NIA: ಹಿಂದೂ ಮುಖಂಡರ ಹತ್ಯೆ ಸಂಚು ಕೇಸ್; ಶಂಕಿತ ಉಗ್ರರ ವಿರುದ ಚಾರ್ಜ್ಶೀಟ್
Team Udayavani, Aug 20, 2024, 10:09 AM IST
ಬೆಂಗಳೂರು: ಅಲ್-ಹಿಂದ್ ಸಂಘಟನೆ ಕಟ್ಟಿಕೊಂಡು ಹಿಂದೂ ಮುಖಂಡರು ಹಾಗೂ ಪೊಲೀಸ್ ಅಧಿಕಾರಿಗಳ ಹತ್ಯೆಗೆ ಸಂಚು ರೂಪಿಸಿದ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ಅಧಿಕಾರಿಗಳು ಇಬ್ಬರು ಶಂಕಿತರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ್ದಾರೆ.
ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಶಿವಮೊಗ್ಗದ ತೀರ್ಥಹಳ್ಳಿಯ ಅಬ್ದುಲ್ ಮತೀನ್ ತಾಹಾ ಮತ್ತು ಮುಸಾವೀರ್ ಹುಸೇನ್ ಶಾಜೀಬ್ ವಿರುದ್ಧ ಸೋಮ ವಾರ ಎನ್ಐಎ ವಿಶೇಷ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಕೆಯಾಗಿದೆ. ಈ ಮೂಲಕ ಇದೇ ಪ್ರಕರಣದಲ್ಲಿ ಇದುವರೆಗೂ 18 ಮಂದಿ ಶಂಕಿತರ ವಿರುದ್ಧ ಚಾರ್ಜ್ಶೀಟ್ ಸಲ್ಲಿಸಿದಂತಾಗಿದೆ.
ಶಂಕಿತರ ವಿರುದ್ಧ 2020ರ ಜನವರಿಯಲ್ಲಿ ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನಿಂದ ಆರೋಪಿಗಳು ತಲೆಮರೆಸಿಕೊಂಡಿದ್ದು, 2024ರ ಮಾರ್ಚ್ 1ರಂದು ನಡೆದ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದಲ್ಲಿ ಏಪ್ರಿಲ್ 12ರಂದು ಈ ಇಬ್ಬರು ಶಂಕಿತರನ್ನು ಪಶ್ಚಿಮ ಬಂಗಾಳದ ಕೊಲ್ಕೊತ್ತಾದಲ್ಲಿ ಬಂಧಿಸಲಾಗಿತ್ತು. ಈ ಹಿನ್ನೆಲೆಯಲ್ಲಿ 2020ರಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಈ ಇಬ್ಬರು ಶಂಕಿತರ ವಿಚಾರಣೆ ನಡೆಸಿದ್ದು, ಇದೀಗ ಅವರ ಹೇಳಿಕೆ ಆಧರಿಸಿ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಎನ್ಐಎ ಮೂಲಗಳು ತಿಳಿಸಿವೆ.
ಇನ್ನು ಎನ್ಐಎ ತನಿಖೆಯಲ್ಲಿ ಅಬ್ದುಲ್ ಮತೀನ್ ತಾಹಾ ಮೂಲಭೂತವಾದಿಯಾ ಗಿದ್ದು, ಮುಸಾ ವೀರ್ ಹುಸೇನ್ ಶಾಜೀಬ್ ಹಾಗೂ ಇತರ ರನ್ನು 2018ರಲ್ಲಿ ಅಲ್-ಹಿಂದ್ ಸಂಘಟನೆಗೆ ಸೇರಿಸಿಕೊಂಡಿದ್ದು, ಈ ಸಂದರ್ಭದಲ್ಲಿ ಆನ್ ಲೈನ್ ಹ್ಯಾಂಡ್ಲರ್ ಭಾಯಿ ಅಲಿಯಾಸ್ ಲ್ಯಾಪ್ಟಾಪ್ ಭಾಯ್ ಎಂಬಾತನನ್ನು ಪರಿಚಯಿಸಿದ್ದ. ಅಲ್ಲದೆ, ಆಲ್ಲೈನ್ ಹ್ಯಾಂಡ್ಲರ್ ಭಾಯಿ ಅನ್ನು ಅಲ್-ಹಿಂದ್ ಸಂಘಟನೆಯ ದಕ್ಷಿಣ ಭಾರತದ ಮುಖಂಡ ಮೆಹಬೂಬ್ ಪಾಷಾನಿಗೂ ತಾಹಾ ಪರಿಚಯಿಸಿದ್ದ. ಈ ಮೆಹಬೂಬ್ ಪಾಷಾ, ಸಂಘಟನೆ ಆನ್ಲೈನ್ ಹ್ಯಾಂಡ್ಲರ್ ಅನ್ನು ಖ್ವಾಜಾ ಮೊಹಿನುದ್ದಿನ್ ಗೂ ಪರಿಚಯಿಸಿಕೊಟ್ಟಿದ್ದ ಎಂದು ಎನ್ಐಎ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Test Cricket : ಮೆಂಡಿಸ್ದ್ವಯರಿಂದ ಚೇತರಿಸಿಕೊಂಡ ಶ್ರೀಲಂಕಾ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
Daily Horoscope: ಮನೋಬಲವನ್ನು ಹೆಚ್ಚಿಸಿ ಕೊಂಡಷ್ಟೂ ಹೆಚ್ಚು ಅನುಕೂಲ
Health Department: ಮಂಗನ ಕಾಯಿಲೆ ಆತಂಕ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ನಿಗಾ
Karnataka; ರಾಜ್ಯಪಾಲರ ಅಧಿಕಾರಕ್ಕೆ ರಾಜ್ಯ ಸರಕಾರ ಅಂಕುಶ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.