G Parameshwara: ಹರಿಪ್ರಸಾದ್ ಹೇಳಿದ್ದಾರೆಂದು ಡಿ.ಜೆ.ಹಳ್ಳಿ ಪ್ರಕರಣ ವಾಪಸ್ ಅಸಾಧ್ಯ
Team Udayavani, Oct 17, 2024, 12:30 AM IST
ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆ ಪ್ರಕರಣವನ್ನು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿದ್ದಾರೆ ಅಂತಾ ಹಿಂಪಡೆಯಲು ಆಗುವುದಿಲ್ಲ. ಒಂದು ವೇಳೆ ಈ ಸಂಬಂಧ ಪ್ರಸ್ತಾವನೆ ಬಂದರೆ ಪರಿಶೀಲಿಸುತ್ತೇವೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ ಹೇಳಿದರು.
ಬುಧವಾರ ಸುದ್ದಿಗಾರರ ಜತೆ ಮಾತನಾಡಿ, ಹರಿಪ್ರಸಾದ್ ಯಾವುದೋ ಕಾರಣಕ್ಕೆ ಹೇಳಿರಬಹುದು ಎಂದರು.ಅವರು ಹೇಳಿದ್ದಾರೆ ಅಂತಾ ವಾಪಸ್ ಪಡೆಯಲು ಆಗುವುದಿಲ್ಲ. ಪ್ರಸ್ತಾವ ಬಂದಾಗ ಪರಿಶೀಲನೆ ಮಾಡುತ್ತೇವೆ. ಆದರೆ ಸದ್ಯಕ್ಕಂತೂ ಈ ಸಂಬಂಧ ಯಾರೂ ಪತ್ರ ಬರೆದಿಲ್ಲ ಮತ್ತು ಪ್ರಸ್ತಾವನೆಯೂ ಬಂದಿಲ್ಲ. ಈ ಹಿಂದೆ ಪತ್ರ ಬರೆದಿದ್ದರು. ಆದರೆ ಅದು ಅಲ್ಲಿಯೇ ನಿಂತಿದೆ. ಈಗ ಪ್ರಸ್ತಾವ ಬಂದರೆ ಪರಿಶೀಲನೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು.
ಉಪಚುನಾವಣೆಯಲ್ಲಿ ವಾಲ್ಮೀಕಿ ಹಗರಣದ ಪ್ರಸ್ತಾವ ಆಗಬಹುದು ಎಂದಾಗ, ಈ ಬಗ್ಗೆ ವಿಪಕ್ಷಗಳು ಪ್ರಚಾರ ಮಾಡಬಹುದು. ನಾವು ಅದರ ಬಗ್ಗೆ ಏನಾಗಿದೆ ಅಂತಾ ಹೇಳುತ್ತೇವೆ. ಇದು ಅಧಿಕಾರಿಗಳ ಮಟ್ಟದಲ್ಲಿ ನಡೆದ ಪ್ರಕರಣ. ದದ್ದಲ್ ಅವರನ್ನು ವಿಚಾರಣೆಗೆ ಕರೆದಿದ್ದರು. ಆದರೆ ಅವರ ಹೆಸರು ಪ್ರಕರಣದಲ್ಲಿ ಬರಲಿಲ್ಲ. ನಾಗೇಂದ್ರ ಅವರ ವಿಚಾರಣೆಯೂ ಆಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KEA: ಯುಜಿನೀಟ್; ಮಾಪ್ಅಪ್ ಸುತ್ತಿನ ಸೀಟು ಹಂಚಿಕೆ ಪ್ರಕಟ
Rain: ಹಿಂಗಾರು ಮಳೆಯಬ್ಬರಕ್ಕೆ 18 ಜಿಲ್ಲೆಗಳು ಕಂಗಾಲು; ಕೆಲವು ಕಡೆ ಭಾರೀ ಹಾನಿ
KSRTC: ಬಸ್ ಪ್ರಯಾಣ ದರ ಏರಿಕೆ ಪ್ರಸ್ತಾವವಿಲ್ಲ: ಸಚಿವ ರಾಮಲಿಂಗಾರೆಡ್ಡಿ
Karnataka Rajyotsava: ಧ್ವಜಾರೋಹಣಕ್ಕೆ ಉಸ್ತುವಾರಿ ಸಚಿವರ ನಿಯೋಜನೆ
BY Election: ಬಿಜೆಪಿ ಅಭ್ಯರ್ಥಿಗಳು ಶೀಘ್ರ ಅಂತಿಮ: ಬಸವರಾಜ ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
Mangaluru: ಹಳಿ ನಿರ್ವಹಣೆ ಕಾಮಗಾರಿಯಿಂದ ರೈಲು ಸೇವೆಯಲ್ಲಿ ವ್ಯತ್ಯಯ
Rain: ಎಲ್ಲೋ ಅಲರ್ಟ್; ವಾಯುಭಾರ ಕುಸಿತ, ಕರಾವಳಿಯಲ್ಲಿ ಮುಂದುವರಿದ ಮಳೆ
Udupi: ತಿರುಚಿದ ಛಾಯಾಚಿತ್ರ ಪ್ರಸಾರದ ವಿರುದ್ಧ ಕ್ರಮ: ಪ್ರಸಾದ್ರಾಜ್ ಕಾಂಚನ್
Udupi: ಪಠ್ಯಕ್ರಮದ ಮಾರ್ಪಾಡಿನಿಂದ ಶಿಕ್ಷಣ ವ್ಯವಸ್ಥೆ ಬದಲಾಗಲ್ಲ: ಕುಲಪತಿ ಡಾ.ಧರ್ಮ
Udupi: ಕನ್ನಡ ರಾಜ್ಯೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಸೂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.