಪಿಯಿಂದ ತಂಡಗಳ ರಚನೆ!
Team Udayavani, Apr 7, 2017, 11:40 AM IST
ಗುಂಡ್ಲುಪೇಟೆ /ನಂಜನಗೂಡು: ಎಪ್ರಿಲ್ 9 ರಂದು ನಡೆಯಲಿರುವ ಉಪಚುನಾವಣೆಯ ಕೊನೆ ಗಳಿಗೆಯಲ್ಲಿ ನಡೆಯುವ ಅಕ್ರಮಗಳನ್ನು ತಡೆಯಲು ಬಿಜೆಪಿ ಪ್ರತೀ ಬೂತ್ಗಳ ಮಟ್ಟದಲ್ಲಿ ಕಾರ್ಯಕರ್ತರ ತಂಡಗಳನ್ನು ರಚಿಸಿದೆ.
ಕಾಂಗ್ರೆಸ್ ವ್ಯಾಪಕವಾಗಿ ಹಣ, ಹೆಂಡ ಹಂಚಲು ಮುಂದಾಗಿದೆ ಎಂದಿರುವ ಬಿಜೆಪಿ ಅಕ್ರಮಗಳನ್ನು ತಡೆಯಲು ಯುವ ಮೋರ್ಚಾ ಮತ್ತು ಮಹಿಳಾ ಮೋರ್ಚಾ ಕಾರ್ಯಕರ್ತರ ತಂಡಗಳನ್ನು ರಚಿಸಿರುವುದಾಗಿ ಹೇಳಿದೆ.
ಗುರುವಾರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್ ಅವರು ಗುಂಡ್ಲುಪೇಟೆಯ ಮನೆಯೊಂದರಲ್ಲಿ ಹಣ ಹಂಚಿಕೆ ಮಾಡಿದ್ದಾರೆನ್ನಲಾದ ವಿಡಿಯೋ ಇದೀಗ ವೈರಲ್ ಆಗಿ ಸುದ್ದಿಯಾಗಿದೆ. ಈ ಬಗ್ಗೆ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದರೆ, ಕಾಂಗ್ರೆಸ್ನವರು ನಾವು ಹಣ ಹಂಚಿಕೆ ಮಾಡಿಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ.
ಬಹಿರಂಗ ಪ್ರಚಾರಕ್ಕೆ ಶುಕ್ರವಾರ ತೆರೆ ಬೀಳಲಿದ್ದು ಅದಕ್ಕೆ ಮುನ್ನ ಎರಡೂ ಕ್ಷೇತ್ರಗಳಲ್ಲಿ ಹಣ, ಮದ್ಯ, ಉಡುಗೊರೆ ಹಂಚಿಕೆಯದ್ದೇ ಕಾರುಬಾರು ಆಗಿದ್ದು ಎರಡೂ ಪಕ್ಷಗಳು ಆರೋಪ ಪ್ರತ್ಯಾರೋಪಗಳಲ್ಲಿ ನಿರತವಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.