ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ….: ಸಿಎಂ ಬೊಮ್ಮಾಯಿಗೆ ಸವಾಲೆಸೆದ ಕುಮಾರಸ್ವಾಮಿ
Team Udayavani, Sep 2, 2022, 5:38 PM IST
ಬೆಂಗಳೂರು: ಭೂಗಳ್ಳರಿಗೆ ನನ್ನಿಂದ ಸಹಾಯವಾಗಿದೆ ಎಂದು ತೋರಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನೇರ ಸವಾಲು ಹಾಕಿದ್ದಾರೆ.
ಬೆಂಗಳೂರಿನಲ್ಲಿ ಯಾರು ಯಾರು ಕೆರೆ, ರಾಜಕಾಲುವೆ ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಶ್ವೇತಪತ್ರ ಹೊರಡಿಸಿ ಎಂದು ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದ್ದಾರೆ.
ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬಗ್ಗೆ ಸಿಎಂ ಏನು ಬೇಕಾದರೂ ಮಾತನಾಡಲಿ, ನನ್ನ ಬಗ್ಗೆ ಮಾತನಾಡುವಾಗ ನೋಡಿಕೊಂಡು ಮಾತನಾಡಲಿ. ಎಚ್ಚರಿಕೆಯಿಂದ ಮಾತನಾಡಿದರೆ ಉತ್ತಮ ಎಂದು ಅವರು ಗರಂ ಆದರು.
ಪೆರಿಫೆರಲ್ ರಿಂಗ್ ರೋಡ್ ಗೆ ಆರು ಸಾವಿರ ಕೋಟಿ ರೂ. ಯೋಜನೆ ರೂಪಿಸಿದ್ದೆ. ಇಂದು 22 ಸಾವಿರ ಕೋಟಿ ರೂ. ಆಗಿದೆ. ಇದು ಕಾಂಗ್ರೆಸ್, ಬಿಜೆಪಿಯ ಸಾಧನೆ. ಅಂದಾಜು ವೆಚ್ಚ ಹೆಚ್ಚಿಸುತ್ತಾ ಹೋಗುವುದೇ ಇವರ ಸಾಧನೆ ಎಂದು ಅವರು ವಾಗ್ದಾಳಿ ನಡೆಸಿದರು.
ರಾಜಕಾಲುವೆ ಅಭಿವೃದ್ಧಿಗೆ ಸಾವಿರಾರು ಕೋಟಿ ರೂ. ಬಿಡುಗಡೆ ಮಾಡಿದ್ದೇನೆಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಹಾಗಾದರೆ ಅ ಹಣ ಯಾರ ಮನೆಗೆ ಹೋಯಿತು? ಧೈರ್ಯ ಇದ್ದರೆ ಒತ್ತುವರಿ ಮಾಡಿಕೊಂಡವರ ಹೆಸರುಗಳನ್ನು ಬಹಿರಂಗ ಮಾಡಲಿ. ಬೆಂಗಳೂರಿನಲ್ಲಿ ಕೆರೆ, ರಾಜಕಾಲುವೆ ಒತ್ತುವರಿದಾರರು ಯಾರು ಎನ್ನುವುದು ಜನರಿಗೂ ಗೊತ್ತಾಗಲಿ ಎಂದು ಪ್ರಶ್ನಿಸಿದರು.
ಇದನ್ನೂ ಓದಿ:ಬಿಎಸ್ ವೈ ಪರ ಜಯಘೋಷ: ಪಿಎಂ ಮೋದಿ ಎದುರು ‘ಪವರ್’ ತೋರಿದ ಮಾಜಿ ಸಿಎಂ ಯಡಿಯೂರಪ್ಪ
ಬಿಬಿಎಂಪಿ ಬಿಜೆಪಿ ಕೈಯಲ್ಲೇ ಇತ್ತು. ಅವರು ಏನೆಲ್ಲ ಮಾಡಿದ್ದರು ಎನ್ನುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ದಾಖಲೆಗಳಿದ್ದ ಬಿಬಿಎಂಪಿ ಕಚೇರಿಗೆ ಬೆಂಕಿ ಹಾಕಿದ್ದು ಇವರ ಸಾಧನೆ ಅಷ್ಟೇ. ನನ್ನ ಎರಡು ಅವಧಿಯಲ್ಲಿ ಅಕ್ರಮಕ್ಕೆ ಪೋಷಣೆ ಮಾಡಿರುವ ದಾಖಲಾತಿ ಬಿಡುಗಡೆ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿಗಳು ಸವಾಲು ಹಾಕಿದರು.
ಸರ್ಕಾರಿ ಜಮೀನು ಲೂಟಿ ಹೊಡೆಯುವ ಬಗ್ಗೆ ಸದನ ಸಮಿತಿ ಮಾಡಿದ್ದೆ. ಯಾರ ಕಾಲದಲ್ಲಿ ಏನಾಗಿದೆಯೆಂದು ಮುಖ್ಯಮಂತ್ರಿಗಳು ಶ್ವೇತ ಪತ್ರ ಹೊರಡಿಸಲಿ ಎಂದು ಒತ್ತಾಯಿಸಿದರು.
ಕೆಂಪೇಗೌಡರ ಹೆಸರಿನಲ್ಲಿ ಬಿಜೆಪಿ ಪ್ರಚಾರ: ಈಗೇನೋ ಕೆಂಪೇಗೌಡ ಏರ್ ಫೊರ್ಟ್ ನಲ್ಲಿ ಮಣ್ಣು ಸಂಗ್ರಹ ಮಾಡಿ ಥೀಮ್ ಪಾರ್ಕ್ ಮಾಡುತ್ತೇನೆ ಅಂತಿದ್ದಾರೆ. ಸೀಮಾಂಧ್ರದ ರಾಜಧಾನಿ ಅಮರಾವತಿ ಕಟ್ಟಲು ಮಣ್ಣು ತಂದಿದ್ದರು ಮೋದಿ. ಏನು ಆಯ್ತು ಆ ಮಣ್ಣು? ಈಗ ರಾಜ್ಯದಲ್ಲಿ ಮಣ್ಣಿನ ಸಂಗ್ರಹ ಮಾಡುತ್ತಾರಂತೆ. ಮೊದಲು ಮಳೆಯಿಂದ ಆಗಿರುವ ಸಮಸ್ಯೆಯ ಜನರಿಗೆ, ರೈತರಿಗೆ ಅನುಕೂಲ ಮಾಡಿಕೊಡ್ರಪ್ಪ ಎಂದು ವ್ಯಂಗ್ಯವಾಡಿದ ಎಚ್ ಡಿಕೆ, ಇವರದ್ದೆಲ್ಲ ಕೇವಲ ಪ್ರಚಾರ ಅಷ್ಟೆ. ಕಳೆದ ಬಾರಿ ಸಿಎಂ ಪ್ರದಕ್ಷಿಣೆ ಹಾಕಿದ್ದರು. ಸಮಸ್ಯೆ ಪರಿಹಾರ ಆಗಿಲ್ಲ. ಇದಕ್ಕಿಂತ ಉದಾಹರಣೆ ಬೇಕಾ? ಎಂದು ಸಿಎಂ ವಿರುದ್ದ ಕಿಡಿಕಾರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tirupati Case; ಮತಾಂತರಗೊಂಡ ಜಗನ್ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ
Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ
Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ
Karnataka HC: ಪಾಕಿಸ್ತಾನ ಹೇಳಿಕೆ ನೀಡಿದ ಹೈಕೋರ್ಟ್ ಜಡ್ಜ್ ಗೆ ಸುಪ್ರೀಂ ಕೋರ್ಟ್ ತರಾಟೆ
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.