15 ಶಾಸಕರನ್ನು ವಾಪಸ್‌ ಕರೆ ತರಲು ಎಚ್‌.ಕೆ.ಪಾಟೀಲ್‌ ಮನವಿ


Team Udayavani, Jul 20, 2019, 3:00 AM IST

005

ವಿಧಾನಸಭೆ: ಮುಂಬೈಗೆ ತೆರಳಿರುವ ಶಾಸಕರನ್ನು ಕಲಾಪಕ್ಕೆ ವಾಪಸ್‌ ಕರೆಸುವಂತೆ ಕಾಂಗ್ರೆಸ್‌ ಹಿರಿಯ ಸದಸ್ಯ ಎಚ್‌.ಕೆ. ಪಾಟೀಲ್‌ ಸದನದಲ್ಲಿ ಸ್ಪೀಕರ್‌ಗೆ ಮನವಿ ಮಾಡಿದ್ದು, ಸದನದಲ್ಲಿ ಆಡಳಿತ ಹಾಗೂ ಪ್ರತಿಪಕ್ಷಗಳ ನಾಯಕರ ಪರ-ವಿರೋಧದ ಚರ್ಚೆಗೆ ಗ್ರಾಸವಾಯಿತು.

ರಾಜ್ಯದ 15 ಶಾಸಕರು ಮುಂಬೈಗೆ ತೆರಳಿ ತಮಗೆ ರಕ್ಷಣೆ ಇಲ್ಲ ಎಂದು ಹೇಳುತ್ತಿರುವುದು ಮಾಧ್ಯಮಗಳಲ್ಲಿ ಬರುತ್ತಿದೆ. ಅಲ್ಲದೇ ಬೇರೆ ರಾಜ್ಯದಲ್ಲಿ ನಮ್ಮ ಶಾಸಕರು ಹೋಗಿ ಹೋಟೆಲ್‌ನಲ್ಲಿ ಕೂರುವುದು ನಮ್ಮ ಸದನದ ಗೌರವಕ್ಕೆ ಧಕ್ಕೆ ತಂದಂತಾಗುತ್ತದೆ. ಹೀಗಾಗಿ, ರಾಜ್ಯದ ಪೊಲೀಸ್‌ ಅಧಿಕಾರಿಗಳನ್ನೋ ಅಥವಾ ವಿಧಾನಸಭೆಯ ಹಿರಿಯ ಅಧಿಕಾರಿಗಳನ್ನೋ ಕಳುಹಿಸಿ, ಅವರಿಗೆ ರಾಜ್ಯದಲ್ಲಿ ಎಲ್ಲ ರೀತಿಯ ರಕ್ಷಣೆ ನೀಡುವ ಭರವಸೆ ನೀಡಿ ಕರೆದುಕೊಂಡು ಬರುವಂತೆ ಸೂಚಿಸುವಂತೆ ಸ್ಪೀಕರ್‌ಗೆ ಮನವಿ ಮಾಡಿದರು.

ಅವರ ಮನವಿಗೆ ಬಿಜೆಪಿಯ ಜೆ.ಸಿ.ಮಾಧುಸ್ವಾಮಿ ಆಕ್ಷೇಪ ವ್ಯಕ್ತಪಡಿಸಿ, ಎಚ್‌.ಕೆ. ಪಾಟೀಲರು ಮಾಡುತ್ತಿರುವ ಮನವಿಗೂ, ವಿಶ್ವಾಸಮತ ಯಾಚನೆಗೂ ಯಾವುದೇ ಸಂಬಂಧವಿಲ್ಲ. ಅವರು ತಮಗೆ ಸದನಕ್ಕೆ ಹಾಜರಾಗುವಂತೆ ಒತ್ತಡ ಹೇರಲಾಗುತ್ತಿದೆ ಎಂದು ಸುಪ್ರೀಂಕೊರ್ಟ್‌ಗೆ ತೆರಳಿದ್ದಾರೆ. ಸುಪ್ರೀಂಕೋರ್ಟ್‌ ಕೂಡ ಅವರಿಗೆ ಒತ್ತಡ ಹೇರದಂತೆ ಆದೇಶ ನೀಡಿದೆ. ಹೀಗಾಗಿ ಅವರು ಸ್ವ ಇಚ್ಛೆಯಿಂದ ಬರದಿದ್ದರೆ, ಅವರನ್ನು ಒತ್ತಾಯದಿಂದ ಕರೆಸುವ ಪ್ರಯತ್ನ ಮಾಡುವುದು ಸಮಂಜಸವಲ್ಲ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಸಚಿವ ಡಿ.ಕೆ.ಶಿವಕುಮಾರ್‌, 15 ಶಾಸಕರು ನಮ್ಮ ಪಕ್ಷದವರು. ಅವರನ್ನು ಒತ್ತಾಯ ಪೂರ್ವಕವಾಗಿ ಅಲ್ಲಿಡಲಾಗಿದೆ. ಕಳೆದ 40 ವರ್ಷದಿಂದ ಅವರು ನಮ್ಮ ಪಕ್ಷದಲ್ಲಿದ್ದಾರೆ. ನಮ್ಮೊಂದಿಗೆ ರಾಜಕಾರಣ ಮಾಡಿದ್ದಾರೆ. ಹೀಗಾಗಿ, ಅವರನ್ನು ವಾಪಸ್‌ ಕರೆಸುವಂತೆ ಮನವಿ ಮಾಡಿದರು.

ಎರಡೂ ಕಡೆಯ ವಾದ ಆಲಿಸಿದ ಸ್ಪೀಕರ್‌, ಮುಂಬೈಗೆ ತೆರಳಿರುವ ಶಾಸಕರು ಯಾರೂ ತಮಗೆ ರಕ್ಷಣೆ ನೀಡುವಂತೆ ಪತ್ರ ಬರೆದಿಲ್ಲ ಹಾಗೂ ಶಾಸಕರ ಸಂಬಂಧಿಕರಿಂದಲೂ ದೂರು ಬಂದಿಲ್ಲ. ಹೀಗಾಗಿ, ಆ ಶಾಸಕರಿಗೆ ರಕ್ಷಣೆ ನೀಡುವ ಜವಾಬ್ದಾರಿ ನನ್ನದಲ್ಲ. ಒಂದು ವೇಳೆ ಸರ್ಕಾರಕ್ಕೆ ಯಾರಾದರೂ ದೂರು ನೀಡಿದ್ದರೆ, ಸರ್ಕಾರ ಅವರನ್ನು ವಾಪಸ್‌ ಕರೆ ತರುವ ಕೆಲಸ ಮಾಡಬಹುದು. ಯಾವುದೇ ದೂರು ಬಾರದೇ ಶಾಸಕರಿಗೆ ರಕ್ಷಣೆ ನೀಡುವ ಜವಾಬ್ದಾರಿ ನನ್ನದಲ್ಲ ಎಂದು ರೂಲಿಂಗ್‌ ನೀಡಿದರು.

ಸ್ಪೀಕರ್‌ ರೂಲಿಂಗ್‌ ನೀಡಿದ ನಂತರ ಸಚಿವ ಡಿ.ಕೆ.ಶಿವಕುಮಾರ್‌, ಮುಂಬೈಗೆ ತೆರಳಿರುವ ಶಾಸಕರು ನಮ್ಮ ಪಕ್ಷದವರು. ಅವರು ನಮ್ಮ ಸ್ನೇಹಿತರು. ನಾವು ಮನವಿ ಮಾಡುತ್ತಿದ್ದೇವೆ. ಅವರನ್ನು ವಾಪಸ್‌ ಕರೆಸಿ ಎಂದು ಮಾಡಿದ ಮನವಿಯನ್ನು ಸ್ಪೀಕರ್‌ ಪುರಸ್ಕರಿಸಲಿಲ್ಲ.

ಟಾಪ್ ನ್ಯೂಸ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

Devegowda

Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್‌.ಡಿ.ದೇವೇಗೌಡ

Sathish-rajanna-mahadevappa

Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್‌ ಲೀಡರ್‌ʼ ಅಸ್ತ್ರ

Jayalalittha-Golds

Jayalalithaa Assets: ಮಾಜಿ ಸಿಎಂ ಜಯಲಲಿತಾ 27 ಕೆ.ಜಿ. ಚಿನ್ನಾಭರಣ ತಮಿಳುನಾಡು ವಶಕ್ಕೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.