![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Aug 19, 2024, 1:07 AM IST
ಬೆಂಗಳೂರು: ರಾಜ್ಯಪಾಲರ ವಿರುದ್ಧ ರಾಷ್ಟ್ರದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ಕೀಳುಮಟ್ಟದ ಪ್ರತಿಭಟನೆಗಳು ನಡೆಯುತ್ತಿವೆ. ಸಂವಿಧಾನ ರಕ್ಷಣೆ ಮಾಡುತ್ತೇವೆ ಎಂದು ಬಡಾಯಿ ಕೊಚ್ಚಿಕೊಳ್ಳುವ ಕಾಂಗ್ರೆಸ್ ಪಕ್ಷದಿಂದ ಇಂಥ ಹೀನ ಕೆಲಸಗಳು ನಡೆಯುತ್ತಿವೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಮುಡಾ ಹಗರಣ ವಿಚಾರಣೆಗೆ ಅನುಮತಿ ನೀಡಿದಾಕ್ಷಣ ಇಡೀ ಸಚಿವರು, ಶಾಸಕರನ್ನು ಇಟ್ಟುಕೊಂಡು ರಾಜ್ಯಪಾಲರಿಗೆ ಧಮ್ಕಿ ಹಾಕುವ, ಜನರನ್ನು ಎತ್ತಿ ಕಟ್ಟುವ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಮಾಡುತ್ತಿ¨ªಾರೆ. ನನ್ನ ವಿರುದ್ಧ 2006ರಲ್ಲಿ ಗಣಿ ಆರೋಪ ಮಾಡಿದಾಗ ನಾನೊಬ್ಬನೇ ಎದುರಿಸಿದೆ. ಶಾಸಕರು, ಸಚಿವರನ್ನು ಅಡ್ಡ ಇಟ್ಟುಕೊಂಡು ರಕ್ಷಣೆ ಪಡೆಯುವ ಕೆಲಸ ಮಾಡಲಿಲ್ಲ. ಹೇಡಿತನ ಪ್ರದರ್ಶಿಸಲಿಲ್ಲ, ಧೈರ್ಯವಾಗಿ ಒಬ್ಬನೇ ಎದುರಿಸಿದೆ ಎಂದರು.
ರಾಜ್ಯಪಾಲರ ಅವಹೇಳನ
ರಾಜ್ಯದ ಸಾಂವಿಧಾನಿಕ ಮುಖ್ಯಸ್ಥ ರಾಗಿರುವ ರಾಜ್ಯಪಾಲರ ವಿರುದ್ಧ ಅತ್ಯಂತ ಕೆಟ್ಟದಾಗಿ, ಅವಹೇಳನ ಕಾರಿಯಾಗಿ ಪ್ರತಿಭಟನೆ ಮಾಡಿಸುತ್ತಿದೆ. ಸಚಿವರು, ಶಾಸಕರು ರಾಜ್ಯಪಾಲರ ಬಗ್ಗೆ ಬಹಳ ಅಗೌರವದಿಂದ ನಡೆದುಕೊಳ್ಳುತ್ತಿ¨ªಾರೆ. ಬೇರೆ ಯಾವ ರಾಜ್ಯದಲ್ಲಿ ಇಂಥ ಕೆಟ್ಟ ಪರಿಸ್ಥಿತಿಯನ್ನು ನಾನು ನೋಡಿಲ್ಲ ಎಂದು ಕುಮಾರಸ್ವಾಮಿ ಕಿಡಿಕಾರಿದರು.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.