ನಾಸ್ಕಾಂ ಜತೆ ಉನ್ನತ ಶಿಕ್ಷಣ ಪರಿಷತ್ ಒಡಂಬಡಿಕೆ


Team Udayavani, Oct 12, 2021, 1:33 PM IST

ನಾಸ್ಕಾಂ ಜತೆ ಉನ್ನತ ಶಿಕ್ಷಣ ಪರಿಷತ್ ಒಡಂಬಡಿಕೆ

ಬೆಂಗಳೂರು: ಉದ್ಯಮರಂಗವು ನಿರೀಕ್ಷಿಸುವಂತಹ ಕೌಶಲ್ಯಗಳನ್ನು ವಿದ್ಯಾರ್ಥಿಗಳಲ್ಲಿ ಬೆಳೆಸುವ ಮಹತ್ವಾಕಾಂಕ್ಷೆಯಿಂದ ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಇಂದು ನಾಸ್ಕಾಂ (ನ್ಯಾಷನಲ್ ಅಸೋಸಿಯೇಷನ್ ಆಫ್ ಸಾಫ್ಟ್ವೇರ್ ಅಂಡ್ ಸರ್ವೀಸ್ ಕಂಪನೀಸ್) ಜೊತೆ ಒಡಂಬಡಿಕೆಗೆ ಸಹಿ ಹಾಕಿತು.

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಇದಕ್ಕೆ ಅಂಕಿತ ಹಾಕಲಾಯಿತು.

ಬಳಿಕ ಮಾತನಾಡಿದ ಸಚಿವರು, ಒಡಂಬಡಿಕೆಯು ರಾಜ್ಯದ ಎಲ್ಲ ಸರಕಾರಿ ಮತ್ತು ಖಾಸಗಿ ಕಾಲೇಜು/ ವಿಶ್ವವಿದ್ಯಾಲಯಗಳಲ್ಲಿ ಓದುವ ವಿದ್ಯಾರ್ಥಿಗಳಿಗೆ ಅನ್ವಯವಾಗಲಿದೆ. ಇದರಿಂದ ಪ್ರತೀವರ್ಷ 5 ಲಕ್ಷ ವಿದ್ಯಾರ್ಥಿಗಳಿಗೆ ಮತ್ತು ಬೋಧಕರಿಗೆ ಲಾಭವಾಗಲಿದೆ ಎಂದು ಹೇಳಿದರು.

ಈ ಉಪಕ್ರಮದಿಂದಾಗಿ ನಾಸ್ಕಾಂನ `ಫ್ಯೂಚರ್ ಸ್ಕಿಲ್ಸ್ ಪ್ರೈಮ್’ ವೇದಿಕೆಯಲ್ಲಿರುವ ಕೌಶಲ್ಯಾಭಿವೃದ್ಧಿ ಕೋರ್ಸುಗಳು ರಾಜ್ಯದ ಪದವಿ ವಿದ್ಯಾರ್ಥಿಗಳಿಗೆ ಮತ್ತು ಬೋಧಕರಿಗೆ ಆನ್-ಲೈನ್ ಮೂಲಕ ಸುಲಭವಾಗಿ ಲಭ್ಯವಾಗಲಿವೆ. ಈ ಒಡಂಬಡಿಕೆಯಲ್ಲಿ ಗುಣಮಟ್ಟದಿಂದ ಕೂಡಿರುವ ಕೋರ್ಸುಗಳು, ಬೋಧಕ ಸಿಬ್ಬಂದಿಗೆ ತರಬೇತಿ ಮತ್ತು ಮೂಲಸೌಲಭ್ಯ ಸಂಪನ್ಮೂಲಗಳ ಅಭಿವೃದ್ಧಿಗೆ ಆದ್ಯ ಗಮನ ಕೊಡಲಾಗಿದೆ ಎಂದರು.

ಮೂರು ವರ್ಷಕ್ಕೆ ಮೂರು ಕೋರ್ಸ್ :

ಈ ಒಡಂಬಡಿಕೆಯ ಫಲವಾಗಿ, ಕಂಪ್ಯೂಟರ್ ವಿಜ್ಞಾನವನ್ನು ಹೊರತುಪಡಿಸಿ ಬೇರೆ ವಿಭಾಗಗಳಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತು ಬೋಧಕರಿಗೆ ಪದವಿಯ ಮೊದಲನೇ ವರ್ಷದಲ್ಲಿ ಡಿಜಿಟಲ್ ಫ್ಲೂಯೆನ್ಸಿ, ಎರಡನೇ ವರ್ಷದಲ್ಲಿ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಎಐ) ಮತ್ತು ಮೂರನೇ ವರ್ಷದಲ್ಲಿ ಸೈಬರ್ ಸೆಕ್ಯುರಿಟಿ ಕೋರ್ಸುಗಳು ಲಭ್ಯವಾಗಲಿದ್ದು, ಇವುಗಳ ಕಲಿಕೆ ಕಡ್ಡಾಯವಾಗಿದೆ. ಈ ಕೋರ್ಸುಗಳನ್ನು ಮೈಕ್ರೋಸಾಫ್ಟ್ ಮತ್ತು ಸಿಸ್ಕೋ ಕಂಪನಿಗಳು ರೂಪಿಸಿದ್ದು, ಇವುಗಳ ಮೂಲಕ ವಿದ್ಯಾರ್ಥಿಗಳಿಗೆ ಕೌಶಲ್ಯಗಳನ್ನು ಕಲಿಸಲಾಗುವುದು. ಇದನ್ನು ಕಲಿಯಲು ಯಾವುದೇ ಶುಲ್ಕದ ಹೊರೆ ಇರುವುದಿಲ್ಲ ಎಂದು ಸಚಿವರು ವಿವರಿಸಿದರು.

ವಿದ್ಯಾರ್ಥಿಗಳು ತಮ್ಮ ಬಳಿ ಇರುವ ಟ್ಯಾಬ್ಲೆಟ್ ಮತ್ತು ಸ್ಮಾರ್ಟ್ ಫೋನುಗಳ ಮೂಲಕವೂ ಈ ಆನ್-ಲೈನ್ ಕೋರ್ಸುಗಳನ್ನು ಸುಲಭವಾಗಿ ಕಲಿಯಬಹುದು. ನಾಸ್ಕಾಂನ ಈ ಕೋರ್ಸುಗಳು ಎನ್ಎಸ್ ಕ್ಯೂಎಫ್ (ನ್ಯಾಷನಲ್ ಸ್ಕಿಲ್ಸ್ ಕ್ವಾಲಿಫಿಕೇಶನ್ ಫ್ರೇಂವರ್ಕ್) ರೂಪಿಸಿರುವ ಗುಣಮಟ್ಟ ಮಾನದಂಡಗಳಿಗೆ ಅನುಗುಣವಾಗಿವೆ ಎಂದು ಅಶ್ವತ್ಥ ನಾರಾಯಣ ನುಡಿದರು.

“ನೂತನ ರಾಷ್ಟ್ರೀಯ ಶಿಕ್ಷಣ ನೀತಿಯು ವಿದ್ಯಾರ್ಥಿಗಳಲ್ಲಿ ಉದ್ಯೋಗಕ್ಷೇತ್ರವು ಬೇಡುವಂತಹ ಕೌಶಲ್ಯಗಳನ್ನು ಬೆಳೆಸಲು ಒತ್ತು ಕೊಟ್ಟಿದೆ. ಇದರಂತೆ, ಭಾರತವನ್ನು ಪ್ರವರ್ಧಮಾನಕ್ಕೆ ಬರುತ್ತಿರುವ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಕೌಶಲ್ಯಪೂರ್ಣ ಪ್ರತಿಭೆಗಳ ತೊಟ್ಟಿಲನ್ನಾಗಿ ಮಾಡುವುದು ಕೇಂದ್ರ ಸರಕಾರದ ಆಶಯವಾಗಿದೆ. ಇದಕ್ಕೆ ಪೂರಕವಾಗಿ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು ಇಡೀ ದೇಶದಲ್ಲಿ ನಾಸ್ಕಾಂ ಜೊತೆ ಸೇರಿಕೊಂಡು ಇಂತಹ ಒಡಂಬಡಿಕೆಗಳಿಗೆ ಅವಕಾಶ ಮಾಡಿಕೊಟ್ಟಿದೆ. ಈ ಮೂಲಕ ರಾಜ್ಯದಲ್ಲೂ ಡಿಜಿಟಲ್ ಯುಗಕ್ಕೆ ಸಮರ್ಥವಾಗಿ ಪರಿವರ್ತನೆ ಹೊಂದಲಾಗುವುದು. ಇದಕ್ಕಾಗಿ ರಾಜ್ಯ ಸರಕಾರವು ಯಾವುದೇ ವೆಚ್ಚವನ್ನು ಮಾಡಬೇಕಾಗಿಲ್ಲ,’’ ಎಂದು ಅವರು ವಿವರಿಸಿದರು.

ದೇಶದ ಐ.ಟಿ. ಸೇವಾ ವಲಯವು ಈಗ ವರ್ಷಕ್ಕೆ 150 ಶತಕೋಟಿ ಡಾಲರ್ ವಹಿವಾಟು ನಡೆಸುತ್ತಿದೆ. ಇದು 2025ರ ಹೊತ್ತಿಗೆ 350 ಶತಕೋಟಿ ಡಾಲರ್ ವಹಿವಾಟು ನಡೆಸುವ ಮಟ್ಟಕ್ಕೆ ಬೆಳೆಯಲಿದೆ. ಈಗ ರಾಷ್ಟ್ರದಲ್ಲಿರುವ ಡಿಜಿಟಲ್ ಪ್ರತಿಭಾವಂತರಿಗಿಂತ ಎಂಟು ಪಟ್ಟು ಹೆಚ್ಚಿನ ಬೇಡಿಕೆ ಇದ್ದು, 2024ರ ಹೊತ್ತಿಗೆ ಇದು 20 ಪಟ್ಟು ಹೆಚ್ಚಾಗಲಿದೆ. ಇದನ್ನೆಲ್ಲ ಗಂಭೀರವಾಗಿ ಪರಿಗಣಿಸಿ, ಹೊಸ ಹೆಜ್ಜೆಗಳನ್ನು ಇಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

“ದೇಶದಲ್ಲಿ ಈಗ ಸಾಕಷ್ಟು ಉದ್ಯೋಗಗಳು ಲಭ್ಯವಾಗುತ್ತಿವೆ. ಆದರೆ, ಅದಕ್ಕೆ ಅರ್ಹರಾದ ಅಭ್ಯರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲ. ಇಂದು ತಂತ್ರಜ್ಞಾನದ ನೆರವಿಲ್ಲದೆ ಯಾವ ವೃತ್ತಿಯನ್ನೂ ಸಮರ್ಥವಾಗಿ ನಿರ್ವಹಿಸಲು ಸಾಧ್ಯವಿಲ್ಲ. ಇದನ್ನು ಮನಗಂಡು, ನಾವು ಸಕಾರಾತ್ಮಕವಾಗಿ ಇಂತಹ ಹೆಜ್ಜೆಗಳನ್ನು ಇಡುತ್ತಿದ್ದೇವೆ. ಎನ್ಇಪಿ ಜಾರಿಯಲ್ಲಿ ಕರ್ನಾಟಕವು ರಾಜ್ಯಗಳಿಗಿಂತ ಮುಂಚೂಣಿಯಲ್ಲಿದೆ,’’ ಎಂದು ಅವರು ಹೇಳಿದರು.

ನಾಸ್ಕಾಂ ಪರವಾಗಿ ನವನೀತ್ ಸಮೈಯಾರ್ ಮತ್ತು ದಿನೇಶ್ ಕುಮಾರ್ ಪಾಣಿಗ್ರಾಹಿ ಇದ್ದು, ಒಪ್ಪಂದ ಪತ್ರಗಳನ್ನು ವಿನಿಮಯ ಮಾಡಿಕೊಂಡರು.

ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ಬಿ.ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಪ್ರೊ. ಗೋಪಾಲಕೃಷ್ಣ ಜೋಶಿ, ಆಡಳಿತಾಧಿಕಾರಿ ಡಾ.ಟಿ.ಎನ್.ತಾಂಡವೇಗೌಡ ಈ ಸಂದರ್ಭದಲ್ಲಿ ಉಪಸ್ಥಿತರಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.