Railway ಹಾಸನ-ಮಂಗಳೂರು ಜೋಡಿ ಮಾರ್ಗ ಚರ್ಚೆ; ಕೇಂದ್ರ ಸಚಿವರ ಜತೆ ಸಭೆ ಆಯೋಜನೆ

ರಾಜ್ಯದ ರೈಲ್ವೇ ಯೋಜನೆ

Team Udayavani, Sep 10, 2024, 6:40 AM IST

Railway ಹಾಸನ-ಮಂಗಳೂರು ಜೋಡಿ ಮಾರ್ಗ ಚರ್ಚೆ; ಕೇಂದ್ರ ಸಚಿವರ ಜತೆ ಸಭೆ ಆಯೋಜನೆ

ಬೆಂಗಳೂರು: ಹುಬ್ಬಳ್ಳಿ-ಅಂಕೋಲಾ ರೈಲ್ವೇ ಯೋಜನೆ ಹಾಗೂ ಬೆಂಗಳೂರು- ಹಾಸನ-ಮಂಗಳೂರು ನಡುವೆ ಜೋಡಿ ರೈಲ್ವೇ ಮಾರ್ಗ ನಿರ್ಮಾಣ ಕುರಿತು ಶೀಘ್ರದಲ್ಲೇ ಕೇಂದ್ರ ಸಚಿವರೊಂದಿಗೆ ಸಭೆ ಆಯೋಜಿಸಿ ಆಹ್ವಾನ ನೀಡುವುದಾಗಿ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್‌ಗೆ ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಭರವಸೆ ನೀಡಿದರು.

ಬೆಂಗಳೂರು ಉಪನಗರ ರೈಲು ಯೋಜನೆ ಕುರಿತಂತೆ ವಿಧಾನ ಸೌಧದಲ್ಲಿ ನಡೆದ ಸಭೆಯಲ್ಲಿ ರಾಜ್ಯದ ಹಲವು ರೈಲ್ವೇ ಯೋಜನೆಗಳ ಕುರಿತು ಮನವಿ ಮಾಡಿದ ಸಚಿವ ಎಂ.ಬಿ. ಪಾಟೀಲ್‌, ಬಂದರು ನಗರಿಗೆ ರೈಲ್ವೇ ಸಂಪರ್ಕ ಕಲ್ಪಿಸುವುದರಿಂದ ಉತ್ತರ ಕರ್ನಾಟಕ ಭಾಗಕ್ಕೂ ಅನುಕೂಲ ಆಗಲಿದ್ದು, ಅದೇ ರೀತಿ ಉತ್ತರ ಕರ್ನಾಟಕ ಭಾಗದ ಹಲವೆಡೆ ರೈಲ್ವೇ ವಿಸ್ತರಣೆ ಆಗಬೇಕಿದೆ ಎಂದು ಕೋರಿದರು.

ಹುಬ್ಬಳ್ಳಿ-ಅಂಕೊಲಾ ರೈಲ್ವೇ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆಯ ತೀರುವಳಿ ಅವಶ್ಯಕತೆ ಇದ್ದು, ಒಟ್ಟಾರೆ ರಾಜ್ಯದ ರೈಲ್ವೇ ಯೋಜನೆಗಳ ಕುರಿತಂತೆ ಸಮಾಲೋಚನೆ ಮಾಡಲು ಕೇಂದ್ರ ಸಚಿವ ಅಶ್ವಿ‌ನಿ ವೈಷ್ಣವ್‌ ಅವರೊಂದಿಗೆ ಸಭೆ ಏರ್ಪಾಡು ಮಾಡುವುದಾಗಿ ಭರವಸೆ ಕೊಟ್ಟರು. ಅಷ್ಟೇ ಅಲ್ಲದೆ, ರಾಜ್ಯಕ್ಕೆ ಯಾವೆಲ್ಲ ಯೋಜನೆಗಳಿಗೆ ಎಷ್ಟೆಷ್ಟು ಖರ್ಚು ಮಾಡಲಾಗಿದೆ ಎಂಬುದರ ಶ್ವೇತಪತ್ರವನ್ನೂ ಬೇಕಿದ್ದರೆ ಹೊರಡಿಸೋಣ ಎಂದು ಸೋಮಣ್ಣ ಹೇಳಿದರು.

50 ವರ್ಷದಲ್ಲಿ ಆಗದೇ ಇದ್ದದ್ದನ್ನು
ಮೋದಿ ಮಾಡಿದ್ದಾರೆ: ವಿ. ಸೋಮಣ್ಣ
ಪತ್ರಿಕಾಗೋಷ್ಠಿಯಲ್ಲಿ ಸಚಿವ ಎಂ.ಬಿ. ಪಾಟೀಲ್‌ರನ್ನು ಪಕ್ಕದಲ್ಲೇ ಕೂರಿಸಿಕೊಂಡೇ ರಾಜ್ಯ ಸರಕಾರವನ್ನು ಮಾತಿನಿಂದ ತಿವಿದ ವಿ. ಸೋಮಣ್ಣ, ದೇಶಾದ್ಯಂತ 40 ಸಾವಿರ ಜೋಡಿ ರೈಲ್ವೇ ಮಾರ್ಗ ನಿರ್ಮಿಸಿದ್ದು, ಶೇ. 90ರಷ್ಟು ವಿದ್ಯುದೀಕರಣ ಆಗಿದೆ. ತುಮಕೂರು-ಚಿತ್ರದುರ್ಗ-ದಾವಣಗೆರೆ ಹಾಗೂ ಹುಬ್ಬಳ್ಳಿ-ಧಾರವಾಡ ಮಾರ್ಗದ ಯೋಜನೆಗಳಿಗೆ ಭೂಸ್ವಾಧೀನ ಸಮಸ್ಯೆಯಿದ್ದು, ರಾಜ್ಯ ಸರಕಾರ ಅದನ್ನು ಬಗೆಹರಿಸಿಕೊಟ್ಟರೆ ತ್ವರಿತವಾಗಿ ಯೋಜನೆಗಳು ಪೂರ್ಣಗೊಳ್ಳಲಿವೆ.

ರೈಲ್ವೇ ಮೇಲ್ಸೇತುವೆ ಮತ್ತು ಕೆಳಸೇತುವೆ ಯೋಜನೆಗಳನ್ನು ಕೇಂದ್ರ ಸರಕಾರವೇ ಅನುಷ್ಠಾನಗೊಳಿಸಲು ತಯಾರಿದೆ. ರಾಯ ದುರ್ಗ-ಮಡಕಶಿರ-ತುಮಕೂರು ನಡುವಿನ 200 ಕಿ.ಮೀ. ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ.

ಹೆಜ್ಜಾಲ-ಕನಕಪುರ-ಸಾತನೂರು-ಚಾಮರಾಜನಗರ ರೈಲ್ವೇ ಯೋಜನೆಗಾಗಿ ಮಂಡಳಿ ಮುಂದೆ 400 ಕೋಟಿ ರೂ.ಗಳ ಪ್ರಸ್ತಾವನೆ ಮಂಡಿಸಿದ್ದೇನೆ. 10 ವಂದೇ ಭಾರತ್‌ ಎಕ್ಸ್‌ಪ್ರೆಸ್‌ಗಳ ಪೈಕಿ ಸಚಿವ ಎಂ.ಬಿ. ಪಾಟೀಲ್‌ರ ಕ್ಷೇತ್ರವಾದ ವಿಜಯಪುರಕ್ಕೂ ಒಂದು ಸಿಗಬಹುದು. ಒಟ್ಟಾರೆ ರೈಲ್ವೇ ಇಲಾಖೆಯಲ್ಲಿ ಕಳೆದ 50 ವರ್ಷದಲ್ಲಿ ಆಗದೇ ಇರುವ ಹಲವು ಕೆಲಸಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿದ್ದಾರೆ. ಹಲವು ರಾಜ್ಯಗಳಲ್ಲಿ ಅಭಿವೃದ್ಧಿ ವಿಚಾರ ಬಂದಾಗ ರಾಜಕೀಯ ಪಕ್ಕಕ್ಕಿಡುತ್ತಾರೆ. ಕರ್ನಾಟಕದಿಂದಲೂ ಸಹಕಾರ ಸಿಗುತ್ತಿದೆ, ಮುಂದೆಯೂ ಸಿಗಬೇಕು ಎಂದು ಟಾಂಗ್‌ ನೀಡಿದರು.

ಸಕಲೇಶಪುರ-ಸುಬ್ರಹ್ಮಣ್ಯ ಸುರಂಗ ಮಾರ್ಗ
ಸಭೆ ಅನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಪಾಟೀಲ್‌, ಮಂಗಳೂರಿಗೆ ರೈಲ್ವೇ ಸಂಪರ್ಕ ಇದ್ದರೂ ಜೋಡಿ ಮಾರ್ಗ ಆಗದೇ ಇರುವುದರಿಂದ ಸರಕು ಸಾಗಣೆ ಸೇರಿದಂತೆ ಕೈಗಾರಿಕಾ ಬೆಳವಣಿಗೆಯೂ ಕುಂಠಿತವಾಗಿದೆ. ಹೀಗಾಗಿ ಬೆಂಗಳೂರು-ಹಾಸನ-ಮಂಗಳೂರು ನಡುವಿನ ರೈಲ್ವೇಯನ್ನು ಜೋಡಿ ಮಾರ್ಗವಾಗಿ ಮಾರ್ಪಡಿಸಬೇಕು. ಇತ್ತೀಚೆಗೆ ಮಳೆಯಿಂದಾಗಿ ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ಗುಡ್ಡ ಕುಸಿತ ಪ್ರಕರಣ ಹೆಚ್ಚುತ್ತಿದ್ದು, ಈ ಮಾರ್ಗದಲ್ಲಿ ಸುರಂಗ ನಿರ್ಮಾಣದ ಅಗತ್ಯವಿದೆ. ಅದೇ ರೀತಿ ಹುಬ್ಬಳ್ಳಿ-ಅಂಕೋಲಾ ನಡುವೆ ರೈಲ್ವೇ ಮಾರ್ಗ ನಿರ್ಮಿಸಿದರೆ ಉತ್ತರ ಕರ್ನಾಟಕಕ್ಕೂ ಅನುಕೂಲ ಎಂದರು.

ಟಾಪ್ ನ್ಯೂಸ್

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

ಅ.17ಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ ?

ಅ.17ಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ ?

9

BBK11: ಈ ಬಾರಿ ಬಿಗ್‌ ಬಾಸ್‌ ಮನೆಯೊಳಗೆ ಹೋಗೋರು ಇವರೇ? ಇಲ್ಲಿದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ

Udupi: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ

Udupi: ಪೊಲೀಸ್ ಸಿಬ್ಬಂದಿ ನಿತ್ಯಾನಂದ ಶೆಟ್ಟಿ ಹೃದಯಾಘಾತದಿಂದ ನಿಧನ

Nagamangala Incident: ತನಿಖೆ ಬಳಿಕ ಇನ್ನಷ್ಟು ಕ್ರಮ… ಗೃಹ ಸಚಿವ ಪರಮೇಶ್ವರ್ ಹೇಳಿಕೆ

Nagamangala Incident: ತನಿಖೆ ಬಳಿಕ ಇನ್ನಷ್ಟು ಕ್ರಮ… ಗೃಹ ಸಚಿವ ಪರಮೇಶ್ವರ್ ಹೇಳಿಕೆ

Delhi: ಸಚಿವೆ ಅತಿಶಿ ಮರ್ಲೆನಾ ದೆಹಲಿ ನೂತನ ಸಿಎಂ: ಶಾಸಕಾಂಗ ಪಕ್ಷದ ಸಭೆ ತೀರ್ಮಾನ?

Delhi: ಸಚಿವೆ ಅತಿಶಿ ಮರ್ಲೆನಾ ದೆಹಲಿ ನೂತನ ಸಿಎಂ: ಶಾಸಕಾಂಗ ಪಕ್ಷದ ಸಭೆ ತೀರ್ಮಾನ?

Kaup: ದಂಡತೀರ್ಥ ಬಳಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್, ಪ್ರಯಾಣಿಕರು ಪಾರು

Kaup: ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬಸ್… ಪ್ರಯಾಣಿಕರು ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Nagamangala Incident: ತನಿಖೆ ಬಳಿಕ ಇನ್ನಷ್ಟು ಕ್ರಮ… ಗೃಹ ಸಚಿವ ಪರಮೇಶ್ವರ್ ಹೇಳಿಕೆ

Nagamangala Incident: ತನಿಖೆ ಬಳಿಕ ಇನ್ನಷ್ಟು ಕ್ರಮ… ಗೃಹ ಸಚಿವ ಪರಮೇಶ್ವರ್ ಹೇಳಿಕೆ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

D.K.Shivakumar: ಅಮೇರಿಕಾದಲ್ಲಿ ಯಾರನ್ನೂ ಭೇಟಿಯಾಗಿಲ್ಲ… ಖಾಸಗಿ ಪ್ರವಾಸ ಅಷ್ಟೇ: ಡಿಕೆಶಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Puttur: ಸಂಪ್ಯ ಮದ್ರಸಾದಲ್ಲಿ ಹಳೆ ಕಾಲದ ವಸ್ತು ಪ್ರದರ್ಶನ

Puttur: ಸಂಪ್ಯ ಮದ್ರಸಾದಲ್ಲಿ ಹಳೆ ಕಾಲದ ವಸ್ತು ಪ್ರದರ್ಶನ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Eshwara Khandre: ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವಾಗ ಯತ್ನಾಳ್ ಒತ್ತಡ ತಂತ್ರ ಸರಿಯಲ್ಲ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

Kollegala: ಒಣಗಾಂಜಾ ಮಾರಾಟ; ಆರೋಪಿ ಬಂಧನ

ಅ.17ಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ ?

ಅ.17ಕ್ಕೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಪುತ್ರನ ನಿಶ್ಚಿತಾರ್ಥ, ಹುಡುಗಿ ಯಾರು ಗೊತ್ತಾ ?

9

BBK11: ಈ ಬಾರಿ ಬಿಗ್‌ ಬಾಸ್‌ ಮನೆಯೊಳಗೆ ಹೋಗೋರು ಇವರೇ? ಇಲ್ಲಿದೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.