ಸ್ವರಾಜ್‌ ಹೆಸರಲ್ಲಿ ಶಂಖ ಊದಿದರೆ ಸ್ವರಾಜ್ಯ ಸಿಗಲ್ಲ; ಜನರ ಕಷ್ಟ ನಿವಾರಣೆ ಆಗಲ್ಲ


Team Udayavani, Nov 20, 2021, 5:30 AM IST

ಸ್ವರಾಜ್‌ ಹೆಸರಲ್ಲಿ ಶಂಖ ಊದಿದರೆ ಸ್ವರಾಜ್ಯ ಸಿಗಲ್ಲ; ಜನರ ಕಷ್ಟ ನಿವಾರಣೆ ಆಗಲ್ಲ

ಬೆಂಗಳೂರು: ಆಡಳಿತಾರೂಢ ಬಿಜೆಪಿ ಪಕ್ಷದ ಜನಸ್ವರಾಜ್‌ ಸಮಾವೇಶಗಳ ಬಗ್ಗೆ ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, “ಸ್ವರಾಜ್‌ ಹಸೆರಲ್ಲಿ ಶಂಖ ಊದಿದರೆ ಸ್ವರಾಜ್ಯ ಸಿಗುತ್ತಾ’ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಪಕ್ಷದ ರಾಜ್ಯ ಕಚೇರಿ ಜೆ.ಪಿ. ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಭಾರಿ ಮಳೆಯಿಂದ ಜನರು ಸಂಕಷ್ಟದಲ್ಲಿ ಸಿಲುಕಿದ್ದರೆ ಆಡಳಿತಾರೂಢ ಬಿಜೆಪಿ ಪಕ್ಷ ಶಂಖ ಊದಿಕೊಂಡು ಜನ ಸ್ವರಾಜ್‌ ಯಾತ್ರೆ ಅಂತ ಶುರು ಮಾಡಿಕೊಂಡಿದೆ. ಯಾರ ಸ್ವರಾಜ್ಯಕ್ಕಾಗಿ ಈ ಯಾತ್ರೆ? ಶಂಖ ಊದಿದರೆ ಜನರಿಗೆ ಸ್ವರಾಜ್ಯ ಬರುತ್ತದಾ? ಇದರಿಂದ ರೈತರ ಸಮಸ್ಯೆ ಬಗೆಹರಿಯುತ್ತಾ? ಎಂದು ವಾಗ್ಧಾಳಿ ನಡೆಸಿದರು.

ರಾಜ್ಯದಲ್ಲಿ ಅನೇಕ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಸರ್ಕಾರದ ಅಂದಾಜಿನ ಪ್ರಕಾರ 7 ಲಕ್ಷಕ್ಕೂ ಹೆಚ್ಚು ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ನಾಶ ಆಗಿದೆ. ಚಿಕ್ಕಮಗಳೂರು ಕಡೆ ಕಾಫಿ ತೋಟಗಳು ಹಾಳಾಗಿವೆ. ರಾಯಚೂರು ಜಿಲ್ಲೆಯಲ್ಲಿ ಭತ್ತ ಕೆಸರಿನಲ್ಲಿ ಮುಚ್ಚಿ ಹೋಗಿದೆ. ಚಿತ್ರದುರ್ಗ, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಎಲ್ಲಾ ಕಡೆ ಅನಾಹುತ ಆಗಿದೆ. ಬೆಂಗಳೂರಿನಲ್ಲೂ ರಸ್ತೆಗಳು ಹಾಳಾಗಿವೆ, ಹಲವಾರು ಸಮಸ್ಯೆಗಳು ಎದುರಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯ ಸರ್ಕಾರ ಸಚಿವರು ತ್ವರಿತವಾಗಿ ಪರಿಹಾರ ಕೆಲಸ ಮಾಡುವುದು ಬಿಟ್ಟು ಶಂಖ ಊದಿಕೊಂಡು ಹೋದರೆ ಹೇಗೆ? ಎಂದು ಅವರು ಕಿಡಿ ಕಾರಿದರು.

ಇದನ್ನೂ ಓದಿ:ಪರಿಷತ್‌ ಸ್ಥಾನ ಉಳಿಸಿಕೊಳ್ಳಲು ಕಾಂಗ್ರೆಸ್‌, ಶತಾಯಗತಾಯ ಗೆಲ್ಲಲು ಬಿಜೆಪಿ ಯತ್ನ

ಗೋವಿನ ಸಂರಕ್ಷಣೆ ಮಾಡುತ್ತೇವೆ ಎಂದು ಸರಕಾರ ಹೇಳಿ ಎಲ್ಲ ಕಡೆ ಗೋಶಾಲೆಗಳನ್ನು ತೆರೆಯುತ್ತವೆ ಎಂದು ಹೇಳಿತ್ತು. ಈಗ ನೋಡಿದರೆ ಗೋಶಾಲೆಗಳನ್ನು ತೆರೆಯಲು ಕೇವಲ 25 ಕೋಟಿ ರೂಪಾಯಿ ಕೊಡಲಾಗುವುದು ಎಂದು ಈಗ ಹೇಳುತ್ತಿದ್ದಾರೆ. ಗೋ ಶಾಲೆಗಳಿಗೆ ಹಣ ನೀಡುವುದಕ್ಕೂ ಸಾಕಾರಕ್ಕೆ ಆಗಿಲ್ಲ. ಬೆಳೆ ನಾಶದಿಂದ ಮೇವು ಕೊರತೆ ಉಂಟಾಗಿದೆ. ಇದೆಲ್ಲಾ ಒಂದಕ್ಕೊಂದು ಚೈನ್‌ ಲಿಂಕ್‌ ಇದೆ. ಸ್ಥಳೀಯ ಮಟ್ಟದಲ್ಲಿ ಡಿಸಿಗಳು ಇಷ್ಟೊತ್ತಿಗೆ ಸಮೀಕ್ಷೆ ಮಾಡಬೇಕಿತ್ತು. ಅದಾವುದೂ ಆಗಿಲ್ಲ. ಶಂಕ ಊದಿಕೊಂಡು ಹೋದರೆ ಇದೆಲ್ಲ ಬಗೆಹರಿಯುತ್ತಾ? ಎಂದು ಮಾಜಿ ಮುಖ್ಯಮಂತ್ರಿಗಳು ಪ್ರಶ್ನೆ ಮಾಡಿದರು.

ಕೇಂದ್ರ ಸರರ್ಕಾರವನ್ನು ನೆಚ್ಚಿಕೊಳ್ಳದೆ ಎಸ್‌ಡಿಆರ್‌ಎಫ್ನಿಂದ ಕೂಡಲೇ ಹಣ ಬಿಡುಗಡೆ ಮಾಡಬೇಕು. ತಕ್ಷಣ ಜಿಲ್ಲಾ ಕೇಂದ್ರಗಳಲ್ಲಿ ಸಭೆ ನಡೆಸಿ ಬೆಳೆ ಪರಿಹಾರ, ಪುನರ್ವಸತಿಗೆ ತರ್ತು ಕ್ರಮ ವಹಿಸಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದರು.

ಬೇರೆ ಪಕ್ಷದಿಂದ ಬಂದವರಿಗೆ ಟಿಕೆಟ್‌ ಇಲ್ಲ: ಎಚ್‌ಡಿಕೆ
ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಗೆ ಜೆಡಿಎಸ್‌ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಿದ್ದು, ಸೋಮವಾರ ಪ್ರಕಟಿಸಲಾಗುವುದು ಎಂದು ಹೇಳಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು, ಬೇರೆ ಪಕ್ಷಗಳಿಂದ ಬಂದವರಿಗೆ ಟಿಕೆಟ್‌ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

 

 

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.