ಕರ್ನಾಟಕಕ್ಕೆ ಸಂಬಂಧಪಟ್ಟ ಮೊದಲ ಕಡತಕ್ಕೆ ಎಚ್ಡಿಕೆ ಸಹಿ
Team Udayavani, Jun 12, 2024, 11:34 PM IST
ಬೆಂಗಳೂರು: ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿ ಅಧಿಕಾರ ಸ್ವೀಕರಿಸಿರುವ ಎಚ್.ಡಿ. ಕುಮಾರಸ್ವಾಮಿ ಅವರು ಮೊದಲ ಕಡತಕ್ಕೆ ಸಹಿ ಹಾಕಿದ್ದು, ಇದು ಕರ್ನಾಟಕಕ್ಕೆ ಸಂಬಂಧಪಟ್ಟ ದೇವದಾರಿ ಅದಿರು ಗಣಿಗಾರಿಕೆ ಯೋಜನೆಗೆ ಸಂಬಂಧಪಟ್ಟಿರುವುದು ವಿಶೇಷ.
ಬಳ್ಳಾರಿ ಜಿಲ್ಲೆಯಲ್ಲಿ ಉದ್ದೇಶಿತ ದೇವದಾರಿ ಗಣಿಗಾರಿಕೆ ಯೋಜನೆಯನ್ನು ಕುದುರೆಮುಖ ಕಬ್ಬಿಣ ಅದಿರು ಕಂಪೆನಿ ಜಾರಿ ಮಾಡಲಿದೆ. ಕರ್ನಾಟಕ ಸರಕಾರ ಕೂಡ ಈ ಕಡತಕ್ಕೆ ಒಪ್ಪಿಗೆ ಕೊಡಬೇಕು. ಈ ಕಡತಕ್ಕೆ ಕೇಂದ್ರದ ಹಣಕಾಸು ಇಲಾಖೆ ಅನುಮೋದನೆ ಲಭಿಸಬೇಕಿದೆ. ಹಲವು ದಿನಗಳಿಂದ ಈ ಕಡತ ಬಾಕಿ ಬಿದ್ದಿತ್ತು. ಉದ್ಯೋಗ ಭವನದ ಉಕ್ಕು ಸಚಿವಾಲಯದ ಅಧಿಕಾರಿಗಳ ಜತೆ ಸಮಾಲೋಚನೆ ನಡೆಸಿದ ಅನಂತರ ಕಡತಕ್ಕೆ ಸಹಿ ಹಾಕಿದರು. ಉಕ್ಕು ಸಚಿವಾಲಯದ ಕಾರ್ಯದರ್ಶಿ ನಾಗೇಂದ್ರನಾಥ ಸಿನ್ಹಾ ಅವರೊಂದಿಗೆ ಈ ಬಗ್ಗೆ ವ್ಯಾಪಕ ಚರ್ಚೆ ನಡೆಸಿದ ಬಳಿಕವೇ ಕುಮಾರಸ್ವಾಮಿ ಈ ನಿರ್ಧಾರ ತೆಗೆದುಕೊಂಡರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.