Congress ತಳಮಳಕ್ಕೆ ಕಾರಣ ಆದ ಎಚ್ಡಿಡಿ-ಶಾ ಭೇಟಿ
ಕಾನೂನು ತಜ್ಞರ ಮೊರೆ ಹೋದ ಸಿಎಂ; ರಾಜ್ಯಪಾಲರ ನಡೆ ಬಗ್ಗೆ ಹೆಚ್ಚಿದ ಆತಂಕ
Team Udayavani, Aug 9, 2024, 11:55 PM IST
ಬೆಂಗಳೂರು: ಮೈಸೂರಿನಲ್ಲಿ ನಡೆದ ಜನಾಂದೋಲನ ಸಮಾವೇಶದ ಬಳಿಕವೂ ಕಾಂಗ್ರೆಸ್ ಪಾಳಯದಲ್ಲಿ ಸೃಷ್ಟಿಯಾಗಿದ್ದ ಆತಂಕ ಇನ್ನೂ ಜೀವಂತವಾಗಿದ್ದು 2 ದಿನಗಳ ಹಿಂದೆ ದಿಲ್ಲಿಯಲ್ಲಿ ನಡೆದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯ ಬಗ್ಗೆ ಹಲವು ಗುಮಾನಿ ಸೃಷ್ಟಿಯಾಗಿವೆ.
ಈ ಭೇಟಿಯ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕಾನೂನು ತಜ್ಞರ ಜತೆಗೆ ಸಮಾಲೋಚನೆ ನಡೆಸಿ ದ್ದಾರೆ. ಅದರ ಹೊರತಾಗಿಯೂ ದಿಲ್ಲಿ ಮೂಲದ ಇಬ್ಬರು ಪ್ರತಿಷ್ಠಿತ ವಕೀಲರ ಜತೆಗೂ ಮಾತುಕತೆ ನಡೆಸಿದ್ದು ರಾಜ್ಯಪಾಲರ ನಡೆಯನ್ನು ಕಾನೂನು ಪರಿಧಿಯಲ್ಲಿ ಹೇಗೆ ಎದುರಿಸಬೇಕೆಂಬ ಬಗ್ಗೆ ಎಚ್ಚರಿಕೆಯ ಹೆಜ್ಜೆ ಇಡಲು ನಿರ್ಧರಿಸಿದ್ದಾರೆ.
ಸದ್ಯಕ್ಕೆ ರಾಜ್ಯಪಾಲರು ಮೌನಕ್ಕೆ ಶರಣಾ ಗಿದ್ದರೂ ಆ.15ರ ಬಳಿಕ ಏನಾದರೂ ಹೆಜ್ಜೆ ಇಡಬಹುದೆಂಬುದು ಸರಕಾರದ ನಂಬಿಕೆ. ಹೀಗಾಗಿ ಎಚ್ಚರಿಕೆಯ ಹೆಜ್ಜೆ ಇಡಲು ನಿರ್ಧರಿಸಿದೆ.ಇದೆಲ್ಲದರ ಮಧ್ಯೆ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸ್ನೇಹಮಯಿ ಕೃಷ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದಾರೆ. ಇದರ ವಿಚಾರಣೆಯೂ ಆ. 13ರಂದು ನಡೆಯಲಿದೆ.
ಇದೆಲ್ಲದರ ಆಧಾರದ ಮೇಲೆ ರಾಜ್ಯಪಾಲರು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದ್ದು ಒಟ್ಟಿನಲ್ಲಿ ರಾಷ್ಟ್ರ ರಾಜಕಾರಣಕ್ಕೆ ದಿಕ್ಸೂಚಿಯಾಗುವ ಕಾನೂನು ಸಂಗ್ರಾಮ ಸೃಷ್ಟಿಯಾಗುವ ವಾತಾವರಣ ನಿರ್ಮಾಣವಾಗಿದೆ.
ದೇವೇಗೌಡ ಹಾಗೂ ಅಮಿತ್ ಶಾ ಭೇಟಿಯ ಮರ್ಮ ಮಾತ್ರ ಕಾಂಗ್ರೆಸ್ ನಾಯಕರಿಗೆ ಅರ್ಥವಾಗಿಲ್ಲ. ಇದು ಸಹಜ ಭೇಟಿ ಎಂಬುದನ್ನು ಒಪ್ಪಿಕೊಳ್ಳುವುದಕ್ಕೆ ಕಾಂಗ್ರೆಸ್ ಪಾಳಯ ಸಿದ್ಧವಿಲ್ಲ. ರಾಜ್ಯ ರಾಜಕಾರಣಕ್ಕೆ ಸಂಬಂಧಪಟ್ಟಂತೆಯೇ ಇಬ್ಬರ ಮಧ್ಯೆ ಚರ್ಚೆ ನಡೆದಿದೆ. ಸರಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನಕ್ಕೆ ಇದು ಕಾರಣವಾಗಬಹುದೆಂಬ ಅನುಮಾನ ಕಾಂಗ್ರೆಸ್ ನಾಯಕರಲ್ಲಿ ಸೃಷ್ಟಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Horoscope; ಕಳೆದುಹೋದ ಅವಕಾಶ ಮರಳಿ ಬರುವ ಸಾಧ್ಯತೆ,ವ್ಯವಸ್ಥೆ ಪರಿಷ್ಕರಣೆ
High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ
MSEZ: ಜೆಬಿಎಫ್ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್ನಲ್ಲಿ ಉದ್ಯೋಗ
ಬಿಜೆಪಿಗೆ ಇಡೀ ರಾಜ್ಯವೇ ಒಪ್ಪಿಕೊಳ್ಳುವಂಥ ಸರ್ವಸ್ಪರ್ಶಿ ನಾಯಕತ್ವ ಇನ್ನಷ್ಟೇ ಸಿಗಬೇಕಿದೆ
BJP ಶಾಸಕ ಮುನಿರತ್ನ ಪರಪ್ಪನ ಜೈಲಿಗೆ: ಇಂದು ಜಾಮೀನು ಭವಿಷ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.