ರಾಷ್ಟ್ರೀಯ ಪಕ್ಷಗಳೆರಡೂ ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿಯಿಟ್ಟು ವಿಕೃತ ಕೇಕೆ ಹಾಕುತ್ತಿವೆ

ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸರಣಿ ಟ್ವೀಟ್

Team Udayavani, Feb 23, 2022, 11:42 AM IST

ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸರಣಿ ಟ್ವೀಟ್

ಬೆಂಗಳೂರು: ರಾಜ್ಯದಲ್ಲಿ ಶಾಂತಿ-ಭದ್ರತೆಗೆ ಅಪಾಯ ಎದುರಾಗಿದೆ. ಅಭಿವೃದ್ಧಿ, ಆವಿಷ್ಕಾರ, ಸೃಜನಶೀಲ, ವಿಜ್ಞಾನ-ತಂತ್ರಜ್ಞಾನಕ್ಕೆ ಹೆಸರಾದ ಕರ್ನಾಟಕ ಈಗ ವಿರುದ್ಧ ದಿಕ್ಕಿನಲ್ಲಿ ಜಗತ್ತಿನ ಗಮನ ಸೆಳೆದು ಕೃತಾರ್ಥವಾಗುತ್ತಿದೆ. ರಾಷ್ಟ್ರೀಯ ಪಕ್ಷಗಳೆರಡೂ ಕರ್ನಾಟಕದ ಪ್ರತಿಷ್ಠೆಗೆ ಕೊಳ್ಳಿಯಿಟ್ಟು ʼವಿಕೃತ ಕೇಕೆʼ ಹಾಕುತ್ತಿವೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ಶಿಕ್ಷಣದ ಕಾಶಿ ಕರ್ನಾಟಕದ ಶಾಲೆ-ಕಾಲೇಜುಗಳಲ್ಲಿ ಸಂಘರ್ಷದ ವಾತಾವರಣ ಸೃಷ್ಟಿಸಿ ಮಕ್ಕಳಲ್ಲಿ ದ್ವೇಷದ ವಿಷವುಕ್ಕಿಸಲಾಗುತ್ತಿದೆ. ಎರಡು ವರ್ಷದಿಂದ ಕೋವಿಡ್‌ ಹೊಡೆತದಿಂದ ಮಲಗಿರುವ ವಿದ್ಯಾರಂಗವನ್ನು ಸರ್ವನಾಶ ಮಾಡುವ ಹುನ್ನಾರವಷ್ಟೇ ಇದು. ಬಡವರ ಮಕ್ಕಳು ಓದಿ ವಿದ್ಯಾವಂತರಾಗಬಾರದೇ? ಎರಡೂ ರಾಷ್ಟ್ರೀಯ ಪಕ್ಷಗಳು ರಾಜ್ಯಾದ್ಯಂತ ʼರಾಜಕೀಯ ಕೊರೊನಾʼವನ್ನು ಹಬ್ಬಿಸುತ್ತಿವೆ. ಆ ಮೂಲಕ ಜನರ ಮನಸ್ಸುಗಳನ್ನು ಹಾಳು ಮಾಡುತ್ತಿವೆ. ಈ ಮಹಾಮಾರಿಗೆ ಲಸಿಕೆ ಇಲ್ಲ. ಜನರು ಈ ಹುನ್ನಾರವನ್ನು ಅರ್ಥ ಮಾಡಿಕೊಂಡರೆ ಒಳ್ಳೆಯದು ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಅಧಿಕೃತ ಪ್ರತಿಪಕ್ಷದ ಸ್ವಪ್ರತಿಷ್ಠೆ, ಆಡಳಿತ ಪಕ್ಷದ ಅಸಮರ್ಥತೆಗೆ ವಿಧಾನ ಕಲಾಪ ಆಪೋಶನವಾಯಿತು. ʼನಾನು ಹೊಡೆದಂಗೆ ಮಾಡುತ್ತೇನೆ, ನೀನು ಅತ್ತಂಗೆ ಮಾಡುʼ ಎನ್ನುವಂತೆ ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಕುಮ್ಮಕ್ಕಾಗಿ ʼಕಲಾಪಕ್ಕೆ ಕುಣಿಕೆʼ ಬಿಗಿದು ಜನರ ಆಶೋತ್ತರಗಳನ್ನು ಸದನದಲ್ಲೇ ಸಮಾಧಿ ಮಾಡಿದವು. ನಿಗದಿತ ವೇಳಾಪಟ್ಟಿಗಿಂತ ಮೂರು ದಿನ ಮೊದಲೇ ಮುಗಿದ ಅಧಿವೇಶನದಲ್ಲಿ ಆರೂವರೆ ಕೋಟಿ ಕನ್ನಡಿಗರಿಗೆ ಸೊನ್ನೆ ಸುತ್ತಲಾಗಿದೆ. ಜನಪ್ರತಿನಿಧಿಗಳ ಕೇವಲ ಟಿಎ-ಡಿಎಗಾಗಿ ಮತ್ತು ವೇತನ, ಭತ್ಯೆ ಏರಿಸಿಕೊಳ್ಳಲಷ್ಟೇ ಅಧಿವೇಶನ ನಡೆದಿದೆ. ಜನರು ಏನೆಂದುಕೊಂಡಾರು? ಎಂಬ ಕನಿಷ್ಠ ಭಯವೂ ಇಲ್ಲದ ʼಆತ್ಮವಂಚನೆಯ ಪರಾಕಾಷ್ಠೆʼ ಇದು ಎಂದು ಟೀಕೆ ಮಾಡಿದ್ದಾರೆ.

ಇದನ್ನೂ ಓದಿ:ನಾಗಮಂಗಲ: ಚಲುವರಾಯಸ್ವಾಮಿ ಆಪ್ತ ಉದ್ಯಮಿ ಮನೆ- ಕಚೇರಿ ಮೇಲೆ ಐಟಿ ದಾಳಿ

ಹಿಜಾಬ್, ಕೇಸರಿ ಶಾಲು ಮತ್ತು ಶಿವಮೊಗ್ಗದಲ್ಲಿ ನಡೆದ ಯುವಕನ ಕೊಲೆ. ಇವೆಲ್ಲಾ ಯಾರಿಂದ ಯಾರಿಗಾಗಿ ನಡೆಯುತ್ತಿವೆ? ಈ ʼಟೂಲ್ʼಕಿಟ್ʼ ರೂವಾರಿಗಳು ಯಾರು? ಅಧಿವೇಶನವನ್ನು ಹಳ್ಳ ಹಿಡಿಸಿದ್ದಕ್ಕೂ ಈ ಎಲ್ಲಾ ಪ್ರತಿಗಾಮಿ ಘಟನೆಗಳಿಗೆ ಸಂಬಂಧ ಇದೆ ಎನ್ನುವ ಅನುಮಾನ ನನ್ನದು. ಸತ್ಯವೇನೆಂಬುದು ಜನರಿಗೆ ಗೊತ್ತಾಗಬೇಕು. ಸಾವಿನ ಮನೆಯಲ್ಲಿ ಮತಫಸಲು ತೆಗೆಯುವ ನಿರ್ಲಜ್ಜ ನಡೆ ಅಸಹನೀಯ. ಶಾಂತಿಯನ್ನು ಕದಡಿದ ಪಾಪ ಸುಮ್ಮನೆ ಬಿಡುವುದಿಲ್ಲ. ಹಚ್ಚಹಸರಿನ ನಿರ್ಮಲ ಮಲೆನಾಡಿನಲ್ಲಿ ಹೊತ್ತಿ ಉರಿಯುತ್ತಿರುವ ʼದ್ವೇಷದಳ್ಳುರಿʼ ಇಡೀ ರಾಜ್ಯಕ್ಕೇ ಶಾಪವಾಗಿ ಪರಿಣಮಿಸಲಿದೆ ಎಂದು ಎಚ್ ಡಿಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯಪಾಲರು ತಕ್ಷಣ ಮಧ್ಯಪ್ರವೇಶ ಮಾಡಬೇಕು. ಅವರು ಯಾರ ಕೈಗೊಂಬೆಯೂ ಆಗಬಾರದು ಎಂದು ನಾನು ಮತ್ತೊಮ್ಮೆ ಆಗ್ರಹಿಸುತ್ತಿದ್ದೇನೆ. ಶಾಂತಿ-ಭದ್ರತೆ ನಿರ್ವಹಣೆಯಲ್ಲಿ ವಿಫಲವಾಗಿರುವ ಸರಕಾರಕ್ಕೆ ರಾಜ್ಯಪಾಲರು ಕಿವಿ ಹಿಂಡಲೇಬೇಕು ಎಂದು ಕುಮಾರಸ್ವಾಮಿ ಒತ್ತಾಯ ಮಾಡಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.