ಕೈಲಾಗದ ಕಾಂಗ್ರೆಸ್ ನಾಯಕ ಮೈ ಪರಚಿಕೊಂಡನಂತೆ : ಎಚ್ ಡಿಕೆ ವ್ಯಂಗ್ಯ

ಐದು ವರ್ಷ ಗಡದ್ದಾಗಿ ನಿದ್ದೆ ಹೊಡೆದ ಸುಳ್ಳು ಸಿದ್ದಯ್ಯ

Team Udayavani, Jan 7, 2022, 11:37 AM IST

hdk

ಬೆಂಗಳೂರು :ಹಿಂದೆ ಒಂದು ಮಾತಿತ್ತು. ” ಕೈಲಾಗದವನು ಮೈ ಪರಚಿಕೊಂಡ.” ಈಗ ಬಂದಿರುವ ಹೊಸ ನುಡಿಗಟ್ಟು ಏನೆಂದರೆ, “ಕೈಲಾಗದ ಕಾಂಗ್ರೆಸ್ ನಾಯಕ ಮೈ ಪರಚಿಕೊಂಡ” ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಸುಳ್ಳು ಸಿದ್ದಯ್ಯನ ವರಸೆ ಹಾಗಿದೆ. ಐದು ವರ್ಷ ಅಧಿಕಾರ ಇದ್ದಾಗ ಗಡದ್ದಾಗಿ ನಿದ್ದೆ ಹೊಡೆದು ಈಗ ಇನ್ನೇನು ಮಾಡಬೇಕಿತ್ತು ಎಂದು ಹೊಸ ರಾಗ ಹಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಕೊಟ್ಟ ಕುದುರೆ ಏರಿ, ಸವಾರಿಯನ್ನೂ ಮಾಡಿ, ಆಮೇಲೆ ನಮ್ಮ ‘ ಕೈ ‘ ಯಲ್ಲಿ ಏನೂ ಮಾಡಲಾಗಲಿಲ್ಲ ಎಂದರೆ ಹೇಗೆ? ಅಂದರೆ, ಕೊಟ್ಟ ಕುದುರೆಯನ್ನು ಏರಿ ಕೆಲಸ ಮಾಡದವನು ಕಾಂಗ್ರೆಸ್ ನಾಯಕ ಉರುಫ್ ಸುಳ್ಳು ಸಿದ್ದಯ್ಯ ಮೇಕೆದಾಟು ಕನಸು ಕಂಡವರು 1995ರಲ್ಲಿ ಸಿಎಂ ಆಗಿದ್ದ ಹೆಚ್.ಡಿ.ದೇವೇಗೌಡರು. ಆ ಯೋಜನೆಯ ಸಮಗ್ರ ಯೋಜನಾ ವರದಿ -DPR ಮಾಡಿ ಕೇಂದ್ರಕ್ಕೆ ಕಳಿಸಿದ್ದು 2018ರಲ್ಲಿ ಸಿಎಂ ಆಗಿದ್ದ ಕುಮಾರಸ್ವಾಮಿ ಅವರು.

2017ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಕಳಿಸಿದ್ದು ಕೇವಲ PFR ಮಾತ್ರ. ಬೆಂಗಳೂರಿನಲ್ಲೇ ಇದ್ದ ಕೇಂದ್ರ ಜಲ ಆಯೋಗದ ಪ್ರಾದೇಶಿಕ ಕಚೇರಿಗೆ PFR ಕೊಟ್ಟು ಕೈ ತೊಳೆದುಕೊಂಡ ಅವರ ಸರಕಾರ, ಆ ಪ್ರಾದೇಶಿಕ ಕಚೇರಿ ಕೇಳಿದ ಯಾವ ಪ್ರಶ್ನೆಗೂ ಉತ್ತರ ಕೊಡಲಿಲ್ಲ. 2018ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಿಎಂ ಅದ ಮೇಲೆ ಪುನಾ PFR ಸಲ್ಲಿಸಿದ ಮೇಲೆ DPR ಸಲ್ಲಿಕೆಗೆ ಅವಕಾಶ ಸಿಕ್ಕಿತು. ಆಗ ಕುಮಾರಸ್ವಾಮಿ ಅವರ ಸರಕಾರ ತಡ ಮಾಡದೇ DPR ಸಿದ್ದಪಡಿಸಿ ಸಲ್ಲಿಸಿತು. ಮೇಕೆದಾಟು ಯೋಜನೆಗೆ DPR ಮಾಡಿದ್ದು ಹೆಚ್.ಡಿ.ಕುಮಾರಸ್ವಾಮಿ ಅವರ ಸರಕಾರ ಎಂದು ನಿನ್ನೆ ಜಲ ಸಂಪನ್ಮೂಲ ಸಚಿವರಾದ ಶ್ರೀ ಗೋವಿಂದ ಕಾರಜೋಳ ಅವರೇ ದಾಖಲೆಗಳ ಸಮೇತ ಹೇಳಿದ್ದಾರೆ. ಐದು ವರ್ಷ ಸುಳ್ಳು ಸಿದ್ದಯ್ಯ ಮಾಡಿದ್ದೇನು ಇಲ್ಲ ಎಂದು ಕಡ್ಡಿ ಮುರಿದಂತೆ ತಿಳಿಸಿದ್ದರು.

ಹೀಗಿದ್ದರೂ ಸುಳ್ಳು ಸಿದ್ದಯ್ಯ ನಾವೇ DPR ಮಾಡಿದ್ದು ಎಂದು ಬೂಸಿ ಬಿಡುತ್ತಿದ್ದಾರೆ. ಅವರಿಗೆ PFR ಎಂಬುದು DPR ಆಗಿದ್ದು ಹೇಗೆ? ಐದು ವರ್ಷ ಸಿಎಂ ಆಗಿದ್ದ ವ್ಯಕ್ತಿಗೆ ಇವೆರಡಕ್ಕೂ ಇರುವ ವ್ಯತ್ಯಾಸ ತಿಳಿಯದೇ?
ತಮ್ಮ ತಪ್ಪು ಮುಚ್ಚಿಕೊಳ್ಳಲು ಈಗ ದೇವೇಗೌಡರನ್ನು ಸುಳ್ಳು ಸಿದ್ದಯ್ಯ ಟೀಕೆ ಮಾಡುತ್ತಿದ್ದಾರೆ. ಮೋದಿಗೆ ಅವರಿಗೆ ಗೌಡರು ಅಪ್ತರು. ಮೇಕೆದಾಟು ಯೋಜನೆಗೆ ಕೇಂದ್ರದ ಒಪ್ಪಿಗೆಯನ್ನು ಗೌಡರೇ ಕೊಡಿಸಲಿ ಎಂದು ಹೇಳಿದ್ದಾರೆ. ಹಾಗಾದರೆ, ಈ ಕೆಲಸ ಗೌಡರಿಂದ ಮಾತ್ರ ಆಗುವುದು ಎಂದು ಅವರು ಒಪ್ಪಿಕೊಂಡ ಹಾಗಾಯಿತು. ಹಾಗಾದರೆ ಪಾದಯಾತ್ರೆ ಏತಕ್ಕೆ? ಆಡಳಿತಾತ್ಮಕ, ಕಾನೂನು ಹಾಗೂ ತಾಂತ್ರಿಕ ಅಂಶಗಳ ಆಧಾರದ ಮೇಲೆ ದೇವೇಗೌಡರಿಗೆ ಯಾವಾಗ ಏನು ಹೆಜ್ಜೆ ಇಡಬೇಕು ಎಂಬುದು ಚೆನ್ನಾಗಿ ಗೊತ್ತಿದೆ. ಅದು ಅನೇಕ ಯೋಜನೆಗಳಲ್ಲಿ ಸಾಬೀತಾಗಿದೆ. ಆ ಬಗ್ಗೆ ಸಿದ್ದರಾಮಯ್ಯ ಅವರು ಹೇಳಬೇಕಾದ ಅಗತ್ಯ ಇಲ್ಲ. ಹೀಗಿದ್ದರೂ ರಾಜ್ಯ ನೀರಾವರಿಗೆ ಹೆಚ್.ಡಿ.ದೇವೇಗೌಡರ ಕೊಡುಗೆಯನ್ನು ಉಪೇಕ್ಷಿಸಿ ಸುಳ್ಳುಗಳ ಮೂಲಕ ಜನರಿಗೆ ತಪ್ಪು ಮಾಹಿತಿ ನೀಡುವುದು ರಾಜ್ಯಕ್ಕೆ ಮಾಡುವ ದ್ರೋಹ. ಇನ್ನಾದರೂ ಸುಳ್ಳು ಹೇಳುವುದು ಬಿಟ್ಟರೆ ಒಳಿತು. ಇಲ್ಲವಾದರೆ ಜನರೇ ಸುಳ್ಳಯ್ಶನ ನಾಲಿಗೆಗೆ ಬುದ್ಧಿ ಕಲಿಸಲಿದ್ದಾರೆ. ಪಾದಯಾತ್ರೆಯಿಂದ ಮೇಕೆದಾಟು ಯೋಜನೆಗೆ ಚಿಕ್ಕಾಸು ಉಪಯೋಗವಿಲ್ಲ. ಆ ಪಾದಯಾತ್ರೆಯ ಪೆಟ್ಟು ಜನರ ಮೇಲೆ ಬೀಳಲಿದೆ. ಅದರ ತೀವ್ರತೆ ಗೊತ್ತಾದ ಮೇಲೆ ಮುಂದೆ ಜನರೇ ಕಾಂಗ್ರೆಸ್ ನಾಯಕರ ಮುಖಕ್ಕೆ ಮಂಗಳಾರತಿ ಮಾಡಲಿದ್ದಾರೆ ಎಂದು ಟೀಕಿಸಿದ್ದಾರೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.