K’taka polls: ಸಿಎಂ ಹುದ್ದೆಯನ್ನು ಜಾತಿಗೆ ಸೀಮಿತ ಮಾಡಬೇಡಿ; ಹೆಚ್.ಡಿ.ಕುಮಾರಸ್ವಾಮಿ
Team Udayavani, Apr 25, 2023, 3:22 PM IST
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಒಕ್ಕಲಿಗರು ಹೆಚ್.ಡಿ.ದೇವೇಗೌಡ ಹಾಗೂ ಜಿಟಿ.ದೇವೇಗೌಡರಿಗೆ ಮೀಸಲಿದೆ. ಒಕ್ಕಲಿಗರ ಮತ ಕಾಂಗ್ರೆಸ್ಗೆ ಹೋಗುವ ಪ್ರಶ್ನೆ ಇಲ್ಲ. ಕುಮಾರಸ್ವಾಮಿ ಬೆಂಬಲಿಸಿದ್ದಾರೆ ಎಂಬ ಕಾಂಗ್ರೆಸ್ ಅಭ್ಯರ್ಥಿ ಸಿದ್ದೇಗೌಡ ಅವರ ಮಾತಿಗೆ ಹೆಚ್ಡಿಕೆ ತಿರುಗೇಟು ನೀಡಿದರು.
ನನ್ನ ಹೆಸರು ದುರ್ಬಳಕೆ ಮಾಡಿಕೊಳ್ಳುವುದನ್ನು ಅವರು ನಿಲ್ಲಿಸಬೇಕು. ಕಾಂಗ್ರೆಸ್ ಅಭ್ಯರ್ಥಿ ಸಿದ್ದೇಗೌಡಗೆ ನಾನ್ಯಾಕೆ ಬೆಂಬಲ ನೀಡಲಿ ? ಒಕ್ಕಲಿಗರು ಸಿದ್ದೇಗೌಡ ಮಾತಿಗೆ ಕಿವಿಗೊಡಬೇಡಿ. ಸುಳ್ಳು ಹೇಳಿಕೊಂಡು ಓಡಾಡುತ್ತಿರುವವರನ್ನು ತಾಯಿ ಚಾಮುಂಡೇಶ್ವರಿ ನೋಡಿಕೊಳ್ಳುತ್ತಾಳೆ. ಜಿ.ಟಿ.ದೇವೇಗೌಡ 50 ಸಾವಿರ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ ಬಂದರೆ, ರಿವರ್ಸ್ ಗೇರ್ ಸರ್ಕಾರ ಆಗುತ್ತದೆ: ಅಮಿತ್ ಶಾ ವಾಗ್ದಾಳಿ
ಲಿಂಗಾಯತ ಸಿಎಂ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಮುಖ್ಯಮಂತ್ರಿ ಸಮುದಾಯದ ಪ್ರತಿನಿಧಿ ಅಲ್ಲ, ನಾಡಿನ ಪ್ರತಿನಿಧಿ. ಸಿಎಂ ಹುದ್ದೆಯನ್ನು ಜಾತಿಗೆ ಸೀಮಿತ ಮಾಡಬೇಡಿ. ಸಂದರ್ಭಕ್ಕೆ ಅನುಗುಣವಾಗಿ ರಾಜಕೀಯ ಪಕ್ಷಗಳು ನಾಯಕರನ್ನು ಆಯ್ಕೆ ಮಾಡುತ್ತವೆ. ಆದರೆ ನಾಡಿನ ಹಿತದೃಷ್ಟಿ ಇಟ್ಟುಕೊಂಡು ಸಿಎಂ ಕೆಲಸ ಮಾಡಬೇಕು. ಆ ಸಮುದಾಯದ ಬಗ್ಗೆ ಸಿದ್ದರಾಮಯ್ಯ ಹೇಳಿಕೆಯೂ ಸರಿಯಲ್ಲ. ಅವರು ಒಬ್ಬ ಅನುಭವಿ ರಾಜಕಾರಣಿ. ಅಂಥವರ ಬಾಯಲ್ಲಿ ಆ ಮಾತು ಯಾಕೆ ಬಂತು ಅಂತ ಗೊತ್ತಿಲ್ಲ. ಯಾವ ಅರ್ಥದಲ್ಲಿ ಆ ಮಾತು ಹೇಳಿದ್ದರೋ ಗೊತ್ತಿಲ್ಲ. ಬಹುಶಃ ಕಾಂಗ್ರೆಸ್ ಮುಗಿಸಬೇಕು ಅಂತ ಆ ರೀತಿ ಹೇಳಿರಬಹುದು. ಭ್ರಷ್ಟಾಚಾರ ವಿಚಾರ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dr G Parameshwar: ಸೆನ್ ಠಾಣೆಗಳಿಗೂ ಎಸ್ಪಿ ಕೇಡರ್: ಗೃಹ ಸಚಿವ
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Heavy Rain: ದಾಂಡೇಲಿಯಲ್ಲಿ ವ್ಯಾಪಕ ಮಳೆ… ಅಂಗಡಿ, ಮನೆಗಳಿಗೆ ನುಗ್ಗಿದ ಕೊಳಚೆ ನೀರು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.