![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 25, 2022, 7:00 AM IST
ಬೆಂಗಳೂರು/ಹೊಸದಿಲ್ಲಿ: ದೇಶಾದ್ಯಂತ ಸುದ್ದಿ ಮಾಡಿದ್ದ ಬಜರಂಗದಳದ ಕಾರ್ಯಕರ್ತ ಶಿವಮೊಗ್ಗದ ಹರ್ಷ ಕೊಲೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವರ್ಗಾಯಿಸಲಾಗಿದೆ.
ಬುಧವಾರವೇ ಈ ಬಗ್ಗೆ ಕೇಂದ್ರ ತನಿಖಾ ಸಂಸ್ಥೆಯು ಹೊಸದಿಲ್ಲಿಯ ವಿಶೇಷ ಕೋರ್ಟ್ ನಲ್ಲಿ ಕೇಸು ದಾಖಲಿಸಿಕೊಂಡು ತನಿಖೆ ಆರಂಭಿಸಿದೆ. ಹೀಗಾಗಿ ಸದ್ಯ ಬಂಧಿತರಾಗಿರುವ ಹತ್ತು ಮಂದಿಯನ್ನು ಶೀಘ್ರವೇ ಎನ್ಐಎ ವಶಕ್ಕೆ ಪಡೆದುಕೊಳ್ಳುವ ಸಾಧ್ಯತೆ ಇದೆ.
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಹಾಯಕ ಸಚಿವೆ ಶೋಭಾ ಕರಂದ್ಲಾಜೆ ಅವರು ಪ್ರಕರಣದ ಬಗ್ಗೆ ಎನ್ಐಎ ತನಿಖೆಯಾಗಬೇಕು. ಹರ್ಷರಿಗೆ ಮುಸ್ಲಿಂ ಸಂಘಟನೆಗಳಿಂದ ಬೆದರಿಕೆ
ಇತ್ತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಫೆ.22ರಂದು ಪತ್ರ ಬರೆದಿದ್ದರು. ಅದಕ್ಕೆ ಫೆ.28ರಂದು ಸಮ್ಮತಿ ಸೂಚಿಸಿದ್ದ ಗೃಹ ಸಚಿವರು ಪ್ರಕರಣವನ್ನು ಎನ್ಐಎಗೆ ಹಸ್ತಾಂತರಿಸುವಂತೆ ಶಿಫಾರಸು ಮಾಡಿದ್ದರು.
ಹತ್ಯೆಗೆ ಸಂಬಂಧಿಸಿ ಹರ್ಷನ ತಾಯಿ ಶಿವಮೊಗ್ಗ ಪೊಲೀಸರಿಗೆ ದೂರು ನೀಡಿದ್ದರು. ಅಕ್ರಮ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅನ್ವಯ ಕೇಸು ದಾಖಲಿಸಿದ್ದ ಪೊಲೀಸರು 10 ಮಂದಿಯನ್ನು ಬಂಧಿಸಿದ್ದರು. ಪ್ರಕರಣದಲ್ಲಿ ಮುಸ್ಲಿಂ ಸಂಘಟನೆಗಳ ಕೈವಾಡ ಇರಬಹುದು ಎಂಬ ಅನುಮಾನವನ್ನು ರಾಜ್ಯ ಸರಕಾರವೂ ವ್ಯಕ್ತಪಡಿಸಿತ್ತು. ರಾಜ್ಯದ ಬಿಜೆಪಿ ಮುಖಂಡರೂ ಹಲವು ಸಂದರ್ಭಗಳಲ್ಲಿ ಪ್ರಕರಣದ ಬಗ್ಗೆ ಸಿಬಿಐ ಅಥವಾ ಎನ್ಐಎಯಿಂದಲೇ ತನಿಖೆ ನಡೆಸುವಂತೆ ಆಗ್ರಹಿಸಿದ್ದರು.
ಪ್ರಕರಣದ ಹಿನ್ನೆಲೆ :
ಫೆ.20ರಂದು ಹರ್ಷನನ್ನು ಹತ್ಯೆ ಮಾಡಲಾಗಿತ್ತು. ಬಳಿಕ ಶಿವಮೊಗ್ಗದ ಕೆಲವೆಡೆ ಕಲ್ಲು ತೂರಾಟ ಹಾಗೂ ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು. ತನಿಖೆ ಚುರುಕುಗೊಳಿಸಿದ್ದ ಪೊಲೀಸರು 10 ಮಂದಿಯನ್ನು ಬಂಧಿಸಿದ್ದರು. ಅವರ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆ(ಯುಎಪಿಎ) ಅನ್ವಯ ಪ್ರಕರಣ ದಾಖಲಿಸಲಾಗಿತ್ತು.
ಬೆಂಗಳೂರಿಗೆ ಕರೆತರಲು ಸಿದ್ಧತೆ:
ಬಂಧಿತರನ್ನು ರಾಜ್ಯದ ವಿವಿಧ ಜೈಲುಗಳಲ್ಲಿ ಇರಿಸಲಾಗಿದೆ. ಈಗ ಅವರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಲು ಪೊಲೀಸ್ ಇಲಾಖೆ ವಿಶೇಷ ಕ್ರಮ ಕೈಗೊಳ್ಳುತ್ತಿದೆ.
ಶಿವಮೊಗ್ಗ ಪೊಲೀಸರು ಯುಎಪಿಎ ಅನ್ವಯವೂ ಕೇಸು ದಾಖಲಿಸಿದ್ದಾರೆ. ಹೀಗಾಗಿ, ಅದು ಎನ್ಐಎ ವ್ಯಾಪ್ತಿಗೂ ಬರುತ್ತದೆ. ಮುಂದಿನ ತನಿಖೆ ನಿಮಿತ್ತ ಎನ್ಐಎ ಶಿವಮೊಗ್ಗ ಪೊಲೀಸರ ಜತೆಗೆ ಸಂಪರ್ಕ ಸಾಧಿಸಿದೆ. – ಆರಗ ಜ್ಞಾನೇಂದ್ರ ಗೃಹ ಸಚಿವ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.