Construction ಕಾರ್ಮಿಕರಿಗೆ ವಸತಿ ಭಾಗ್ಯ: 2 ಲಕ್ಷ ರೂ. ಶೂನ್ಯ ಬಡ್ಡಿ ಸಾಲ!

ನಿರ್ಮಾಣ ಕಾರ್ಮಿಕರಿಗೆ ಸಿಹಿಸುದ್ದಿ ; ಧಾರವಾಡ, ಬಳ್ಳಾರಿಗಳಲ್ಲಿ ಯೋಜನೆ ಪ್ರಾಯೋಗಿಕ ಅನುಷ್ಠಾನ

Team Udayavani, Aug 8, 2024, 1:05 AM IST

Construction ಕಾರ್ಮಿಕರಿಗೆ ವಸತಿ ಭಾಗ್ಯ: 2 ಲಕ್ಷ ರೂ. ಶೂನ್ಯ ಬಡ್ಡಿ ಸಾಲ!

ಬೆಂಗಳೂರು: ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ವಸತಿ ಸೌಲಭ್ಯ ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ. ಇದಕ್ಕಾಗಿ ಶೂನ್ಯಬಡ್ಡಿದರದಲ್ಲಿ 2 ಲಕ್ಷ ರೂಪಾಯಿವರೆಗೆ ಸಾಲ ನೀಡಲು ಯೋಜಿಸಿದೆ.ಇದಕ್ಕೆ ಪೂರಕವಾಗಿ ಫ‌ಲಾನುಭವಿಗಳಿಗೆ ಸಾಲ ನೀಡಲು ಬ್ಯಾಂಕ್‌ಗಳೂ ಒಪ್ಪಿದ್ದು, ಪ್ರಾಯೋಗಿಕವಾಗಿ ಧಾರವಾಡ ಹಾಗೂ ಬಳ್ಳಾರಿಯಲ್ಲಿ ಅನು ಷ್ಠಾನಕ್ಕೆ ತರಲಾಗುವುದು.

ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅಧ್ಯಕ್ಷತೆಯಲ್ಲಿ ಬುಧವಾರ ಬೆಂಗಳೂರಿನಲ್ಲಿ ನಡೆದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಶೂನ್ಯ ಬಡ್ಡಿ ಸಾಲ
ಆರ್ಥಿಕವಾಗಿ ಹಿಂದುಳಿದ ವರ್ಗದವರಿಗಾಗಿಯೇ ಕೇಂದ್ರ ಹಾಗೂ ರಾಜ್ಯ ಸರ್ಕಾರದಲ್ಲಿ ವಿವಿಧ ವಸತಿ ಯೋಜನೆಗಳಿದ್ದು, ಅಂತಹ ಯೋಜನೆಗಳನ್ನೇ ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಿಗೆ ಕೊಡಲಾಗುತ್ತದೆ. ಕಾರ್ಮಿಕ ಮಂಡಳಿ ಯಲ್ಲಿ 8 ಸಾವಿರ ಕೋಟಿ ರೂ.ಗೂ ಹೆಚ್ಚಿನ ಹಣವಿದ್ದು, ಇದನ್ನು ಕಾರ್ಮಿಕರ ವಸತಿ ಯೋಜನೆಗೆ ಬಳಕೆ ಮಾಡಿಕೊಳ್ಳಬಹುದು ಎಂಬ ಸಲಹೆಗಳು ಸಭೆಯಲ್ಲಿ ವ್ಯಕ್ತವಾಗಿವೆ.

ಕೇಂದ್ರ ಸರಕಾರ 2ರಿಂದ 2.50 ಲಕ್ಷ ರೂ. ವರೆಗೆ ಫ‌ಲಾನುಭವಿಗಳಿಗೆ ನೆರವು ನೀಡಲಿದ್ದು, ಮಂಡಳಿ ವತಿಯಿಂದ 2 ಲಕ್ಷ ರೂ. ವರೆಗೆ ಶೂನ್ಯಬಡ್ಡಿದರದಲ್ಲಿ ಸಾಲ ನೀಡಲು ತೀರ್ಮಾನಿಸಿದೆ. ರಾಜ್ಯ ಸರಕಾರದ ಪಾಲಿನ ಜತೆಗೆ ಬಾಕಿ ಮೊತ್ತವನ್ನು ಫ‌ಲಾನುಭವಿ ಪಾವತಿಸಬೇಕಾಗುತ್ತದೆ. ನಿಗದಿತ ಗಡುವಿನೊಳಗೆ ಸಾಲದ ಅಸಲನ್ನು ಫ‌ಲಾನುಭವಿಗಳು ಮಂಡಳಿಗೆ ಹಿಂದಿರುಗಿಸಬೇಕಾಗುತ್ತದೆ. ಈ ಬಗ್ಗೆ ಸ್ಪಷ್ಟ ನಿಯಮಾವಳಿ ರೂಪಿಸುವಂತೆ ಅಧಿಕಾರಿಗಳಿಗೆ ಸಚಿವ ಸಂತೋಷ್‌ ಲಾಡ್‌ ಸೂಚಿಸಿದ್ದಾರೆ.

ಅಂಬೇಡ್ಕರ್‌ ಸೇವಾ ಕೇಂದ್ರ ಬಳಕೆ
ಮಂಡಳಿಯಲ್ಲಿ ಸುಮಾರು 20ಕ್ಕೂ ಹೆಚ್ಚು ಯೋಜನೆಗಳಿದ್ದು, ಎಲ್ಲ ಯೋಜನೆಗಳನ್ನು ಸಮಗ್ರಗೊಳಿಸುವ ಪ್ರಸ್ತಾವನೆ ಇದೆಯಲ್ಲದೆ, ಅರ್ಹ ಫ‌ಲಾನುಭವಿಗಳನ್ನು ಗುರುತಿಸುವುದೇ ದೊಡ್ಡ ಸವಾಲಾಗಿದೆ. ಇದುವರೆಗೆ 58 ಲಕ್ಷ ಇದ್ದ ಕಾರ್ಮಿಕ ಕಾರ್ಡ್‌ಗಳನ್ನು 38 ಲಕ್ಷಕ್ಕೆ ಇಳಿಸಿದ್ದು, ಹೊಸದಾಗಿ ಲಕ್ಷಾಂತರ ಅರ್ಜಿಗಳು ಬಂದಿವೆ. ಹೀಗಾಗಿ ಅಂಬೇಡ್ಕರ್‌ ಸೇವಾ ಕೇಂದ್ರಗಳಿಗೆ ಫ‌ಲಾನುಭವಿಗಳನ್ನು ಗುರುತಿಸುವ ಹೊಣೆ ನೀಡಲಾಗಿದೆ. ಇದಲ್ಲದೆ ಇತ್ತೀಚೆಗೆ ಜಾರಿಗೆ ತಂದಿರುವ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪಿಸುವ ಕಾನೂನಿಗೆ ಸಭೆಯಲ್ಲಿ ಮೆಚ್ಚುಗೆ ವ್ಯಕ್ತವಾಗಿದ್ದು, ಕಾರ್ಮಿಕ ಕಲ್ಯಾಣದ ಸಲುವಾಗಿ ಟ್ರೇಡ್‌ ಯೂನಿಯನ್‌ಗಳೂ ಅನೇಕ ಸಲಹೆ ನೀಡಿವೆ.

2,000 ಮಂದಿಗೆ ಲಾಭ
ಮಂಡಳಿಯ ನೋಂದಾಯಿತ ಕಾರ್ಮಿಕರಿಗೆ ವಸತಿ ಸೌಕರ್ಯ ಕಲ್ಪಿಸುವ ಯೋಜನೆಯನ್ನು ಧಾರವಾಡ ಹಾಗೂ ಬಳ್ಳಾರಿಯಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲು ಚಿಂತನೆ ನಡೆದಿದ್ದು, 1,500ರಿಂದ 2,000 ಕಾರ್ಮಿಕರಿಗೆ ಶೂನ್ಯಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವ ಯೋಜನೆ ಇದಾಗಿರಲಿದೆ. ಇದರಿಂದ 40 ಕೋಟಿ ರೂ. ಮಂಡಳಿಗೆ ಖರ್ಚು ಬರಲಿದೆ ಎಂದು ಅಂದಾಜಿಸಲಾಗಿದೆ.

ಕರ್ನಾಟಕ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ವಸತಿ ಯೋಜನೆ ಜಾರಿಗೆ ತರುವ ಬಗ್ಗೆ ಚಿಂತನೆಗಳು ನಡೆದಿದೆ. ಸರಕಾರದಲ್ಲಿ ಈಗಾಗಲೇ ಇರುವ ವಿವಿಧ ವಸತಿ ಯೋಜನೆಗಳಡಿ ಮನೆ ನಿರ್ಮಿಸಿಕೊಳ್ಳುವ ಫ‌ಲಾನುಭವಿಗಳಿಗೆ 2 ಲಕ್ಷ ರೂ. ವರೆಗೆ ಶೂನ್ಯಬಡ್ಡಿದರದಲ್ಲಿ ಸಾಲ ಸೌಲಭ್ಯ ನೀಡುವ ತೀರ್ಮಾನ ಮಾಡಲಾಗಿದೆ.
-ಸಂತೋಷ್‌ ಲಾಡ್‌, ಕಾರ್ಮಿಕ ಸಚಿವ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.